BREAKING NEWS

ಆಸ್ಪತ್ರೆಯಲ್ಲಿ ಬೆಡ್ ಕೊರತೆ : ಪುತ್ರನನ್ನು ಕಳೆದುಕೊಂಡ ಬಿಜೆಪಿಯ ಮಾಜಿ ಸಂಸದ

ಲಕ್ನೋ : ಎಮೆರ್ಜೆನ್ಸಿ ವಾರ್ಡ್‍ನಲ್ಲಿ ಬೆಡ್ ಕೊರತೆಯಿಂದಾಗಿ ಬಿಜೆಪಿಯ ಮಾಜಿ ಸಂಸದನ ಪುತ್ರ ಮೃತಪಟ್ಟ ಘಟನೆ ಉತ್ತರಪ್ರದೇಶ ಲಕ್ನೋದ ಎಸ್‍ಜಿಪಿಜಿಐ ಆಸ್ಪತ್ರೆಯಲ್ಲಿ ನಡೆದಿದೆ.

ಮೃತನನ್ನು ಪ್ರಕಾಶ್ ಮಿಶ್ರಾ (41) ಎಂದು ಗುರುತಿಸಲಾಗಿದ್ದು, ಇವರು ಭಾರತೀಯ ಜನತಾ ಪಕ್ಷದ ಮಾಜಿ ಸಂಸದ ಭೈರೋನ್ ಪ್ರಸಾದ್ ಮಿಶ್ರಾ ಪುತ್ರ.

ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿದ್ದ ಮಿಶ್ರಾ ಅವರನ್ನು ಸೋಮವಾರ ರಾತ್ರಿ 11 ಗಂಟೆಗೆ ಎಸ್‍ಜಿಪಿಜಿಐ ತುರ್ತು ವಿಭಾಗಕ್ಕೆ ಕರೆದೊಯ್ಯಲಾಯಿತು. ಆದರೆ ಅಲ್ಲಿ ಬೆಡ್ ಕೊರತೆಯಿಂದಾಗಿ ತುರ್ತು ಚಿಕಿತ್ಸೆ ಸಿಗಲಿಲ್ಲ. ಹೀಗಾಗಿ ಆಸ್ಪತ್ರೆಗೆ ಹೋದ ಸ್ವಲ್ಪ ಸಮಯದ ಬಳಿಕ ಮಗ ಮೃತಪಟ್ಟಿರುವುದಾಗಿ ಪ್ರಸಾದ್ ಮಿಶ್ರಾ ದೂರಿದ್ದಾರೆ. ಅಲ್ಲದೆ ಮಗನ ಶವದೊಂದಿಗೆ ತುರ್ತು ವಾರ್ಡ್‍ನ ಹೊರಗೆ ಪ್ರತಿಭಟನೆ ಮಾಡಿದರು.

ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಪ್ರಸಾದ್‌ ಮಿಶ್ರಾ ಅವರು, ನಾನು ನನ್ನ ಮಗನನ್ನು ಕಳೆದುಕೊಂಡಿದ್ದೇನೆ ಎಂದು ಗೋಳಾಡಿದರು. ನನ್ನ ನಂತರ ಸುಮಾರು 20-25 ಜನರು ಚಿಕಿತ್ಸೆ ಪಡೆದರು. ನಾನು ಪ್ರತಿಭಟನೆಗೆ ಕುಳಿತಾಗ ಎಲ್ಲರೂ ವೈದ್ಯನ ಬಗ್ಗೆ ದೂರು ನೀಡುತ್ತಿದ್ದರು. ಆ ವೈದ್ಯನಿಗೆ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.

ಆಸ್ಪತ್ರೆ ಮುಖ್ಯಸ್ಥ ಡಾ.ಆರ್.ಕೆ.ಧಿಮಾನ್ ಮಾತನಾಡಿ, ಆಸ್ಪತ್ರೆಗೆ ದಾಖಲಿಸಿದಾಗ ರೋಗಿಯನ್ನು ಐಸಿಯುಗೆ ಕರೆದೊಯ್ಯಲು ವೈದ್ಯರು ಹೇಳಿದರು. ಆದರೆ ಅಲ್ಲಿ ಬೆಡ್‍ಗಳು ಲಭ್ಯವಿಲ್ಲ ಎಂದು ರೋಗಿ ಕಡೆಯವರಿಗೆ ತಿಳಿಸಿದ್ದಾರೆ. ಯಾಕೆ ಬೆಡ್ ಇಲ್ಲ ಎಂದು ಹೇಳಿದರು ತಿಳಿದಿಲ್ಲ. ಈ ಸಂಬಂಧ ನಾವು ಸಮಿತಿಯನ್ನು ರಚಿಸಿದ್ದೇವೆ. ನಾವು ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಸದ್ಯ ವೈದ್ಯರನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿಸಿದರು.

