ಮುಂಬೈ : ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ್ ತಹಸಿಲ್ನ ಇರ್ಶಲವಾಡಿ ಗ್ರಾಮದಲ್ಲಿ ಭಾರೀ ಭೂಕುಸಿತದಿಂದ ಇಲ್ಲಿಯವರೆಗೆ 22 ಜನ ಸಾವನ್ನಪ್ಪಿದ್ದಾರೆ ಎಂದು ಎನ್ಡಿಆರ್ಎಫ್ ಅಧಿಕಾರಿಗಳು ತಿಳಿಸಿದ್ದಾರೆ. ಭೂಕುಸಿತದಿಂದ ಅವಶೇಷಗಳಡಿಯಲ್ಲಿ ಸಿಲುಕಿರುವ ಜನರ ರಕ್ಷಣೆ ಕಾರ್ಯಚರಣೆ ಮುಂದುವರಿದಿದೆ. ರಕ್ಷಣಾ ಕಾರ್ಯಚರಣೆ ಮೂರನೇ ದಿನಕ್ಕೆ ಮುಂದುವರಿದಿದ್ದು, ಒಟ್ಟು 22 ಜನ ಸಾವನ್ನಪ್ಪಿದ್ದಾರೆ. 86 ಮಂದಿ ಇನ್ನೂ ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರೀ ಮಳೆಯಿಂದ ನೆನ್ನೆ ರಕ್ಷಣಾ ಕಾರ್ಯಚರಣೆ ಸ್ಥಗಿತಗೊಂಡಿತು. ನಾಲ್ಕು ಎನ್ಡಿಆರ್ಎಫ್ ತಂಡಗಳು ಮತ್ತು ಇತರ ಏಜೆನ್ಸಿಗಳು, ಸ್ಥಳೀಯರು ಇಂದು ಬೆಳಿಗ್ಗೆ ಕಾರ್ಯಾಚರಣೆಯನ್ನು ಪುನರಾರಂಭಿಸಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಈ ಪ್ರದೇಶದಲ್ಲಿ ಒಟ್ಟು 48 ಕುಟುಂಬಗಳು ವಾಸವಾಗಿದ್ದು, 17 ಮನೆಗಳು ಭೂಕುಸಿತದ ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದೆ. ರಾಯಗಢ ಜಿಲ್ಲಾ ವಿಪತ್ತು ನಿರ್ವಹಣಾ ಕಚೇರಿಯ ಪ್ರಕಾರ, 48 ಕುಟುಂಬಗಳ 229 ಜನರಲ್ಲಿ ಇಲ್ಲಿಯವರೆಗೆ 22 ಜನ ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಇನ್ನೂ 111 ಮಂದಿ ಸುರಕ್ಷಿತವಾಗಿದ್ದಾರೆ, 86 ಜನರನ್ನು ಇನ್ನೂ ಪತ್ತೆ ನಡೆಸಲಾಗುತ್ತಿದೆ ಎಂದು ಹೇಳಿದೆ.
ಗಾಯಗೊಂಡಿರುವವರನ್ನು ನಿರಾಶ್ರಿತರ ಶಿಬಿರಗಳಲ್ಲಿ ದಾಖಲಿಸಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ರಕ್ಷಣಾ ಕಾರ್ಯಚರಣೆ ಬಗ್ಗೆ ರಾಜ್ಯ ಸರ್ಕಾರ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆಯುತ್ತಿದೆ. ಭೂಕುಸಿತ ಘಟನೆಯ ಹಿನ್ನೆಲೆಯಲ್ಲಿ, ರಾಜ್ಯದ ಎಲ್ಲಾ ಭೂಕುಸಿತ ಪೀಡಿತ ಪ್ರದೇಶಗಳ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ ಶುಕ್ರವಾರ ರಾಜ್ಯ ವಿಧಾನಸಭೆಗೆ ತಿಳಿಸಿದರು.
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…
ನ್ಯಾಯಬೆಲೆ ಅಂಗಡಿಗಳ ಗ್ರಾಹಕರ ಮನವಿಗೆ ಸರ್ಕಾರದ ಸ್ಪಂದನೆ ಅ.1ರಿಂದ ಬೆಳಿಗ್ಗೆ 7ರಿಂದ ಮಧ್ಯಾಹ್ನ 12; ಸಂಜೆ 4ರಿಂದ ರಾತ್ರಿ 8…