BREAKING NEWS

ವಕೀಲರು ಮುಷ್ಕರ ನಡೆಸುವಂತಿಲ್ಲ ಅಥವಾ ನ್ಯಾಯಾಂಗ ಕಾರ್ಯಗಳಿಂದ ದೂರವಿರುವಂತಿಲ್ಲ : ಸುಪ್ರೀಂ ಕೋರ್ಟ್

ನವದೆಹಲಿ : ವಕೀಲರು ಮುಷ್ಕರ ನಡೆಸುವಂತಿಲ್ಲ ಹಾಗೂ ನ್ಯಾಯಾಂಗದ ಕಾರ್ಯಗಳಿಂದ ದೂರ ಉಳಿಯುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ನೈಜ ಸಮಸ್ಯೆಗಳ ಪರಿಹಾರಕ್ಕಾಗಿ ಅಡ್ವೊಕೇಟ್ ಗಳು ಮನವಿ ಮಾಡಬಹುದಾಗಿರುವ ರೀತಿಯಲ್ಲಿ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಕುಂದುಕೊರತೆ ಪರಿಹಾರ ಸಮಿತಿಯನ್ನು ರಚಿಸುವಂತೆ ಎಲ್ಲಾ ಹೈಕೋರ್ಟ್ ಗಳಿಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.

ನ್ಯಾ. ಎಂಆರ್ ಶಾ ಹಾಗೂ ಅಸಾದುದ್ದೀನ್ ಅಮಾನುಲ್ಲಾ ಅವರಿದ್ದ ಪೀಠ, ಜಿಲ್ಲಾ ಕೋರ್ಟ್ ಮಟ್ಟದಲ್ಲಿ ಕುಂದುಕೊರತೆ ಪರಿಹಾರ ಸಮಿತಿ ರಚನೆಯಾಗಬೇಕೆಂದು ಹೇಳಿದ್ದು, ಈ ಮೂಲಕ ಫೈಲಿಂಗ್ ಅಥವಾ ಪ್ರಕರಣಗಳ ಪಟ್ಟಿ ಅಥವಾ ಕೆಳ ನ್ಯಾಯಾಂಗದ ಸದಸ್ಯರ ದುರ್ವರ್ತನೆ, ಕಾರ್ಯವಿಧಾನದ ಬದಲಾವಣೆಗಳಿಗೆ ಸಂಬಂಧಿಸಿದ ಸಮಸ್ಯೆಗಳು ಬಗೆಹರಿಯಬೇಕೆಂದು ಹೇಳಿದ್ದಾರೆ.

ನಾವು ಮತ್ತೊಮ್ಮೆ ಹೇಳುತ್ತಿದ್ದೆವೆ ಬಾರ್ ಕೌನ್ಸಿಲ್ ನ ಯಾವುದೇ ಸದಸ್ಯ ಮುಷ್ಕರ ನಡೆಸುವಂತಿಲ್ಲ. ವಕೀಲರು ಮುಷ್ಕರ ನಡೆಸುವುದು ಅಥವಾ ಅವರ ಕೆಲಸದಿಂದ ದೂರವಿರುವುದು ನ್ಯಾಯಾಂಗ ಕೆಲಸಕ್ಕೆ ಅಡ್ಡಿಯಾಗುತ್ತದೆ ಎಂದು ಈ ನ್ಯಾಯಾಲಯವು ಪದೇ ಪದೇ ಒತ್ತಿಹೇಳಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಪೀಠ ಹೇಳಿದೆ.

ತಮ್ಮ ದೂರುಗಳ ಪರಿಹಾರಕ್ಕೆ ಸೂಕ್ತ ವೇದಿಕೆಯನ್ನು ಕೋರಿ ಡೆಹ್ರಾಡೂನ್‌ನ ಜಿಲ್ಲಾ ವಕೀಲರ ಸಂಘವು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯವು ಈ ಆದೇಶದ ಮೂಲಕ ವಿಲೇವಾರಿ ಮಾಡಿದೆ ಮತ್ತು ಈ ಆದೇಶದ ಪ್ರತಿಯನ್ನು ಎಲ್ಲಾ ಹೈಕೋರ್ಟ್‌ಗಳ ರಿಜಿಸ್ಟ್ರಾರ್ ಜನರಲ್‌ಗೆ ಕಳುಹಿಸಲು ಸೂಚಿಸಿ ಆದೇಶ ಹೊರಡಿಸಿದೆ.

lokesh

Recent Posts

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

11 mins ago

ಮೈಶುಗರ್‌ ಶಾಲಾ ಶಿಕ್ಷಕರಿಗೆ ನೆರವಾದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್‌ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…

35 mins ago

ಸಮಾನತೆ ತರಲೆಂದೇ ಗ್ಯಾರಂಟಿ ಯೋಜನೆಗೆ ಕೋಟಿಗಟ್ಟಲೇ ಹಣ ಖರ್ಚಿ ಮಾಡ್ತಿರೋದು: ಸಿಎಂ ಸಿದ್ದರಾಮಯ್ಯ

ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…

1 hour ago

ಟಿಬಿ ಡ್ಯಾಂ ಕ್ರಸ್ಟ್‌ ಗೇಟ್‌ ಅಳವಡಿಕೆಗೆ ಚಾಲನೆ

ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್‌ ಮುಂದೆ…

2 hours ago

ಮೈಸೂರು| ಮದುವೆ ಆಗುವುದಾಗಿ ನಂಬಿಸಿ ವಕೀಲೆಗೆ ಮೋಸ

ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…

2 hours ago

ಪುರಾವೆ ಇಲ್ಲದೇ ಯಾರ ಮೇಲೂ ತನಿಖೆ ಮಾಡಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…

2 hours ago