BREAKING NEWS

ವೇದಿಕೆಯಲ್ಲಿ ಭೂ ಗಲಾಟೆ : ಹೊಡೆದಾಟಕ್ಕೆ ಮುಂದಾದ ಶಾಸಕ-ಸಂಸದ

ಕೋಲಾರ : ಭೂ ಕಬಳಿಕೆ ವಿಷಯಕ್ಕೆ ಸಂಬಂಧಪಟ್ಟಂತೆ ಕೋಲಾರದ ಸಂಸದ ಮುನಿಸ್ವಾಮಿ ಹಾಗೂ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ನಡುವೆ ಅವಾಚ್ಯ ಶಬ್ಧಗಳ ವಾಗ್ವಾದ ನಡೆದಿದ್ದು, ಕೈ ಕೈ ಮಿಲಾಯಿಸುವ ಹಂತಕ್ಕೆ ಪರಿಸ್ಥಿತಿ ಹೋದ ಘಟನೆ ನಡೆದಿದೆ.

ರಾಜ್ಯಸರ್ಕಾರದ ಸೂಚನೆಯ ಮೇರೆಗೆ ಸೋಮವಾರ ಕೋಲಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಸುರೇಶ್ ಜನತಾದರ್ಶನ ನಡೆಸುತ್ತಿದ್ದರು. ವೇದಿಕೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಕುಳಿತಿದ್ದರು. ಜನತಾದರ್ಶನದ ವೇಳೆ ತಡವಾಗಿ ಆಗಮಿಸಿದ ಸಂಸದ ಮುನಿಸ್ವಾಮಿ ಅವರು ಭೂಗಳ್ಳರನ್ನು ಪಕ್ಕದಲ್ಲೇ ಕೂರಿಸಿಕೊಂಡು ಯಾವ ರೀತಿ ನ್ಯಾಯ ಕೊಡಲು ಸಾಧ್ಯ ಎಂದು ಪ್ರಶ್ನಿಸಿದರು.

ಇದರಿಂದ ಸಿಟ್ಟಿಗೆದ್ದ ಎಸ್.ಎನ್.ನಾರಾಯಣಸ್ವಾಮಿ ಸಂಸದರ ವಿರುದ್ಧ ವಾಗ್ಧಾಳಿ ನಡೆಸಿದರು. ಶಾಸಕರಿಗೆ ಗೌರವ ಕೊಟ್ಟು ಮಾತನಾಡುವುದನ್ನು ಕಲಿ, ಏನೆಂದುಕೊಂಡಿದ್ದೀಯ ಎಂದು ಏಕವಚನದಲ್ಲಿ ತರಾಟೆಗೆ ತೆಗೆದುಕೊಂಡರು. ಇದರಿಂದ ರೊಚ್ಚಿಗೆದ್ದ ಮುನಿಸ್ವಾಮಿ ಶಾಸಕರ ಮೇಲೇರಿ ಹೋಗಿದ್ದಲ್ಲದೆ, ಹಲ್ಲೆ ನಡೆಸುವ ರೀತಿ ವರ್ತಿಸಿದರು.

ತಕ್ಷಣವೇ ಮಧ್ಯಪ್ರವೇಶ ಮಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಕಾರಿಗಳು ಸೇರಿದಂತೆ ಇತರೆ ಸಿಬ್ಬಂದಿಗಳು ಸಂಸದ ಮುನಿಸ್ವಾಮಿಯವರನ್ನು ಹೊರಗೆ ಕರೆದುಕೊಂಡು ಹೋದರು. ಬಳಿಕ ಸಮಾಧಾನಪಡಿಸಲಾಯಿತು.
ನಂತರ ಮುಂದುವರೆದ ಜನತಾದರ್ಶನದಲ್ಲಿ ಸಚಿವರ ಮತ್ತೊಂದು ಪಕ್ಕದಲ್ಲಿ ಸಂಸದರು ಆಸೀನರಾದರು. ಇದಕ್ಕೂ ಮೊದಲು ಮಾತನಾಡಿದ ಸಂಸದರು, ನಾನು ನಾರಾಯಣಸ್ವಾಮಿ ಹೆಸರನ್ನು ಪ್ರಸ್ತಾಪಿಸಿ ಆರೋಪ ಮಾಡಲಿಲ್ಲ. ಭೂಗಳ್ಳರಿಂದ ಅನ್ಯಾಯವಾಗುತ್ತಿದೆ. ಒತ್ತುವರಿ ತೆರವು ಮಾಡಿ ಎಂದಷ್ಟೇ ಹೇಳಿದೆ. ನಾರಾಯಣಸ್ವಾಮಿ ತಮಗೆ ಹೇಳಿದ್ದು ಎಂದು ಭಾವಿಸಿ ಜಗಳಕ್ಕೆ ಬಂದಿದ್ದಾರೆ. ಬಂಗಾರಪೇಟೆ ಸೇರಿದಂತೆ ಹಲವಾರು ಕಡೆ ಬಡವರ ಭೂಮಿ ಒತ್ತುವರಿಯಾಗಿದೆ. ಅವರಿಗೆ ನ್ಯಾಯ ಕೊಡಿಸಬೇಕೆಂದು ತಾವು ಪ್ರಸ್ತಾಪಿಸಿದ್ದೇವೆ ಎಂದು ಹೇಳಿದರು.

ಸಂಸದರು ಮತ್ತು ಶಾಸಕರ ನಡುವೆ ಏಕವಚನ, ಅವಾಚ್ಯ ಶಬ್ಧಗಳ ಬಳಕೆ, ಗೂಂಡಾ ಮಾದರಿಯ ಹಲ್ಲೆ ಪ್ರಯತ್ನಜನತಾದರ್ಶನಕ್ಕೆ ಆಗಮಿಸಿದ್ದ ಸಾರ್ವಜನಿಕರನ್ನು ದಿಗ್ಭ್ರಾಂತರನ್ನಾಗುವಂತೆ ಮಾಡಿತು.

lokesh

Recent Posts

ಅಲರ್ಟ್‌ ಆದ ಲಾಟ್ಕರ್‌ : ಡ್ರಗ್ಸ್‌ ಜಾಲಮುಕ್ತಕ್ಕೆ ಪಣ : ದಿಢೀರ್‌ ದಾಳಿ

ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…

5 hours ago

ಫೆ.8ರಂದು ಸ್ವಚ್ಛತಾ ಓಟ : ʻಓಡೋಣ ಮೈಸೂರಿಗಾಗಿ-ಒಂದಾಗೋಣ ಸ್ವಚ್ಛತೆಗಾಗಿʼ

ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…

6 hours ago

ಗ್ರಾಮ ಪಂಚಾಯ್ತಿ ಅಧಿಕಾರ ಅವಧಿ ಮುಕ್ತಾಯ : ಈಗಿರುವ ಸದಸ್ಯರನ್ನೇ ಮುಂದುವರೆಸುತ್ತಾ ಸರ್ಕಾರ?

ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…

7 hours ago

ಪ್ರತ್ಯೇಕ ಕಳವು ಪ್ರಕರಣ : 11 ಮಂದಿ ಬಂಧನ

19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್‌ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…

8 hours ago

ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಹಿಳಾ ಸರ್ಕಾರಿ ಕಾಲೇಜು!

ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…

8 hours ago

ಮಂಡ್ಯ ಜಿಲ್ಲೆಯ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ : ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…

8 hours ago