BREAKING NEWS

ವೇದಿಕೆಯಲ್ಲಿ ಭೂ ಗಲಾಟೆ : ಹೊಡೆದಾಟಕ್ಕೆ ಮುಂದಾದ ಶಾಸಕ-ಸಂಸದ

ಕೋಲಾರ : ಭೂ ಕಬಳಿಕೆ ವಿಷಯಕ್ಕೆ ಸಂಬಂಧಪಟ್ಟಂತೆ ಕೋಲಾರದ ಸಂಸದ ಮುನಿಸ್ವಾಮಿ ಹಾಗೂ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ನಡುವೆ ಅವಾಚ್ಯ ಶಬ್ಧಗಳ ವಾಗ್ವಾದ ನಡೆದಿದ್ದು, ಕೈ ಕೈ ಮಿಲಾಯಿಸುವ ಹಂತಕ್ಕೆ ಪರಿಸ್ಥಿತಿ ಹೋದ ಘಟನೆ ನಡೆದಿದೆ.

ರಾಜ್ಯಸರ್ಕಾರದ ಸೂಚನೆಯ ಮೇರೆಗೆ ಸೋಮವಾರ ಕೋಲಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಸುರೇಶ್ ಜನತಾದರ್ಶನ ನಡೆಸುತ್ತಿದ್ದರು. ವೇದಿಕೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಕುಳಿತಿದ್ದರು. ಜನತಾದರ್ಶನದ ವೇಳೆ ತಡವಾಗಿ ಆಗಮಿಸಿದ ಸಂಸದ ಮುನಿಸ್ವಾಮಿ ಅವರು ಭೂಗಳ್ಳರನ್ನು ಪಕ್ಕದಲ್ಲೇ ಕೂರಿಸಿಕೊಂಡು ಯಾವ ರೀತಿ ನ್ಯಾಯ ಕೊಡಲು ಸಾಧ್ಯ ಎಂದು ಪ್ರಶ್ನಿಸಿದರು.

ಇದರಿಂದ ಸಿಟ್ಟಿಗೆದ್ದ ಎಸ್.ಎನ್.ನಾರಾಯಣಸ್ವಾಮಿ ಸಂಸದರ ವಿರುದ್ಧ ವಾಗ್ಧಾಳಿ ನಡೆಸಿದರು. ಶಾಸಕರಿಗೆ ಗೌರವ ಕೊಟ್ಟು ಮಾತನಾಡುವುದನ್ನು ಕಲಿ, ಏನೆಂದುಕೊಂಡಿದ್ದೀಯ ಎಂದು ಏಕವಚನದಲ್ಲಿ ತರಾಟೆಗೆ ತೆಗೆದುಕೊಂಡರು. ಇದರಿಂದ ರೊಚ್ಚಿಗೆದ್ದ ಮುನಿಸ್ವಾಮಿ ಶಾಸಕರ ಮೇಲೇರಿ ಹೋಗಿದ್ದಲ್ಲದೆ, ಹಲ್ಲೆ ನಡೆಸುವ ರೀತಿ ವರ್ತಿಸಿದರು.

ತಕ್ಷಣವೇ ಮಧ್ಯಪ್ರವೇಶ ಮಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಕಾರಿಗಳು ಸೇರಿದಂತೆ ಇತರೆ ಸಿಬ್ಬಂದಿಗಳು ಸಂಸದ ಮುನಿಸ್ವಾಮಿಯವರನ್ನು ಹೊರಗೆ ಕರೆದುಕೊಂಡು ಹೋದರು. ಬಳಿಕ ಸಮಾಧಾನಪಡಿಸಲಾಯಿತು.
ನಂತರ ಮುಂದುವರೆದ ಜನತಾದರ್ಶನದಲ್ಲಿ ಸಚಿವರ ಮತ್ತೊಂದು ಪಕ್ಕದಲ್ಲಿ ಸಂಸದರು ಆಸೀನರಾದರು. ಇದಕ್ಕೂ ಮೊದಲು ಮಾತನಾಡಿದ ಸಂಸದರು, ನಾನು ನಾರಾಯಣಸ್ವಾಮಿ ಹೆಸರನ್ನು ಪ್ರಸ್ತಾಪಿಸಿ ಆರೋಪ ಮಾಡಲಿಲ್ಲ. ಭೂಗಳ್ಳರಿಂದ ಅನ್ಯಾಯವಾಗುತ್ತಿದೆ. ಒತ್ತುವರಿ ತೆರವು ಮಾಡಿ ಎಂದಷ್ಟೇ ಹೇಳಿದೆ. ನಾರಾಯಣಸ್ವಾಮಿ ತಮಗೆ ಹೇಳಿದ್ದು ಎಂದು ಭಾವಿಸಿ ಜಗಳಕ್ಕೆ ಬಂದಿದ್ದಾರೆ. ಬಂಗಾರಪೇಟೆ ಸೇರಿದಂತೆ ಹಲವಾರು ಕಡೆ ಬಡವರ ಭೂಮಿ ಒತ್ತುವರಿಯಾಗಿದೆ. ಅವರಿಗೆ ನ್ಯಾಯ ಕೊಡಿಸಬೇಕೆಂದು ತಾವು ಪ್ರಸ್ತಾಪಿಸಿದ್ದೇವೆ ಎಂದು ಹೇಳಿದರು.

ಸಂಸದರು ಮತ್ತು ಶಾಸಕರ ನಡುವೆ ಏಕವಚನ, ಅವಾಚ್ಯ ಶಬ್ಧಗಳ ಬಳಕೆ, ಗೂಂಡಾ ಮಾದರಿಯ ಹಲ್ಲೆ ಪ್ರಯತ್ನಜನತಾದರ್ಶನಕ್ಕೆ ಆಗಮಿಸಿದ್ದ ಸಾರ್ವಜನಿಕರನ್ನು ದಿಗ್ಭ್ರಾಂತರನ್ನಾಗುವಂತೆ ಮಾಡಿತು.

lokesh

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

34 mins ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

5 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

5 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

6 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

6 hours ago