BREAKING NEWS

ವಕೀಲರು ಮುಷ್ಕರ ನಡೆಸುವಂತಿಲ್ಲ ಅಥವಾ ನ್ಯಾಯಾಂಗ ಕಾರ್ಯಗಳಿಂದ ದೂರವಿರುವಂತಿಲ್ಲ : ಸುಪ್ರೀಂ ಕೋರ್ಟ್

ನವದೆಹಲಿ : ವಕೀಲರು ಮುಷ್ಕರ ನಡೆಸುವಂತಿಲ್ಲ ಹಾಗೂ ನ್ಯಾಯಾಂಗದ ಕಾರ್ಯಗಳಿಂದ ದೂರ ಉಳಿಯುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ನೈಜ ಸಮಸ್ಯೆಗಳ ಪರಿಹಾರಕ್ಕಾಗಿ ಅಡ್ವೊಕೇಟ್ ಗಳು ಮನವಿ ಮಾಡಬಹುದಾಗಿರುವ ರೀತಿಯಲ್ಲಿ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಕುಂದುಕೊರತೆ ಪರಿಹಾರ ಸಮಿತಿಯನ್ನು ರಚಿಸುವಂತೆ ಎಲ್ಲಾ ಹೈಕೋರ್ಟ್ ಗಳಿಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.

ನ್ಯಾ. ಎಂಆರ್ ಶಾ ಹಾಗೂ ಅಸಾದುದ್ದೀನ್ ಅಮಾನುಲ್ಲಾ ಅವರಿದ್ದ ಪೀಠ, ಜಿಲ್ಲಾ ಕೋರ್ಟ್ ಮಟ್ಟದಲ್ಲಿ ಕುಂದುಕೊರತೆ ಪರಿಹಾರ ಸಮಿತಿ ರಚನೆಯಾಗಬೇಕೆಂದು ಹೇಳಿದ್ದು, ಈ ಮೂಲಕ ಫೈಲಿಂಗ್ ಅಥವಾ ಪ್ರಕರಣಗಳ ಪಟ್ಟಿ ಅಥವಾ ಕೆಳ ನ್ಯಾಯಾಂಗದ ಸದಸ್ಯರ ದುರ್ವರ್ತನೆ, ಕಾರ್ಯವಿಧಾನದ ಬದಲಾವಣೆಗಳಿಗೆ ಸಂಬಂಧಿಸಿದ ಸಮಸ್ಯೆಗಳು ಬಗೆಹರಿಯಬೇಕೆಂದು ಹೇಳಿದ್ದಾರೆ.

ನಾವು ಮತ್ತೊಮ್ಮೆ ಹೇಳುತ್ತಿದ್ದೆವೆ ಬಾರ್ ಕೌನ್ಸಿಲ್ ನ ಯಾವುದೇ ಸದಸ್ಯ ಮುಷ್ಕರ ನಡೆಸುವಂತಿಲ್ಲ. ವಕೀಲರು ಮುಷ್ಕರ ನಡೆಸುವುದು ಅಥವಾ ಅವರ ಕೆಲಸದಿಂದ ದೂರವಿರುವುದು ನ್ಯಾಯಾಂಗ ಕೆಲಸಕ್ಕೆ ಅಡ್ಡಿಯಾಗುತ್ತದೆ ಎಂದು ಈ ನ್ಯಾಯಾಲಯವು ಪದೇ ಪದೇ ಒತ್ತಿಹೇಳಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಪೀಠ ಹೇಳಿದೆ.

