BREAKING NEWS

ಆಸ್ಪತ್ರೆಯಲ್ಲಿ ಬೆಡ್ ಕೊರತೆ : ಪುತ್ರನನ್ನು ಕಳೆದುಕೊಂಡ ಬಿಜೆಪಿಯ ಮಾಜಿ ಸಂಸದ

ಲಕ್ನೋ : ಎಮೆರ್ಜೆನ್ಸಿ ವಾರ್ಡ್‍ನಲ್ಲಿ ಬೆಡ್ ಕೊರತೆಯಿಂದಾಗಿ ಬಿಜೆಪಿಯ ಮಾಜಿ ಸಂಸದನ ಪುತ್ರ ಮೃತಪಟ್ಟ ಘಟನೆ ಉತ್ತರಪ್ರದೇಶ ಲಕ್ನೋದ ಎಸ್‍ಜಿಪಿಜಿಐ ಆಸ್ಪತ್ರೆಯಲ್ಲಿ ನಡೆದಿದೆ.

ಮೃತನನ್ನು ಪ್ರಕಾಶ್ ಮಿಶ್ರಾ (41) ಎಂದು ಗುರುತಿಸಲಾಗಿದ್ದು, ಇವರು ಭಾರತೀಯ ಜನತಾ ಪಕ್ಷದ ಮಾಜಿ ಸಂಸದ ಭೈರೋನ್ ಪ್ರಸಾದ್ ಮಿಶ್ರಾ ಪುತ್ರ.

ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿದ್ದ ಮಿಶ್ರಾ ಅವರನ್ನು ಸೋಮವಾರ ರಾತ್ರಿ 11 ಗಂಟೆಗೆ ಎಸ್‍ಜಿಪಿಜಿಐ ತುರ್ತು ವಿಭಾಗಕ್ಕೆ ಕರೆದೊಯ್ಯಲಾಯಿತು. ಆದರೆ ಅಲ್ಲಿ ಬೆಡ್ ಕೊರತೆಯಿಂದಾಗಿ ತುರ್ತು ಚಿಕಿತ್ಸೆ ಸಿಗಲಿಲ್ಲ. ಹೀಗಾಗಿ ಆಸ್ಪತ್ರೆಗೆ ಹೋದ ಸ್ವಲ್ಪ ಸಮಯದ ಬಳಿಕ ಮಗ ಮೃತಪಟ್ಟಿರುವುದಾಗಿ ಪ್ರಸಾದ್ ಮಿಶ್ರಾ ದೂರಿದ್ದಾರೆ. ಅಲ್ಲದೆ ಮಗನ ಶವದೊಂದಿಗೆ ತುರ್ತು ವಾರ್ಡ್‍ನ ಹೊರಗೆ ಪ್ರತಿಭಟನೆ ಮಾಡಿದರು.

ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಪ್ರಸಾದ್‌ ಮಿಶ್ರಾ ಅವರು, ನಾನು ನನ್ನ ಮಗನನ್ನು ಕಳೆದುಕೊಂಡಿದ್ದೇನೆ ಎಂದು ಗೋಳಾಡಿದರು. ನನ್ನ ನಂತರ ಸುಮಾರು 20-25 ಜನರು ಚಿಕಿತ್ಸೆ ಪಡೆದರು. ನಾನು ಪ್ರತಿಭಟನೆಗೆ ಕುಳಿತಾಗ ಎಲ್ಲರೂ ವೈದ್ಯನ ಬಗ್ಗೆ ದೂರು ನೀಡುತ್ತಿದ್ದರು. ಆ ವೈದ್ಯನಿಗೆ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.

ಆಸ್ಪತ್ರೆ ಮುಖ್ಯಸ್ಥ ಡಾ.ಆರ್.ಕೆ.ಧಿಮಾನ್ ಮಾತನಾಡಿ, ಆಸ್ಪತ್ರೆಗೆ ದಾಖಲಿಸಿದಾಗ ರೋಗಿಯನ್ನು ಐಸಿಯುಗೆ ಕರೆದೊಯ್ಯಲು ವೈದ್ಯರು ಹೇಳಿದರು. ಆದರೆ ಅಲ್ಲಿ ಬೆಡ್‍ಗಳು ಲಭ್ಯವಿಲ್ಲ ಎಂದು ರೋಗಿ ಕಡೆಯವರಿಗೆ ತಿಳಿಸಿದ್ದಾರೆ. ಯಾಕೆ ಬೆಡ್ ಇಲ್ಲ ಎಂದು ಹೇಳಿದರು ತಿಳಿದಿಲ್ಲ. ಈ ಸಂಬಂಧ ನಾವು ಸಮಿತಿಯನ್ನು ರಚಿಸಿದ್ದೇವೆ. ನಾವು ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಸದ್ಯ ವೈದ್ಯರನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿಸಿದರು.

ಘಟನೆಯ ಕುರಿತು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಪ್ರತಿಕ್ರಿಯಿಸಿ, ರಾಜ್ಯದ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದು ಆಸ್ಪತ್ರೆಯ ತಪ್ಪಲ್ಲ. ಆದರೆ ಇದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಪ್ಪು. ಆಸ್ಪತ್ರೆಗೆ ಏಕೆ ಬಜೆಟ್ ನೀಡುತ್ತಿಲ್ಲ ಎಂದು ಪ್ರಶ್ನಿಸಿದರು.

ಘಟನೆ ಸಂಬಂಧ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಕಟ್ಟುನಿಟ್ಟಿನ ಕ್ರಮದ ಭರವಸೆ ನೀಡಿದ್ದಾರೆ. ಅಲ್ಲದೆ ಮಾಜಿ ಸಂಸದನ ಮನೆಗೆ ಭೇಟಿ ಮಾಡಿದ್ದಾರೆ. ಇದೊಂದು ದುರದೃಷ್ಟಕರ ಘಟನೆಯಾಗಿದೆ. ಈ ಸಂಬಂಧ ತ್ರಿಸದಸ್ಯ ಸಮಿತಿಯನ್ನು ರಚಿಸಲಾಗಿದ್ದು, ಈ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಲಾಗುವುದು ಎಂದರು.

lokesh

Recent Posts

ಕೊಡವ ಕೌಟುಂಬಿಕ ಕ್ರಿಕೆಟ್‌ ಉತ್ಸವಕ್ಕೆ ಸಿದ್ಧತೆ

ಏ.೨ರಿಂದ ೨೮ ದಿನಗಳ ಕಾಲ ನಡೆಯಲಿರುವ ಪಂದ್ಯಾವಳಿ; ೩೦೦ಕ್ಕೂ ಅಧಿಕ ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ  ಮಡಿಕೇರಿ:ಕೊಡವ ಕ್ರಿಕೆಟ್ ಅಕಾಡೆಮಿ ಸಹಯೋಗದಲ್ಲಿ…

12 mins ago

ಹೊರವಲಯದ ನಿವೇಶನಗಳಿಗೆ ಹೆಚ್ಚಾಗಲಿದೆ ಮತ್ತಷ್ಟು ಬೇಡಿಕೆ

ಮೈಸೂರು: ನಗರದ ಹೊರವಲಯದ ನಾಲ್ಕು ದಿಕ್ಕುಗಳಲ್ಲಿರುವ ಹಲವು ಪ್ರದೇಶಗಳನ್ನು ಸೇರಿಸಿ ಗ್ರೇಡ್- ೧ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚಿಸಲು ರಾಜ್ಯಸರ್ಕಾರ…

40 mins ago

ಶಿವಾನಂದಪುರಿ ಶ್ರೀಗಳಿಗೆ ಕನಕ ಭವನ ನಿರ್ವಹಣೆ ಹೊಣೆ

ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…

3 hours ago

ರಿಂಗ್ ರಸ್ತೆಯಲ್ಲಿ ಸಿಗ್ನಲ್ ಲೈಟ್‌ಗಳ ಅಳವಡಿಕೆ

೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…

3 hours ago

ಹುಲಿ ಸೆರೆಗೆ ಬಂತು ಥರ್ಮಲ್ ಡ್ರೋನ್‌

ಕಾಡಂಚಿನ ವ್ಯಾಘ್ರ ಸೆರೆಗೆ ಹಗಲು-ರಾತ್ರಿ ಕಾರ್ಯಾಚರಣೆ ಚಿರತೆ ಸೆರೆಗೆ ತಂತ್ರಜ್ಞಾನ ಬಳಕೆ ಮಾಡಿದ್ದ ಅರಣ್ಯ ಇಲಾS ಮೈಸೂರು: ಕಳೆದ ಎರಡು…

3 hours ago

ಕೃಷಿ ಮೇಳಕ್ಕೆ 10 ಲಕ್ಷ ಜನ ಭೇಟಿ

ಹೇಮಂತ್‌ಕುಮಾರ್ ದಾಖಲೆ ಸೃಷ್ಟಿ ; ಹಲವು ಅಚ್ಚರಿಗಳ ತಾಣವಾದ ಮೂರು ದಿನಗಳ ಮೇಳ  ಮಂಡ್ಯ: ಮೂರು ದಿನಗಳ ಕಾಲ ವಿ.ಸಿ.ಫಾರಂನಲ್ಲಿ…

3 hours ago