BREAKING NEWS

ಇತಿಹಾಸ ಸೇರಿದ ಮೈಸೂರಿನ ಲಕ್ಷ್ಮೀ ಟಾಕೀಸ್

ಮೈಸೂರು: ಕಳೆದ 7 ದಶಕಗಳ ಕಾಲ ಸಿನಿ ಪ್ರಿಯರನ್ನು ರಂಜಿಸಿದ್ದ ಲಕ್ಷ್ಮೀ ಚಿತ್ರ ಮಂದಿರ ಇನ್ನು ಮುಂದೆ ಇತಿಹಾಸ ಸೇರಲಿದೆ. ಮೈಸೂರಿನ ಲಕ್ಷ್ಮೀ ಥಿಯೇಟರ್ ಇತಿಹಾಸ ಪುಟ ಸೇರಿದ್ದು, ಮಂಗಳವಾರದಿಂದ ಚಿತ್ರಮಂದಿರ ಕಟ್ಟಡ ನೆಲಸಮ ಮಾಡುವ ಕಾರ್ಯ ಆರಂಭವಾಗಿದೆ. ಕೊರೊನಾದಿಂದ ಕಂಗೆಟ್ಟ ಚಿತ್ರಮಂದಿರದ ಮಾಲೀಕರು ಮುಚ್ಚಲು ನಿರ್ಧರಿಸಿದ್ದಾರೆ. ಉದ್ಯಮ ನಷ್ಟದಿಂದ ಲಕ್ಷ್ಮೀ ಚಿತ್ರಮಂದಿರ ಮುಚ್ವುವ ನಿರ್ಧಾರ ಕೈಗೊಳ್ಳಲಾಗಿತ್ತು. 1949 ರಿಂದ ಇಲ್ಲಿಯವರಿಗೆ ಸಿನಿ ಪ್ರಿಯರ ರಂಜಿಸುತ್ತಿದ್ದ ಚಿತ್ರಮಂದಿರ. ಇನ್ನು ಮುಂದೆ ನೆನಪಿನಲ್ಲಿ ಮಾತ್ರ ಉಳಿಯಲಿದೆ.

ಅಲ್ಲದೇ 50ಕ್ಕೂ ಹೆಚ್ಚು ಚಿತ್ರಗಳು ಶತದಿನೋತ್ಸವ ಆಚರಣೆ ಮಾಡಿದೆ. ಮತ್ತೊಂದು ವಿಶೇಷವೆಂದರೆ ಇಲ್ಲಿ ಹೊಸಬರ ಸಿನಿಮಾಗಳಿಗೂ ಅವಕಾಶ ನೀಡುತ್ತಿದ್ದರು ಲಕ್ಷೀ ಚಿತ್ರಮಂದಿರದ ಮಾಲೀಕರು. ಆದರೆ ಕಳೆದ ಒಂದೂವರೆ ವರ್ಷದಿಂದ ಚಿತ್ರ ಮಂದಿರವನ್ನ ಬಂದ್ ಮಾಡಿದ್ದರು. ಈಗ ಕಂಪ್ಲೀಟ್ ನೆಲಸಮ ಮಾಡಲಾಗಿದೆ . ‘ರಿವೈಂಡ್ ಕನ್ನಡ’ ಚಿತ್ರವೇ ಲಕ್ಷೀ ಚಿತ್ರಮಂದಿರದಲ್ಲಿ ಪ್ರದರ್ಶನಗೊಂಡ ಕೊನೆ ಚಿತ್ರವಾಗಿದೆ.

ಇತ್ತೀಚಿನ ವರ್ಷಗಳಲ್ಲಿ ಡಿಜಿಟಲ್ ತಂತ್ರಜ್ಞಾನ ಹೆಚ್ಚಾದ ಕಾರಣ ಸಿಂಗಲ್ ಸ್ಕ್ರೀನ್ ಥಿಯೇಟರ್‌ಗಳು ಅಳಿವಿನ ಅಂಚಿನಲ್ಲಿದೆ. ಸಾಂಸ್ಕೃತಿಕ ನಗರಿ ಮೈಸೂರಿನ ಸಿನಿಮಾ ಮಂದಿರಗಳು ಇತಿಹಾಸದ ಪುಟ ಸೇರುತ್ತಿದ್ದು, ಬಹುತೇಕ ಚಿತ್ರಮಂದಿರಗಳು ಮುಚ್ಚುವ ಹಂತದಲ್ಲಿದೆ. ಅಂತೆಯೇ ಸಿನಿ ರಸಿಕರ ಹಾಟ್ ಫೇವರೇಟ್ ಅಂತ ಕರೆಸಿಕೊಳ್ತಿದ್ದ ಗತಕಾಲದ ಇತಿಹಾಸ ಹೊಂದಿದ್ದ ಮೈಸೂರಿನ ‘ಲಕ್ಷ್ಮೀ ಟಾಕೀಸ್’ ನೆಲಸಮ ಆಗಿದೆ. ಮುಂದಿನ 2 ದಿನಗಳಲ್ಲಿ ಲಕ್ಷ್ಮೀ ಥಿಯೇಟರ್ ಸಂಪೂರ್ಣ ಮಾಯವಾಗಲಿದೆ.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago