BREAKING NEWS

ಇತಿಹಾಸ ಸೇರಿದ ಮೈಸೂರಿನ ಲಕ್ಷ್ಮೀ ಟಾಕೀಸ್

ಮೈಸೂರು: ಕಳೆದ 7 ದಶಕಗಳ ಕಾಲ ಸಿನಿ ಪ್ರಿಯರನ್ನು ರಂಜಿಸಿದ್ದ ಲಕ್ಷ್ಮೀ ಚಿತ್ರ ಮಂದಿರ ಇನ್ನು ಮುಂದೆ ಇತಿಹಾಸ ಸೇರಲಿದೆ. ಮೈಸೂರಿನ ಲಕ್ಷ್ಮೀ ಥಿಯೇಟರ್ ಇತಿಹಾಸ ಪುಟ ಸೇರಿದ್ದು, ಮಂಗಳವಾರದಿಂದ ಚಿತ್ರಮಂದಿರ ಕಟ್ಟಡ ನೆಲಸಮ ಮಾಡುವ ಕಾರ್ಯ ಆರಂಭವಾಗಿದೆ. ಕೊರೊನಾದಿಂದ ಕಂಗೆಟ್ಟ ಚಿತ್ರಮಂದಿರದ ಮಾಲೀಕರು ಮುಚ್ಚಲು ನಿರ್ಧರಿಸಿದ್ದಾರೆ. ಉದ್ಯಮ ನಷ್ಟದಿಂದ ಲಕ್ಷ್ಮೀ ಚಿತ್ರಮಂದಿರ ಮುಚ್ವುವ ನಿರ್ಧಾರ ಕೈಗೊಳ್ಳಲಾಗಿತ್ತು. 1949 ರಿಂದ ಇಲ್ಲಿಯವರಿಗೆ ಸಿನಿ ಪ್ರಿಯರ ರಂಜಿಸುತ್ತಿದ್ದ ಚಿತ್ರಮಂದಿರ. ಇನ್ನು ಮುಂದೆ ನೆನಪಿನಲ್ಲಿ ಮಾತ್ರ ಉಳಿಯಲಿದೆ.

ಅಲ್ಲದೇ 50ಕ್ಕೂ ಹೆಚ್ಚು ಚಿತ್ರಗಳು ಶತದಿನೋತ್ಸವ ಆಚರಣೆ ಮಾಡಿದೆ. ಮತ್ತೊಂದು ವಿಶೇಷವೆಂದರೆ ಇಲ್ಲಿ ಹೊಸಬರ ಸಿನಿಮಾಗಳಿಗೂ ಅವಕಾಶ ನೀಡುತ್ತಿದ್ದರು ಲಕ್ಷೀ ಚಿತ್ರಮಂದಿರದ ಮಾಲೀಕರು. ಆದರೆ ಕಳೆದ ಒಂದೂವರೆ ವರ್ಷದಿಂದ ಚಿತ್ರ ಮಂದಿರವನ್ನ ಬಂದ್ ಮಾಡಿದ್ದರು. ಈಗ ಕಂಪ್ಲೀಟ್ ನೆಲಸಮ ಮಾಡಲಾಗಿದೆ . ‘ರಿವೈಂಡ್ ಕನ್ನಡ’ ಚಿತ್ರವೇ ಲಕ್ಷೀ ಚಿತ್ರಮಂದಿರದಲ್ಲಿ ಪ್ರದರ್ಶನಗೊಂಡ ಕೊನೆ ಚಿತ್ರವಾಗಿದೆ.

ಇತ್ತೀಚಿನ ವರ್ಷಗಳಲ್ಲಿ ಡಿಜಿಟಲ್ ತಂತ್ರಜ್ಞಾನ ಹೆಚ್ಚಾದ ಕಾರಣ ಸಿಂಗಲ್ ಸ್ಕ್ರೀನ್ ಥಿಯೇಟರ್‌ಗಳು ಅಳಿವಿನ ಅಂಚಿನಲ್ಲಿದೆ. ಸಾಂಸ್ಕೃತಿಕ ನಗರಿ ಮೈಸೂರಿನ ಸಿನಿಮಾ ಮಂದಿರಗಳು ಇತಿಹಾಸದ ಪುಟ ಸೇರುತ್ತಿದ್ದು, ಬಹುತೇಕ ಚಿತ್ರಮಂದಿರಗಳು ಮುಚ್ಚುವ ಹಂತದಲ್ಲಿದೆ. ಅಂತೆಯೇ ಸಿನಿ ರಸಿಕರ ಹಾಟ್ ಫೇವರೇಟ್ ಅಂತ ಕರೆಸಿಕೊಳ್ತಿದ್ದ ಗತಕಾಲದ ಇತಿಹಾಸ ಹೊಂದಿದ್ದ ಮೈಸೂರಿನ ‘ಲಕ್ಷ್ಮೀ ಟಾಕೀಸ್’ ನೆಲಸಮ ಆಗಿದೆ. ಮುಂದಿನ 2 ದಿನಗಳಲ್ಲಿ ಲಕ್ಷ್ಮೀ ಥಿಯೇಟರ್ ಸಂಪೂರ್ಣ ಮಾಯವಾಗಲಿದೆ.

andolanait

Recent Posts

ಟಿ20 ವಿಶ್ವಕಪ್‌ : ಇಟಲಿ ವಿರುದ್ಧ ವೆಸ್ಟ್‌ ಇಂಡೀಸ್‌ಗೆ ಸುಲಭ ಜಯ

ಕೋಲ್ಕತ್ತ : ನಾಯಕ ಶಾಯ್ ಹೋಪ್ ಅವರ ಸತತ ಎರಡನೇ ಅರ್ಧ ಶತಕ ಮತ್ತು ಬೌಲರ್‌ಗಳ ಶಿಸ್ತುಬದ್ಧ ದಾಳಿಯ ಪ್ರದರ್ಶನದಿಂದ…

8 hours ago

ಟಿ20 ವಿಶ್ವಕಪ್ | ಭರ್ಜರಿ ಜಯ ; ಶ್ರೀಲಂಕಾ ಸೋಲಿಸಿ ಸೂಪರ್ 8ಗೆ ಲಗ್ಗೆ ಇಟ್ಟ ಜಿಂಬಾಬ್ವೆ

ಕೊಲಂಬೊ : ಐಸಿಸಿ ಟಿ20 ವಿಶ್ವಕಪ್ 2026ರಲ್ಲಿ ಜಿಂಬಾಬ್ವೆ ತಂಡ ಮತ್ತೊಮ್ಮೆ ದೊಡ್ಡ ಅಚ್ಚರಿ ಮೂಡಿಸಿದೆ. ಆತಿಥೇಯ ಶ್ರೀಲಂಕಾವನ್ನು ಆರ್.…

8 hours ago

ದ್ವಿತೀಯ ಪಿಯುಸಿ | ಮೈಸೂರು ಟಾಪ್‌ 10ರೊಳಗೆ ಸ್ಥಾನ ಪಡೆಯಲು ಶ್ರಮಿಸಿ

ಮೈಸೂರು : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲಿ ಕಳೆದ ವರ್ಷದ ಸ್ಥಾನವನ್ನು ಉಳಿಸಿಕೊಳ್ಳುವ ಜತೆಗೆ 10ನೇ ಸ್ಥಾನದೊಳಗೆ ಬರಲು ಶ್ರಮಿಸಬೇಕು.…

8 hours ago

ಎಐ ಭಾರತದ ಭವಿಷ್ಯ ; ನಿಯಂತ್ರಣ ನಮ್ಮ ಕೈಯಲ್ಲಿರಲಿ : ಪ್ರಧಾನಿ ಮೋದಿ

ಹೊಸದಿಲ್ಲಿ : ಮಾನವರು ಕೇವಲ ಡೇಟಾ ಪಾಯಿಂಟ್ ಅಥವಾ ಕಚ್ಚಾ ವಸ್ತುವಾಗದಂತೆ ನೋಡಿಕೊಳ್ಳಲು, ಎಐಯನ್ನು ಜನತಂತ್ರೀಕರಿಸಬೇಕು. ಇದು ವಿಶೇಷವಾಗಿ ಗ್ಲೋಬಲ್…

9 hours ago

ಬಂಡೀಪುರ ಸಫಾರಿ ಪರ-ವಿರೋಧ ಜಟಾಪಟಿ ; ರೈತರು, ಸಫಾರಿ ಬೆಂಬಲಿತರು ಪೊಲೀಸರ ವಶಕ್ಕೆ.

ಗುಂಡ್ಲುಪೇಟೆ : ಭಾರತದ ಪ್ರಮುಖ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನಾರಂಭಗೊಳಿಸುವ ಆದೇಶದ ವಿರುದ್ಧ…

9 hours ago

ಬೂದನೂರು ಉತ್ಸವ : ನಾಳೆಯಿಂದ ಹೆಲಿ ಟೂರಿಸಂ

ಮಂಡ್ಯ : ಬೂದನೂರು ಉತ್ಸವದ ಪ್ರಯುಕ್ತ ಚಿಕ್ಕಮಂಡ್ಯದಲ್ಲಿ ಫೆ.20ರ ಶುಕ್ರವಾರದಿಂದ ಮೂರು ದಿನಗಳ ಕಾಲ ಹೆಲಿ ಟೂರಿಸಂ (ಹೆಲಿಕಾಪ್ಟರ್ ಜಾಯ್…

9 hours ago