BREAKING NEWS

ಲಕ್ಷದ್ವೀಪ ಸಂಸದ ಫೈಜಲ್ ಅನರ್ಹತೆ ಆದೇಶ ರದ್ದು ಹಿನ್ನೆಲೆ: ರಾಹುಲ್‌ ಸದಸ್ಯತ್ವ ಮರು ಸ್ಥಾಪನೆ ಕೋರಿ ಸದ್ಯವೇ ಕಾಂಗ್ರಸ್‌ ಅರ್ಜಿ.?

ಹೊಸದಿಲ್ಲಿ: ಕೊಲೆ ಯತ್ನ ಪ್ರಕರಣವೊಂದರಲ್ಲಿ ಸಿಲುಕಿ ವಿಚಾರಣಾ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾದ ಮರುದಿನವೇ ತಮ್ಮ ಲೋಕಸಭಾ ಸದಸ್ಯತ್ವವನ್ನು ಕಳೆದುಕೊಂಡಿದ್ದ ಲಕ್ಷದ್ವೀಪದ ಎನ್ಸಿಪಿ ನಾಯಕ ಮೊಹಮ್ಮದ್ ಫೈಜಲ್ ಅವರ ಸಂಸತ್‌ ಸದಸ್ಯತ್ವವನ್ನು ಮರುಸ್ಥಾಪಿಸಲಾಗಿದೆ. ಲೋಕಸಭೆ ಸಚಿವಾಲಯ ಅಧಿಸೂಚನೆ ಹೊರಡಿಸುವ ಮೂಲಕ ಈ ಮಾಹಿತಿ ನೀಡಿದೆ.

ವಿಚಾರಣಾ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಫೈಜಲ್‌ ಕೇರಳ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಹೈಕೋರ್ಟ್‌ ಶಿಕ್ಷೆಯನ್ನು ಅಮಾನತಿನಲ್ಲಿರಿಸಿ ಮೇಲ್ಮನವಿಯನ್ನು ವಿಚಾರಣೆಗೆ ಸ್ವೀಕರಿಸಿತ್ತು. ಹೈಕೋರ್ಟ್ ಆದೇಶಕ್ಕೆ ತಡೆ ಕೋರಿ ಲಕ್ಷದ್ವೀಪ ಆಡಳಿತ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಕಳೆದ ಫೆಬ್ರವರಿಯಲ್ಲಿ ತಿರಸ್ಕರಿಸಿತ್ತು. ಆದರೆ ಲೋಕಸಭೆ ಸಚಿವಾಲಯ ಫೈಜಲ್‌ ಅವರ ಅನರ್ಹತೆ ಆದೇಶವನ್ನು ಹಿಂಪಡೆದಿರಲಿಲ್ಲ. ತನ್ನ ವಿರುದ್ಧ ಶಿಕ್ಷೆ ರದ್ದಾಗಿದ್ದರೂ ತಮ್ಮ ಸಂಸತ್ ಸದಸ್ಯತ್ವವನ್ನು ಪುನರ್ಸ್ಥಾಪಿಸಿಲ್ಲ ಎಂದು ದೂರಿ ಫೈಜಲ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಪ್ರಕರಣದ ತುರ್ತು ವಿಚಾರಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ ಹಾಗೂ ಜೆ ಬಿ ಪರ್ದಿವಾಲಾ ಅವರಿದ್ದ ಪೀಠದೆದುರು ಹಿರಿಯ ನ್ಯಾಯವಾದಿ ಅಭಿಷೇಕ್ ಮನು ಸಿಂಘ್ವಿ ಅವರು ಕೋರಿದ್ದರು. ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರಿದ್ದ ಪೀಠ ಪ್ರಕರಣದ ವಿಚಾರಣೆಯನ್ನು ಮಾರ್ಚ್ 28 ಕ್ಕೆ ಮುಂದೂಡಿತ್ತು. ಈಗ ಸುಪ್ರೀಂ ತೀರ್ಪಿಗೆ ಮೊದಲೇ ಲೋಕಸಭೆ ಸಚಿವಾಲಯ ಫೈಜಲ್ ಅವರ ಸದಸ್ಯತ್ವವನ್ನು ಮರುಸ್ಥಾಪಿಸಿದೆ.

ಜನವರಿ 5, 2016 ರಂದು ಆಂಡ್ರೋತ್ ದ್ವೀಪ ಪೊಲೀಸ್ ಠಾಣೆಯಲ್ಲಿ ಫೈಜಲ್ ವಿರುದ್ಧ ಪ್ರಕರಣ ದಾಖಲಾಗಿತ್ತು. 2019 ರಲ್ಲಿ ವಿಚಾರಣೆ ನಡೆಯುತ್ತಿರುವಾಗಲೇ ಅವರು ಲೋಕಸಭೆಗೆ ಚುನಾಯಿತರಾದರು. ಜನವರಿ 11, 2023 ರಂದು, ಫೈಜಲ್ ಮತ್ತು ಇತರ ಮೂವರಿಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿತ್ತು.

ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಮಾನನಷ್ಟ ಮೊಕದ್ದಮೆಯೊಂದರಲ್ಲಿ ದೋಷಿ ಎಂದು ಸಾಬೀತಾಗಿದ್ದು 2 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ, ಅವರನ್ನೂ ಕೂಡ ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದ್ದು, ಕಾಂಗ್ರೆಸ್ ರಾಹುಲ್ ಅನರ್ಹತೆಯನ್ನು ರದ್ದುಪಡಿಸುವಂತೆ ಮನವಿ ಮಾಡಲು ನಿರ್ಧರಿಸಿದೆ.

andolanait

Recent Posts

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

1 hour ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

7 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

13 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

13 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

13 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

13 hours ago