BREAKING NEWS

ವೇದಿಕೆಯಲ್ಲಿ ಭೂ ಗಲಾಟೆ : ಹೊಡೆದಾಟಕ್ಕೆ ಮುಂದಾದ ಶಾಸಕ-ಸಂಸದ

ಕೋಲಾರ : ಭೂ ಕಬಳಿಕೆ ವಿಷಯಕ್ಕೆ ಸಂಬಂಧಪಟ್ಟಂತೆ ಕೋಲಾರದ ಸಂಸದ ಮುನಿಸ್ವಾಮಿ ಹಾಗೂ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ನಡುವೆ ಅವಾಚ್ಯ ಶಬ್ಧಗಳ ವಾಗ್ವಾದ ನಡೆದಿದ್ದು, ಕೈ ಕೈ ಮಿಲಾಯಿಸುವ ಹಂತಕ್ಕೆ ಪರಿಸ್ಥಿತಿ ಹೋದ ಘಟನೆ ನಡೆದಿದೆ.

ರಾಜ್ಯಸರ್ಕಾರದ ಸೂಚನೆಯ ಮೇರೆಗೆ ಸೋಮವಾರ ಕೋಲಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಸುರೇಶ್ ಜನತಾದರ್ಶನ ನಡೆಸುತ್ತಿದ್ದರು. ವೇದಿಕೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಕುಳಿತಿದ್ದರು. ಜನತಾದರ್ಶನದ ವೇಳೆ ತಡವಾಗಿ ಆಗಮಿಸಿದ ಸಂಸದ ಮುನಿಸ್ವಾಮಿ ಅವರು ಭೂಗಳ್ಳರನ್ನು ಪಕ್ಕದಲ್ಲೇ ಕೂರಿಸಿಕೊಂಡು ಯಾವ ರೀತಿ ನ್ಯಾಯ ಕೊಡಲು ಸಾಧ್ಯ ಎಂದು ಪ್ರಶ್ನಿಸಿದರು.

ಇದರಿಂದ ಸಿಟ್ಟಿಗೆದ್ದ ಎಸ್.ಎನ್.ನಾರಾಯಣಸ್ವಾಮಿ ಸಂಸದರ ವಿರುದ್ಧ ವಾಗ್ಧಾಳಿ ನಡೆಸಿದರು. ಶಾಸಕರಿಗೆ ಗೌರವ ಕೊಟ್ಟು ಮಾತನಾಡುವುದನ್ನು ಕಲಿ, ಏನೆಂದುಕೊಂಡಿದ್ದೀಯ ಎಂದು ಏಕವಚನದಲ್ಲಿ ತರಾಟೆಗೆ ತೆಗೆದುಕೊಂಡರು. ಇದರಿಂದ ರೊಚ್ಚಿಗೆದ್ದ ಮುನಿಸ್ವಾಮಿ ಶಾಸಕರ ಮೇಲೇರಿ ಹೋಗಿದ್ದಲ್ಲದೆ, ಹಲ್ಲೆ ನಡೆಸುವ ರೀತಿ ವರ್ತಿಸಿದರು.

ತಕ್ಷಣವೇ ಮಧ್ಯಪ್ರವೇಶ ಮಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಕಾರಿಗಳು ಸೇರಿದಂತೆ ಇತರೆ ಸಿಬ್ಬಂದಿಗಳು ಸಂಸದ ಮುನಿಸ್ವಾಮಿಯವರನ್ನು ಹೊರಗೆ ಕರೆದುಕೊಂಡು ಹೋದರು. ಬಳಿಕ ಸಮಾಧಾನಪಡಿಸಲಾಯಿತು.
ನಂತರ ಮುಂದುವರೆದ ಜನತಾದರ್ಶನದಲ್ಲಿ ಸಚಿವರ ಮತ್ತೊಂದು ಪಕ್ಕದಲ್ಲಿ ಸಂಸದರು ಆಸೀನರಾದರು. ಇದಕ್ಕೂ ಮೊದಲು ಮಾತನಾಡಿದ ಸಂಸದರು, ನಾನು ನಾರಾಯಣಸ್ವಾಮಿ ಹೆಸರನ್ನು ಪ್ರಸ್ತಾಪಿಸಿ ಆರೋಪ ಮಾಡಲಿಲ್ಲ. ಭೂಗಳ್ಳರಿಂದ ಅನ್ಯಾಯವಾಗುತ್ತಿದೆ. ಒತ್ತುವರಿ ತೆರವು ಮಾಡಿ ಎಂದಷ್ಟೇ ಹೇಳಿದೆ. ನಾರಾಯಣಸ್ವಾಮಿ ತಮಗೆ ಹೇಳಿದ್ದು ಎಂದು ಭಾವಿಸಿ ಜಗಳಕ್ಕೆ ಬಂದಿದ್ದಾರೆ. ಬಂಗಾರಪೇಟೆ ಸೇರಿದಂತೆ ಹಲವಾರು ಕಡೆ ಬಡವರ ಭೂಮಿ ಒತ್ತುವರಿಯಾಗಿದೆ. ಅವರಿಗೆ ನ್ಯಾಯ ಕೊಡಿಸಬೇಕೆಂದು ತಾವು ಪ್ರಸ್ತಾಪಿಸಿದ್ದೇವೆ ಎಂದು ಹೇಳಿದರು.