ತಮ್ಮ ದೂರುಗಳ ಪರಿಹಾರಕ್ಕೆ ಸೂಕ್ತ ವೇದಿಕೆಯನ್ನು ಕೋರಿ ಡೆಹ್ರಾಡೂನ್‌ನ ಜಿಲ್ಲಾ ವಕೀಲರ ಸಂಘವು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯವು ಈ ಆದೇಶದ ಮೂಲಕ ವಿಲೇವಾರಿ ಮಾಡಿದೆ ಮತ್ತು ಈ ಆದೇಶದ ಪ್ರತಿಯನ್ನು ಎಲ್ಲಾ ಹೈಕೋರ್ಟ್‌ಗಳ ರಿಜಿಸ್ಟ್ರಾರ್ ಜನರಲ್‌ಗೆ ಕಳುಹಿಸಲು ಸೂಚಿಸಿ ಆದೇಶ ಹೊರಡಿಸಿದೆ.

lokesh

Recent Posts

ಗ್ಯಾರಂಟಿ ಕುರಿತು ಸರ್ವೇ ನಡೆಸಲಿ : ಎಚ್.ವಿಶ್ವನಾಥ್‌ ಒತ್ತಾಯ

ಮೈಸೂರು : ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿಯನ್ನು ದಿವಾಳಿ ಅಂಚಿಗೆ ತಂದು ನಿಲ್ಲಿಸಿರುವ ಗ್ಯಾರಂಟಿ ಯೋಜನೆಗಳ ಕುರಿತು ಸರ್ವೇ ನಡೆಸಬೇಕು. ಕಳೆದ…

22 mins ago

ಹನೂರು | ವಿವಿಧ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಪ್ರತಿಭಟನೆ

ಹನೂರು : ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ…

42 mins ago

ಜಮೀನುಗಳಲ್ಲಿ ಕಾಡಾನೆ ಓಡಾಟ : ಗ್ರಾಮಸ್ಥರಲ್ಲಿ ಆತಂಕ

ಹನೂರು : ಬೆಳ್ಳಂಬೆಳಗ್ಗೆ ಎರಡು ಕಾಡಾನೆಗಳು ಜಮೀನುಗಳಲ್ಲಿ ಓಡಾಡಿ ಆತಂಕ ಸೃಷ್ಟಿಸಿದ ಘಟನೆ ಹನೂರು ತಾಲೂಕಿನ ಗುಂಡಾಪುರ ಗ್ರಾಮದಲ್ಲಿ ಶನಿವಾರ…

1 hour ago

ವಿದ್ಯಾರ್ಥಿಗಳು ಕಲೆ ಮತ್ತು ಸಂಸ್ಕೃತಿಯನ್ನು ಮೈಗೂಡಿಸಿಕೊಳ್ಳಿ : ರಂಗೇಗೌಡ ಸಲಹೆ

ಮೈಸೂರು : ಕಲೆ ಎಲ್ಲರಿಗೂ ಒಲಿದು ಬರೋದಿಲ್ಲ ಕೆಲವರಿಗೆ ಮಾತ್ರ ಒಲಿದು ಬರುತ್ತದೆ. ಕಲೆ ಮತ್ತು ಸಂಸ್ಕೃತಿ ಮೈಗೂಡಿಸಿಕೊಂಡರೆ ತಮ್ಮ…

1 hour ago

ಲಂಚ | ಲೋಕಾಯುಕ್ತ ಬಲೆಗೆ ಬಿದ್ದ ಬಿಜೆಪಿ ಶಾಸಕ

ಗದಗ : ಗುತ್ತಿಗೆದಾರನಿಂದ ಕಮಿಷನ್‌ ರೂಪದಲ್ಲಿ ಐದು ಲಕ್ಷ ಹಣ ಪಡೆಯುತ್ತಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ…

2 hours ago

ರಣರಂಗವನ್ನು ಬಿಟ್ಟು ಓಡಿ ಹೋಗುವ ಹೇಡಿ ನಾನಾಗಲಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನನ್ನನ್ನು ರಾಜಕೀಯವಾಗಿ ಮುಗಿಸಲು ಹಲವಾರು ದೊಡ್ಡ ದೊಡ್ಡ ನಾಯಕರು ಹಲವಾರು ಬಗೆಯ ಕುಟಿಲ ಕಾರಸ್ತಾನಗಳನ್ನು ಮಾಡಿದ್ದಾರೆ. ರಣರಂಗವನ್ನು ಬಿಟ್ಟು…

4 hours ago