BREAKING NEWS

ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಲು ಮುಂದಾದ ಲಲಿತ್ ಮೋದಿ

ನವದೆಹಲಿ: ಮೋದಿ ಉಪನಾಮ ಕುರಿತಂತೆ ವ್ಯಂಗ್ಯ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬ್ರಿಟನ್ ನ್ಯಾಯಾಲಯದಲ್ಲಿ ದಾವೆ ಹೂಡುವುದಾಗಿ ಭಾರತದಿಂದ ಪರಾರಿಯಾಗಿರುವ ಐಪಿಎಲ್ ಮಾಜಿ ಅಧ್ಯಕ್ಷ ಲಲಿತ್ ಮೋದಿ ಟ್ವೀಟ್ ಮಾಡಿದ್ದಾರೆ.

ಮೋದಿ ಉಪನಾಮ ವ್ಯಂಗ್ಯ ಮಾಡಿದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಗೆ ಸೂರತ್ ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದ ಕೆಲ ದಿನಗಳ ಬಳಿಕ ಲಲಿತ್ ಮೋದಿ ಈ ಹೇಳಿಕೆ ಕೊಟ್ಟಿದ್ದಾರೆ.

2019ರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದ ಕೋಲಾರದಲ್ಲಿ ಹಮ್ಮಿಕೊಂಡಿದ್ದ ರ‍್ಯಾಲಿಯಲ್ಲಿ ಭಾಗವಹಿಸಿದ್ದ ರಾಹುಲ್‌ ಗಾಂಧಿ, ‘ಕಳ್ಳರೆಲ್ಲರಿಗೂ ಸಾಮಾನ್ಯವಾಗಿ ಮೋದಿ ಎಂಬ ಉಪನಾಮವೇ ಏಕಿರುತ್ತದೆ’ ಎಂದು ಪ್ರಶ್ನಿಸಿದ್ದರು. ಈ ಹೇಳಿಕೆ ಮೂಲಕ ರಾಹುಲ್‌ ಅವರು ‘ಮೋದಿ’ ಉಪನಾಮ ಹೊಂದಿರುವವರನ್ನೆಲ್ಲಾ ಹೀಯಾಳಿಸಿದ್ದಾರೆ ಎಂದು ಆರೋಪಿಸಿ ಗುಜರಾತ್‌ನ ಬಿಜೆಪಿ ಶಾಸಕ ಪೂರ್ಣೇಶ್‌ ಮೋದಿ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಈ ಹೇಳಿಕೆಯಲ್ಲಿ ರಾಹುಲ್ ಗಾಂಧಿ ಲಲಿತ್ ಮೋದಿ ಹೆಸರನ್ನೂ ಪ್ರಸ್ತಾಪಿಸಿದ್ದರು.

ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಲಲಿತ್ ಮೋದಿ, ರಾಹುಲ್ ಗಾಂಧಿ ಮತ್ತು ಸಹಚರರು ಪದೇ ಪದೇ ನನ್ನನ್ನು ಕಾನೂನಿನಿಂದ ತಪ್ಪಿಸಿಕೊಂಡು ಹೋಗಿರುವ ದೇಶಭ್ರಷ್ಟ ಎಂದು ಹೇಳುತ್ತಿರುವುದು ಹೇಗೆ? ಏಕೆ? ನನ್ನ ವಿರುದ್ಧದ ಆರೋಪಗಳು ಸಾಬೀತಾಗಿವೆಯೇ’ ಎಂದು ಅವರು ಪ್ರಶ್ನಿಸಿದ್ದಾರೆ.

ರಾಹುಲ್ ಗಾಂಧಿಯವರನ್ನು ಬ್ರಿಟನ್ ನ್ಯಾಯಾಲಯಕ್ಕೆ ಎಳೆಯಲು ನಾನು ತಕ್ಷಣ ನಿರ್ಧರಿಸಿದ್ದೇನೆ. ‌ಆಗ ಪಕ್ಕಾ ಪುರಾವೆಗಳೊಂದಿಗೆ ನ್ಯಾಯಾಲಯಕ್ಕೆ ಬರಬೇಕಾಗುತ್ತದೆ. ರಾಹುಲ್ ತನ್ನನ್ನು ತಾನು ಸಂಪೂರ್ಣ ಮೂರ್ಖನನ್ನಾಗಿಸಿಕೊಳ್ಳುವುದನ್ನು ಎದುರುನೋಡುತ್ತಿದ್ದೇನೆ ಎಂದಿದ್ದಾರೆ.

ಟ್ವೀಟ್‌ಗಳನ್ನು ಕಾಂಗ್ರೆಸ್‌ನ ಹಲವು ನಾಯಕರಿಗೆ ಟ್ಯಾಗ್ ಮಾಡಿರುವ ಅವರು, ಇವರೆಲ್ಲರೂ ವಿದೇಶಗಳಲ್ಲಿ ಆಸ್ತಿ ಹೊಂದಿದ್ದಾರೆ ಎಂದು ಆರೋಪಿಸಿದ್ದಾರೆ. ಅವುಗಳ ವಿಳಾಸ ಮತ್ತು ಚಿತ್ರಗಳನ್ನು ನಾನು ಕಳುಹಿಸುತ್ತೇನೆ. ನಿಜವಾದ ಕಳ್ಳರು ದೇಶದ ಜನರನ್ನು ಮೂರ್ಖರನ್ನಾಗಿಸುವುದು ಬೇಡ’ ಎಂದು ಅವರು ಹೇಳಿದ್ದಾರೆ.

‘ನನ್ನ ವಿರುದ್ಧ ಒಂದು ಪೈಸೆಯಷ್ಟೂ ವಂಚನೆಯ ಆರೋಪ ಸಾಬೀತಾಗಿಲ್ಲ. ಬದಲಿಗೆ ಸುಮಾರು 100 ಬಿಲಿಯನ್ ಡಾಲರ್ ಆದಾಯ ತಂದುಕೊಟ್ಟಿರುವ ಅತ್ಯದ್ಬುತ ಕ್ರೀಡಾಕೂಟವನ್ನು ಆರಂಭಿಸಿದ್ದೇನೆ ಎಂಬುದು ಸಾಬೀತಾಗಿದೆ ಎಂದು ಅವರು ಹೇಳಿದ್ದಾರೆ.

andolanait

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

12 mins ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

4 hours ago