BREAKING NEWS

ಭಾರತ, ಚೀನಾ ಸೇರಿ 7 ದೇಶಗಳಿಗೆ ಉಚಿತ ಪ್ರವಾಸಿ ವೀಸಾ ನೀಡಿದ ಲಂಕಾ ಕ್ಯಾಬಿನೆಟ್

ಕೊಲಂಬೊ: ಭಾರತ, ಚೀನಾ ಹಾಗೂ ರಷ್ಯಾ ಸೇರಿದಂತೆ ಏಳು ದೇಶಗಳ ಪ್ರವಾಸಿಗರಿಗೆ ಉಚಿತ ಪ್ರವಾಸಿ ವೀಸಾ ನೀಡುವ ನೀತಿಗೆ ಶ್ರೀಲಂಕಾ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದು ಲಂಕಾ ವಿದೇಶಾಂಗ ಸಚಿವ ಅಲಿ ಸಬ್ರಿ ಅವರು ಮಂಗಳವಾರ ತಿಳಿಸಿದ್ದಾರೆ.

ಸಾಲದ ಸುಳಿಯಲ್ಲಿ ಸಿಲುಕಿರುವ ದ್ವೀಪ ರಾಷ್ಟ್ರದ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಶ್ರೀಲಂಕಾ ಈ ನಿರ್ಧಾರ ತೆಗೆದುಕೊಂಡಿದೆ.

ಉಚಿತ ಪ್ರವಾಸಿ ವೀಸಾ ನೀತಿಯನ್ನು ಪ್ರಾಯೋಗಿಕವಾಗಿ ಮಾರ್ಚ್ 31, 2024 ರವರೆಗೆ ಜಾರಿಗೆ ತರಲಾಗುವುದು ಎಂದು ವಿದೇಶಾಂಗ ಸಚಿವ ಸಬ್ರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭಾರತ, ಚೀನಾ, ರಷ್ಯಾ, ಮಲೇಷ್ಯಾ, ಜಪಾನ್, ಇಂಡೋನೇಷ್ಯಾ ಮತ್ತು ಥೈಲ್ಯಾಂಡ್‌ ಪ್ರವಾಸಿಗರಿಗೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಉಚಿತ ಪ್ರವೇಶಕ್ಕೆ ಲಂಕಾ ಕ್ಯಾಬಿನೆಟ್ ಅನುಮೋದನೆ ನೀಡಿದೆ.

ಈ ಏಳು ದೇಶಗಳ ಪ್ರವಾಸಿಗರು ಶ್ರೀಲಂಕಾಕ್ಕೆ ಭೇಟಿ ನೀಡಿದಾಗ ಯಾವುದೇ ಶುಲ್ಕವಿಲ್ಲದೆ ವೀಸಾಗಳನ್ನು ಪಡೆಯಬಹುದು.

ಭಾರತವು ಸಾಂಪ್ರದಾಯಿಕವಾಗಿ ಶ್ರೀಲಂಕಾದ ಪ್ರಮುಖ ಪ್ರವಾಸೋದ್ಯಮ ಮಾರುಕಟ್ಟೆಯಾಗಿದೆ. ಕಳೆದ ಸೆಪ್ಟೆಂಬರ್ ನಲ್ಲಿ 30,000ಕ್ಕೂ ಹೆಚ್ಚು ಭಾರತೀಯರು ಶ್ರೀಲಂಕಾಗೆ ಭೇಟಿ ನೀಡಿದ್ದು, ಅಗ್ರಸ್ಥಾನದಲ್ಲಿದೆ. 8 ಸಾವಿರ ಚೀನೀ ಪ್ರವಾಸಿಗರ ಭೇಟಿಯೊಂದಿಗೆ ಚೀನಾ ಎರಡನೇ ಸ್ಥಾನದಲ್ಲಿದೆ.

andolanait

Recent Posts

ಕುಶಾಲನಗರ: ಮನೆ ಬಳಿ ನಿಲ್ಲಿಸಿದ್ದ ಆಟೋ ಜಖಂಗೊಳಿಸಿದ ಕಾಡಾನೆ

ಕುಶಾಲನಗರ: ಒಂಟಿಸಲಗವೊಂದು ಮನೆ ಬಳಿ ನಿಲ್ಲಿಸಿದ್ದ ಆಟೋ ರಿಕ್ಷಾದ ಮೇಲೆ ದಾಳಿ ನಡೆಸಿ ಜಖಂಗೊಳಿಸಿರುವ ಘಟನೆ ಕುಶಾಲನಗರದ ನೆಲ್ಲಿ ಹುದಿಕೇರಿ…

4 mins ago

ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಸಿಎಂ ಸಿದ್ದರಾಮಯ್ಯ

ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅವಶ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ…

14 mins ago

ಹಾರ್ಮುಜ್‌ ಜಲಸಂಧಿ ದಾಟಲು ಭಾರತಕ್ಕೆ ಇರಾನ್‌ ಸಮ್ಮತಿ

ಟೆಹರಾನ್:‌ ಇರಾನ್‌-ಇಸ್ರೇಲ್‌ ಸಂಘರ್ಷದ ಮಧ್ಯೆಯೇ ಭಾರತಕ್ಕೆ ಮತ್ತೊಂದು ಗುಡ್‌ನ್ಯೂಸ್‌ ಮತ್ತೊಂದು ಗುಡ್‌ನ್ಯೂಸ್‌ ಸಿಕ್ಕಿದೆ. ಭಾರತದ ಧ್ವಜವನ್ನು ಹೊಂದಿರುವ ಎರಡು ದ್ರವೀಕೃತ…

47 mins ago

ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ಇಲ್ಲ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿದ…

1 hour ago

ಪೆಟ್ರೋಲ್‌ ಖಾಲಿ ವದಂತಿ: ಬಂಕ್‌ಗಳಿಗೆ ಮುಗಿಬಿದ್ದ ಜನತೆ

ಚಾಮರಾಜನಗರ: ಇರಾನ್‌-ಇಸ್ರೇಲ್‌ ನಡುವಿನ ಸಂಘರ್ಷ ಮುಂದುವರಿದಿದ್ದು, ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿರುವ ಪರಿಣಾಮ ಸೋಷಿಯಲ್‌ ಮೀಡಿಯಾದಲ್ಲಿ ಪೆಟ್ರೋಲ್‌, ಡೀಸೆಲ್‌…

1 hour ago

ನಂಜನಗೂಡು| ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ

ನಂಜನಗೂಡು: ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ನಂಜನಗೂಡು ತಾಲ್ಲೂಕಿನ ಹನುಮನಪುರ…

1 hour ago