ಘಟನೆಯ ಕುರಿತು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಪ್ರತಿಕ್ರಿಯಿಸಿ, ರಾಜ್ಯದ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದು ಆಸ್ಪತ್ರೆಯ ತಪ್ಪಲ್ಲ. ಆದರೆ ಇದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಪ್ಪು. ಆಸ್ಪತ್ರೆಗೆ ಏಕೆ ಬಜೆಟ್ ನೀಡುತ್ತಿಲ್ಲ ಎಂದು ಪ್ರಶ್ನಿಸಿದರು.

ಘಟನೆ ಸಂಬಂಧ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಕಟ್ಟುನಿಟ್ಟಿನ ಕ್ರಮದ ಭರವಸೆ ನೀಡಿದ್ದಾರೆ. ಅಲ್ಲದೆ ಮಾಜಿ ಸಂಸದನ ಮನೆಗೆ ಭೇಟಿ ಮಾಡಿದ್ದಾರೆ. ಇದೊಂದು ದುರದೃಷ್ಟಕರ ಘಟನೆಯಾಗಿದೆ. ಈ ಸಂಬಂಧ ತ್ರಿಸದಸ್ಯ ಸಮಿತಿಯನ್ನು ರಚಿಸಲಾಗಿದ್ದು, ಈ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಲಾಗುವುದು ಎಂದರು.

lokesh

Recent Posts

ಬಿಜೆಪಿ ಶಾಸಕ ಭೈರತಿ ಬಸವರಾಜ್‌ ಸಿಐಡಿ ಕಸ್ಟಡಿಗೆ

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಬಿಜೆಪಿ ಶಾಸಕ ಭೈರತಿ ಬಸವರಾಜ್‌ ಅವರನ್ನು ಸಿಐಡಿ ಕಸ್ಟಡಿಗೆ ವಹಿಸಿ…

18 mins ago

ಸಾಲೂರು ಮಠಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪತ್ನಿ ಉಷಾ ಶಿವಕುಮಾರ್‌ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿಯ ಜಾತ್ರಾ…

28 mins ago

ನಂಜನಗೂಡು ತಾಯಿ-ಮಕ್ಕಳ ಆಸ್ಪತ್ರೆಗೆ ಶಾಸಕ ದರ್ಶನ್ ದಿಢೀರ್ ಭೇಟಿ, ಪರಿಶೀಲನೆ

ನಂಜನಗೂಡು: ನಂಜನಗೂಡು ಪಟ್ಟಣದಲ್ಲಿರುವ ಸರ್ಕಾರಿ ತಾಯಿ-ಮಕ್ಕಳ ಆಸ್ಪತ್ರೆಗೆ ಕಳೆದ ತಡರಾತ್ರಿ ನಂಜನಗೂಡು ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ದಿಢೀರ್…

35 mins ago

ಯತೀಂದ್ರ ಸಿದ್ದರಾಮಯ್ಯ ನಮ್ಮ ಹೈಕಮಾಂಡ್:‌ ಗಣಿಗ ರವಿಕುಮಾರ್‌ ವ್ಯಂಗ್ಯ

ಮಂಡ್ಯ: ಯತೀಂದ್ರ ಸಿದ್ದರಾಮಯ್ಯ ಅವರು ನಮ್ಮ ಹೈಕಮಾಂಡ್.‌ ನಮಗೆ ಹೈಕಮಾಂಡ್‌ ನೋಟಿಸ್‌ ಕೊಡಬಹುದು. ಆದರೆ ಹೈಕಮಾಂಡ್‌ಗೆ ನಾವು ನೋಟಿಸ್‌ ಕೊಡಲು…

41 mins ago

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ: ಆರೋಗ್ಯ ಇಲಾಖೆಯಿಂದ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಚಳಿಯ ಅಬ್ಬರ, ಶೀತ ಸಂಪೂರ್ಣ ಕಡಿಮೆಯಾಗಿದ್ದು, ಒಣ ಹವೆಯ ಜೊತೆಗೆ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಳವಾಗುತ್ತಿದೆ. ಶಿವರಾತ್ರಿ…

44 mins ago

ಕೆಮಿಕಲ್‌ ಟ್ಯಾಂಕ್‌ ಸ್ಫೋಟ: ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವು

ಮಂಡ್ಯ: ಕೆಮಿಕಲ್‌ ಟ್ಯಾಂಕ್‌ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆ ಬಸರಾಳು ಸಮೀಪದ ಕಾರೆಕಟ್ಟೆ ಬಳಿ ಕೀರ್ತಿ…

46 mins ago