ಸಂಸದರು ಮತ್ತು ಶಾಸಕರ ನಡುವೆ ಏಕವಚನ, ಅವಾಚ್ಯ ಶಬ್ಧಗಳ ಬಳಕೆ, ಗೂಂಡಾ ಮಾದರಿಯ ಹಲ್ಲೆ ಪ್ರಯತ್ನಜನತಾದರ್ಶನಕ್ಕೆ ಆಗಮಿಸಿದ್ದ ಸಾರ್ವಜನಿಕರನ್ನು ದಿಗ್ಭ್ರಾಂತರನ್ನಾಗುವಂತೆ ಮಾಡಿತು.

lokesh

Recent Posts

ಜಾನಕಿ ಅಮ್ಮ ಮೊದಲು, ಕೊನೆಯ ಹಾಡು ಹಾಡಿದ್ದು, ಗಾಯನ ನಿಲ್ಲಿಸಿದ್ದು ಮೈಸೂರಿನಲ್ಲೇ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಜೀವಮಾನದ ಮೊದಲ ಸಾರ್ವಜನಿಕ ಗಾಯನ ಕಾರ್ಯಕ್ರಮ ಮೈಸೂರಿನಿಂದಲೇ ಆರಂಭವಾಗಿತ್ತು. ಅಚ್ಚರಿಯೆಂದರೆ ಅವರ…

43 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಎಸ್‌ಐಆರ್ : ಕರ್ನಾಟಕದ ಕ್ರಮ ಬಿಜೆಪಿಗೆ ಕಹಿ ಗುಳಿಗೆ !

ಕಳೆದ ಒಂದು ವರ್ಷದಿಂದ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆಯದೇ ಸದ್ದು. ಇದೇನು ಹೊಸ ಬೆಳವಣಿಗೆಯಲ್ಲ. ಇದುವರೆಗೆ ಚುನಾವಣಾ ಆಯೋಗ ದೇಶದಾದ್ಯಂತ…

43 mins ago

ಮೈಸೂರು | ನೆಚ್ಚಿನ ತೋಟದಲ್ಲಿ ಎಸ್.ಜಾನಕಿ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ

ಮೈಸೂರು : ಗಾನಕೋಗಿಲೆ ಎಸ್. ಜಾನಕಿ ಅವರ ಅಂತ್ಯಸಂಸ್ಕಾರದ ಸಿದ್ಧತೆಗಳು ಮೈಸೂರಿನ ಸರಗೂರು ಬಳಿಯ ಕಣಿಯನಹುಂಡಿ ಗ್ರಾಮದಲ್ಲಿ ಭರದಿಂದ ಸಾಗುತ್ತಿದ್ದು,…

2 hours ago

ಜಾನಕಿ ಅಮ್ಮನ ಸ್ಮಾರಕ ನಿರ್ಮಾಣವಾಗಬೇಕು : ಖ್ಯಾತ ನಿರ್ದೇಶಕ ಹಂಸಲೇಖ

ಮೈಸೂರು : ಕರುನಾಡಿನ ಮಣ್ಣಲ್ಲಿ ಜಾನಕಿ ಅಮ್ಮ ಕಣ್ಮುಚ್ಚಿದ್ದಾರೆ. ಅವರಿಗಾಗಿ ಕರುನಾಡ ಜನ ಕಣ್ಣು ತೆರೆಯಬೇಕು. ಅವರ ಸ್ಮಾರಕ ನಿರ್ಮಾಣವಾಗಬೇಕು…

3 hours ago

ಹಾಡುಪಾಡು | ಎಸ್‌ಐಆರ್‌

ಫಾತಿಮಾ ರಲಿಯಾ ಯು ಟ್ಯೂಬ್‌ನಲ್ಲಿ ಒಬ್ಬೊಬ್ಬ ತಜ್ಞರೂ ಒಂದೊಂದು ಮಾಹಿತಿ ಕೊಡುತ್ತಿದ್ದರು. ಇದೆಲ್ಲಾ ಗೊಂದಲ ಬೇಡ ಎಂದು ಚಾಟ್‌ಜಿಪಿಟಿಯ ಬಳಿ…

3 hours ago

ಹಾಡುಪಾಡು | ಯರಕನಗದ್ದೆ ಪೋಡಿನಲ್ಲಿ ವೋಟು ಕಾರ್ಡಿನ ಪರದಾಟ

ಜಯಶಂಕರ್ ನಾನು ಶಾಲೆಯ ಅಂಗಳದಲ್ಲಿ ಕುಳಿತುಕೊಂಡು ಮಕ್ಕಳಿಗೆ ಪಾಠ ಹೇಳಿಕೊಡುತ್ತಿರುವಂತಹ ಸಂದರ್ಭದಲ್ಲಿ ನಾಲ್ಕಾರು ಸೋಲಿಗರು ಗುಂಪಿನಲ್ಲಿ ಏನೇನೋ ಗೊಣಗಾಡಿಕೊಂಡು ಹೋಗುತ್ತಿದ್ದರು.…

4 hours ago