BREAKING NEWS

ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಲು ಮುಂದಾದ ಲಲಿತ್ ಮೋದಿ

ನವದೆಹಲಿ: ಮೋದಿ ಉಪನಾಮ ಕುರಿತಂತೆ ವ್ಯಂಗ್ಯ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬ್ರಿಟನ್ ನ್ಯಾಯಾಲಯದಲ್ಲಿ ದಾವೆ ಹೂಡುವುದಾಗಿ ಭಾರತದಿಂದ ಪರಾರಿಯಾಗಿರುವ ಐಪಿಎಲ್ ಮಾಜಿ ಅಧ್ಯಕ್ಷ ಲಲಿತ್ ಮೋದಿ ಟ್ವೀಟ್ ಮಾಡಿದ್ದಾರೆ.

ಮೋದಿ ಉಪನಾಮ ವ್ಯಂಗ್ಯ ಮಾಡಿದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಗೆ ಸೂರತ್ ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದ ಕೆಲ ದಿನಗಳ ಬಳಿಕ ಲಲಿತ್ ಮೋದಿ ಈ ಹೇಳಿಕೆ ಕೊಟ್ಟಿದ್ದಾರೆ.

2019ರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದ ಕೋಲಾರದಲ್ಲಿ ಹಮ್ಮಿಕೊಂಡಿದ್ದ ರ‍್ಯಾಲಿಯಲ್ಲಿ ಭಾಗವಹಿಸಿದ್ದ ರಾಹುಲ್‌ ಗಾಂಧಿ, ‘ಕಳ್ಳರೆಲ್ಲರಿಗೂ ಸಾಮಾನ್ಯವಾಗಿ ಮೋದಿ ಎಂಬ ಉಪನಾಮವೇ ಏಕಿರುತ್ತದೆ’ ಎಂದು ಪ್ರಶ್ನಿಸಿದ್ದರು. ಈ ಹೇಳಿಕೆ ಮೂಲಕ ರಾಹುಲ್‌ ಅವರು ‘ಮೋದಿ’ ಉಪನಾಮ ಹೊಂದಿರುವವರನ್ನೆಲ್ಲಾ ಹೀಯಾಳಿಸಿದ್ದಾರೆ ಎಂದು ಆರೋಪಿಸಿ ಗುಜರಾತ್‌ನ ಬಿಜೆಪಿ ಶಾಸಕ ಪೂರ್ಣೇಶ್‌ ಮೋದಿ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಈ ಹೇಳಿಕೆಯಲ್ಲಿ ರಾಹುಲ್ ಗಾಂಧಿ ಲಲಿತ್ ಮೋದಿ ಹೆಸರನ್ನೂ ಪ್ರಸ್ತಾಪಿಸಿದ್ದರು.

ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಲಲಿತ್ ಮೋದಿ, ರಾಹುಲ್ ಗಾಂಧಿ ಮತ್ತು ಸಹಚರರು ಪದೇ ಪದೇ ನನ್ನನ್ನು ಕಾನೂನಿನಿಂದ ತಪ್ಪಿಸಿಕೊಂಡು ಹೋಗಿರುವ ದೇಶಭ್ರಷ್ಟ ಎಂದು ಹೇಳುತ್ತಿರುವುದು ಹೇಗೆ? ಏಕೆ? ನನ್ನ ವಿರುದ್ಧದ ಆರೋಪಗಳು ಸಾಬೀತಾಗಿವೆಯೇ’ ಎಂದು ಅವರು ಪ್ರಶ್ನಿಸಿದ್ದಾರೆ.

ರಾಹುಲ್ ಗಾಂಧಿಯವರನ್ನು ಬ್ರಿಟನ್ ನ್ಯಾಯಾಲಯಕ್ಕೆ ಎಳೆಯಲು ನಾನು ತಕ್ಷಣ ನಿರ್ಧರಿಸಿದ್ದೇನೆ. ‌ಆಗ ಪಕ್ಕಾ ಪುರಾವೆಗಳೊಂದಿಗೆ ನ್ಯಾಯಾಲಯಕ್ಕೆ ಬರಬೇಕಾಗುತ್ತದೆ. ರಾಹುಲ್ ತನ್ನನ್ನು ತಾನು ಸಂಪೂರ್ಣ ಮೂರ್ಖನನ್ನಾಗಿಸಿಕೊಳ್ಳುವುದನ್ನು ಎದುರುನೋಡುತ್ತಿದ್ದೇನೆ ಎಂದಿದ್ದಾರೆ.

ಟ್ವೀಟ್‌ಗಳನ್ನು ಕಾಂಗ್ರೆಸ್‌ನ ಹಲವು ನಾಯಕರಿಗೆ ಟ್ಯಾಗ್ ಮಾಡಿರುವ ಅವರು, ಇವರೆಲ್ಲರೂ ವಿದೇಶಗಳಲ್ಲಿ ಆಸ್ತಿ ಹೊಂದಿದ್ದಾರೆ ಎಂದು ಆರೋಪಿಸಿದ್ದಾರೆ. ಅವುಗಳ ವಿಳಾಸ ಮತ್ತು ಚಿತ್ರಗಳನ್ನು ನಾನು ಕಳುಹಿಸುತ್ತೇನೆ. ನಿಜವಾದ ಕಳ್ಳರು ದೇಶದ ಜನರನ್ನು ಮೂರ್ಖರನ್ನಾಗಿಸುವುದು ಬೇಡ’ ಎಂದು ಅವರು ಹೇಳಿದ್ದಾರೆ.

‘ನನ್ನ ವಿರುದ್ಧ ಒಂದು ಪೈಸೆಯಷ್ಟೂ ವಂಚನೆಯ ಆರೋಪ ಸಾಬೀತಾಗಿಲ್ಲ. ಬದಲಿಗೆ ಸುಮಾರು 100 ಬಿಲಿಯನ್ ಡಾಲರ್ ಆದಾಯ ತಂದುಕೊಟ್ಟಿರುವ ಅತ್ಯದ್ಬುತ ಕ್ರೀಡಾಕೂಟವನ್ನು ಆರಂಭಿಸಿದ್ದೇನೆ ಎಂಬುದು ಸಾಬೀತಾಗಿದೆ ಎಂದು ಅವರು ಹೇಳಿದ್ದಾರೆ.

andolanait

Recent Posts

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ ಆರೋಪ ; ಇಬ್ಬರು ಶಿಕ್ಷಕರು ಅಮಾನತ್ತು

ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…

4 hours ago

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

5 hours ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

5 hours ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

6 hours ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

6 hours ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

6 hours ago