BREAKING NEWS

ಇತಿಹಾಸ ಸೇರಿದ ಮೈಸೂರಿನ ಲಕ್ಷ್ಮೀ ಟಾಕೀಸ್

ಮೈಸೂರು: ಕಳೆದ 7 ದಶಕಗಳ ಕಾಲ ಸಿನಿ ಪ್ರಿಯರನ್ನು ರಂಜಿಸಿದ್ದ ಲಕ್ಷ್ಮೀ ಚಿತ್ರ ಮಂದಿರ ಇನ್ನು ಮುಂದೆ ಇತಿಹಾಸ ಸೇರಲಿದೆ. ಮೈಸೂರಿನ ಲಕ್ಷ್ಮೀ ಥಿಯೇಟರ್ ಇತಿಹಾಸ ಪುಟ ಸೇರಿದ್ದು, ಮಂಗಳವಾರದಿಂದ ಚಿತ್ರಮಂದಿರ ಕಟ್ಟಡ ನೆಲಸಮ ಮಾಡುವ ಕಾರ್ಯ ಆರಂಭವಾಗಿದೆ. ಕೊರೊನಾದಿಂದ ಕಂಗೆಟ್ಟ ಚಿತ್ರಮಂದಿರದ ಮಾಲೀಕರು ಮುಚ್ಚಲು ನಿರ್ಧರಿಸಿದ್ದಾರೆ. ಉದ್ಯಮ ನಷ್ಟದಿಂದ ಲಕ್ಷ್ಮೀ ಚಿತ್ರಮಂದಿರ ಮುಚ್ವುವ ನಿರ್ಧಾರ ಕೈಗೊಳ್ಳಲಾಗಿತ್ತು. 1949 ರಿಂದ ಇಲ್ಲಿಯವರಿಗೆ ಸಿನಿ ಪ್ರಿಯರ ರಂಜಿಸುತ್ತಿದ್ದ ಚಿತ್ರಮಂದಿರ. ಇನ್ನು ಮುಂದೆ ನೆನಪಿನಲ್ಲಿ ಮಾತ್ರ ಉಳಿಯಲಿದೆ.

ಅಲ್ಲದೇ 50ಕ್ಕೂ ಹೆಚ್ಚು ಚಿತ್ರಗಳು ಶತದಿನೋತ್ಸವ ಆಚರಣೆ ಮಾಡಿದೆ. ಮತ್ತೊಂದು ವಿಶೇಷವೆಂದರೆ ಇಲ್ಲಿ ಹೊಸಬರ ಸಿನಿಮಾಗಳಿಗೂ ಅವಕಾಶ ನೀಡುತ್ತಿದ್ದರು ಲಕ್ಷೀ ಚಿತ್ರಮಂದಿರದ ಮಾಲೀಕರು. ಆದರೆ ಕಳೆದ ಒಂದೂವರೆ ವರ್ಷದಿಂದ ಚಿತ್ರ ಮಂದಿರವನ್ನ ಬಂದ್ ಮಾಡಿದ್ದರು. ಈಗ ಕಂಪ್ಲೀಟ್ ನೆಲಸಮ ಮಾಡಲಾಗಿದೆ . ‘ರಿವೈಂಡ್ ಕನ್ನಡ’ ಚಿತ್ರವೇ ಲಕ್ಷೀ ಚಿತ್ರಮಂದಿರದಲ್ಲಿ ಪ್ರದರ್ಶನಗೊಂಡ ಕೊನೆ ಚಿತ್ರವಾಗಿದೆ.

ಇತ್ತೀಚಿನ ವರ್ಷಗಳಲ್ಲಿ ಡಿಜಿಟಲ್ ತಂತ್ರಜ್ಞಾನ ಹೆಚ್ಚಾದ ಕಾರಣ ಸಿಂಗಲ್ ಸ್ಕ್ರೀನ್ ಥಿಯೇಟರ್‌ಗಳು ಅಳಿವಿನ ಅಂಚಿನಲ್ಲಿದೆ. ಸಾಂಸ್ಕೃತಿಕ ನಗರಿ ಮೈಸೂರಿನ ಸಿನಿಮಾ ಮಂದಿರಗಳು ಇತಿಹಾಸದ ಪುಟ ಸೇರುತ್ತಿದ್ದು, ಬಹುತೇಕ ಚಿತ್ರಮಂದಿರಗಳು ಮುಚ್ಚುವ ಹಂತದಲ್ಲಿದೆ. ಅಂತೆಯೇ ಸಿನಿ ರಸಿಕರ ಹಾಟ್ ಫೇವರೇಟ್ ಅಂತ ಕರೆಸಿಕೊಳ್ತಿದ್ದ ಗತಕಾಲದ ಇತಿಹಾಸ ಹೊಂದಿದ್ದ ಮೈಸೂರಿನ ‘ಲಕ್ಷ್ಮೀ ಟಾಕೀಸ್’ ನೆಲಸಮ ಆಗಿದೆ. ಮುಂದಿನ 2 ದಿನಗಳಲ್ಲಿ ಲಕ್ಷ್ಮೀ ಥಿಯೇಟರ್ ಸಂಪೂರ್ಣ ಮಾಯವಾಗಲಿದೆ.

andolanait

Recent Posts

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

2 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

3 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

4 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

4 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

4 hours ago

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

6 hours ago