BREAKING NEWS

ಲೋಡ್‌ ಶೆಡ್ಡಿಂಗ್‌ಗೆ ವಿದ್ಯುತ್‌ ಕೊರತೆಯೇ ಕಾರಣ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದಲ್ಲಿ ಈ ವರ್ಷ ಮುಂಗಾರು ವೈಫಲ್ಯದಿಂದ ಬರಗಾಲ ಉಂಟಾಗಿ ವಿದ್ಯುತ್ ಉತ್ಪಾದನೆ ಕಡಿಮೆಯಾದ ಕಾರಣ ವಿದ್ಯುತ್ ಕೊರತೆ ಉಂಟಾಗುತ್ತಿದೆ ಮತ್ತು ವಿದ್ಯುತ್ ಬೇಡಿಕೆ ಹೆಚ್ಚಾಗಿದೆ. ಈಗಿನ ಪರಿಸ್ಥಿತಿಯನ್ನು ಪರಿಹರಿಸಲು ಸರ್ಕಾರ ಪ್ರಯತ್ನಿಸುತ್ತಿದೆ. ರಾಜ್ಯದ ಒಳಗೆ ಮತ್ತು ಹೊರಗಿನಿಂದ ವಿದ್ಯುತ್ ಖರೀದಿ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಮಾಡುವವರು ಸರ್ಕಾರಕ್ಕೆ ಪೂರೈಕೆ ಮಾಡುವಂತೆ ಆದೇಶ ಹೊರಡಿಸಲಾಗಿದೆ ಎಂದರು. ವಿದ್ಯುತ್ ಉತ್ಪಾದನೆ ಕಡಿಮೆಯಾಗಿದೆ, ಆದರೆ ಬೇಡಿಕೆ ಹೆಚ್ಚಾಗಿದೆ. ಬೇಸಿಗೆ ಕಾಲದಲ್ಲಿ ಆಗುವಂತೆ ಈಗ ಮಳೆಗಾಲದಲ್ಲಿ ವಿದ್ಯುತ್ ಉತ್ಪಾದನೆ ಕುಂಠಿತವಾಗಿ ಕೊರತೆಯುಂಟಾಗಿದೆ. ಆದರೆ ವಿದ್ಯುತ್ ಬೇಡಿಕೆ ಹೆಚ್ಚಳವಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 9,000 ರಿಂದ 10,000 ಮೆಗಾವ್ಯಾಟ್‌ಗೆ ಹೋಲಿಸಿದರೆ ಈಗ ಬಳಕೆಯ ಬೇಡಿಕೆ 15,000-16,000 ಮೆಗಾವ್ಯಾಟ್ ಆಗಿದೆ, ಆದ್ದರಿಂದ ಇದು ಕೆಲವು ಸಮಸ್ಯೆಗಳಿಗೆ ಕಾರಣವಾಗಿದೆ ಎಂದರು.

ರಾಜ್ಯದಲ್ಲಿ ಮಳೆ ಕಡಿಮೆ ಆಗಿದೆ. ಇದರಿಂದ ವಿದ್ಯುತ್‌ ಅಭಾವ ಸೃಷ್ಟಿಯಾಗಿದೆ. ಜತೆಗೆ ಈಗಲೇ ಬೇಸಿಗೆ ಕಾಲದಲ್ಲಿ ಬರುವ ರೀತಿಯಲ್ಲಿ ವಿದ್ಯುತ್ತಿಗೆ ಬೇಡಿಕೆ ಹೆಚ್ಚಾಗಿದೆ. ಇದರಿಂದ ಮತ್ತಷ್ಟು ಅಭಾವ ಆಗಿದೆ. ಹೀಗಾಗಿ ವಿದ್ಯುತ್‌ ಸರಬರಾಜಿನ ಬಗ್ಗೆ ಪರ್ಯಾಯ ಮಾರ್ಗಗಳತ್ತ ಸರ್ಕಾರ ದೃಷ್ಟಿ ಹರಿಸಿದೆ. ಬೇರೆ ರಾಜ್ಯಗಳಿಂದ ವಿದ್ಯುತ್‌ ಮಾಡುವ ಬಗ್ಗೆ ಚರ್ಚೆ ನಡೆಸಲು ಇಂದು ಸಭೆ ಕರೆಯಲಾಗಿದೆ ಎಂದು ತಿಳಿಸಿದ ಮುಖ್ಯಮಂತ್ರಿಗಳು ಈ ಮೂಲಕ ಲೋಡ್‌ ಶೆಡ್ಡಿಂಗ್‌ಗೆ ವಿದ್ಯುತ್‌ ಕೊರತೆಯೇ ಕಾರಣ ಎಂಬುದನ್ನು ಒಪ್ಪಿಕೊಂಡಿದ್ದಾರೆ.

ಹೊರಗಿನಿಂದ ವಿದ್ಯುತ್ ಖರೀದಿಸುವ ಕುರಿತು ಚರ್ಚಿಸಲು ಇಂಧನ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ಕರೆದಿದ್ದೇನೆ. ರಾಜ್ಯದಲ್ಲಿ ವಿದ್ಯುತ್ ಉತ್ಪಾದಿಸುವವರು ಸರ್ಕಾರಕ್ಕೆ ಪೂರೈಕೆ ಮಾಡಬೇಕು ಎಂದು ಇತ್ತೀಚೆಗೆ ಆದೇಶವನ್ನೂ ಹೊರಡಿಸಿದ್ದೇವೆ. ನಾವು ವಿದ್ಯುತ್ ಖರೀದಿಸಿ ಸಮಸ್ಯೆಯನ್ನು ಪರಿಹರಿಸಲು ಪ್ರಯತ್ನಿಸುತ್ತೇವೆ ಎಂದರು.

ಬಿಜೆಪಿಯವರಿಗೆ ವಸ್ತುಸ್ಥಿತಿ ಗೊತ್ತಿಲ್ಲ: ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ಬಿಜೆಪಿ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರು ಹೇಳಿದ್ದಕ್ಕೆಲ್ಲ ಉತ್ತರ ನೀಡಲು ಆಗುವುದಿಲ್ಲ. ಅವರು ರಾಜಕೀಯವಾಗಿ ಮಾತನಾಡುತ್ತಾರೆ. ವಸ್ತುಸ್ಥಿತಿ ಅವರಿಗೆ ತಿಳಿದಿದೆಯೇ? ಮಳೆ ಇಲ್ಲದೆ ಬರಗಾಲ ಬಂದು ತೊಂದರೆಯಾಗಿದೆ. ಆದರೂ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಅವರು ಹೇಳಿದಂತೆ ಸಂಪೂರ್ಣ ಲೋಡ್ ಶೆಡ್ಡಿಂಗ್ ಆಗಿಲ್ಲ. ಮೂರು ಫೇಸ್‌ನಲ್ಲಿ 7 ಗಂಟೆ ವಿದ್ಯುತ್ ನೀಡಬೇಕೆಂದಿರುವುದನ್ನು ಕೊಡಲು ಆಗುತ್ತಿಲ್ಲ ಎಂಬ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದರು.

ಏಳು ಗಂಟೆಗಳ ಕಾಲ ತ್ರೀಫೇಸ್ ವಿದ್ಯುತ್ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಸಿಎಂ ಅಸಹಾಯಕತೆ ತೋರಿಸಿಕೊಂಡರು.

ಇಂಧನ ಖರೀದಿಗೆ ಮುಂದಾಗಿದ್ದೇವೆ ಕೆಜೆ ಜಾರ್ಜ್: ಈ ಬಗ್ಗೆ ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ಕೆ.ಜೆ. ಜಾರ್ಜ್‌, ವಿದ್ಯುತ್‌ ಕೊರತೆ ನೀಗಿಸಲು ಬೇರೆ ಬೇರೆ ರಾಜ್ಯಗಳ ಜೊತೆ ಮಾತನಾಡುತ್ತಿದ್ದೇವೆ. ನಮಗೆ ತೊಂದರೆ ಆಗಿದೆ. ಇದಕ್ಕೆ ಬಿಜೆಪಿ ಕಾರಣ. ಕಳೆದ 4 ವರ್ಷಗಳ ಬಿಜೆಪಿ ಆಡಳಿತದಲ್ಲಿ ವಿದ್ಯುತ್ ನ್ನು ಹೆಚ್ಚಿಸುವ ಯಾವ ಕೆಲಸವನ್ನೂ ಬಿಜೆಪಿ ಸರ್ಕಾರವಿದ್ದಾಗ ಮಾಡಲಿಲ್ಲ. ನಮ್ಮ ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಇಂಧನದ ಉತ್ಪಾದನೆಯನ್ನು ಹೆಚ್ಚು ಮಾಡಿದ್ದೆವು. ಆದರೆ, ಬಿಜೆಪಿಯವರು 4 ವರ್ಷ ನಿದ್ದೆ ಮಾಡಿರುವ ಸಲುವಾಗಿ ಇಂದು ನಮಗೆ ವಿದ್ಯುತ್ ಕೊರತೆ ಆಗಿದೆ ಎಂದು ಆರೋಪಿಸಿದರು.

ವಿದ್ಯುತ್‌ ಕೊರತೆ ನೀಗಿಸಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಾರ್ಯಪ್ರವೃತ್ತವಾಗಿದೆ. ಬೇರೆ ರಾಜ್ಯದಿಂದ ವಿದ್ಯುತ್‌ ಖರೀದಿ ಮಾಡಿ ನೀಡಲಾಗುವುದು ಎಂದು ಹೇಳಿದರು.

andolanait

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

51 mins ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

3 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

4 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

4 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

7 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

8 hours ago