ನವದೆಹಲಿ : ವಕೀಲರು ಮುಷ್ಕರ ನಡೆಸುವಂತಿಲ್ಲ ಹಾಗೂ ನ್ಯಾಯಾಂಗದ ಕಾರ್ಯಗಳಿಂದ ದೂರ ಉಳಿಯುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ನೈಜ ಸಮಸ್ಯೆಗಳ ಪರಿಹಾರಕ್ಕಾಗಿ ಅಡ್ವೊಕೇಟ್ ಗಳು ಮನವಿ ಮಾಡಬಹುದಾಗಿರುವ ರೀತಿಯಲ್ಲಿ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಕುಂದುಕೊರತೆ ಪರಿಹಾರ ಸಮಿತಿಯನ್ನು ರಚಿಸುವಂತೆ ಎಲ್ಲಾ ಹೈಕೋರ್ಟ್ ಗಳಿಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.
ನ್ಯಾ. ಎಂಆರ್ ಶಾ ಹಾಗೂ ಅಸಾದುದ್ದೀನ್ ಅಮಾನುಲ್ಲಾ ಅವರಿದ್ದ ಪೀಠ, ಜಿಲ್ಲಾ ಕೋರ್ಟ್ ಮಟ್ಟದಲ್ಲಿ ಕುಂದುಕೊರತೆ ಪರಿಹಾರ ಸಮಿತಿ ರಚನೆಯಾಗಬೇಕೆಂದು ಹೇಳಿದ್ದು, ಈ ಮೂಲಕ ಫೈಲಿಂಗ್ ಅಥವಾ ಪ್ರಕರಣಗಳ ಪಟ್ಟಿ ಅಥವಾ ಕೆಳ ನ್ಯಾಯಾಂಗದ ಸದಸ್ಯರ ದುರ್ವರ್ತನೆ, ಕಾರ್ಯವಿಧಾನದ ಬದಲಾವಣೆಗಳಿಗೆ ಸಂಬಂಧಿಸಿದ ಸಮಸ್ಯೆಗಳು ಬಗೆಹರಿಯಬೇಕೆಂದು ಹೇಳಿದ್ದಾರೆ.
ನಾವು ಮತ್ತೊಮ್ಮೆ ಹೇಳುತ್ತಿದ್ದೆವೆ ಬಾರ್ ಕೌನ್ಸಿಲ್ ನ ಯಾವುದೇ ಸದಸ್ಯ ಮುಷ್ಕರ ನಡೆಸುವಂತಿಲ್ಲ. ವಕೀಲರು ಮುಷ್ಕರ ನಡೆಸುವುದು ಅಥವಾ ಅವರ ಕೆಲಸದಿಂದ ದೂರವಿರುವುದು ನ್ಯಾಯಾಂಗ ಕೆಲಸಕ್ಕೆ ಅಡ್ಡಿಯಾಗುತ್ತದೆ ಎಂದು ಈ ನ್ಯಾಯಾಲಯವು ಪದೇ ಪದೇ ಒತ್ತಿಹೇಳಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಪೀಠ ಹೇಳಿದೆ.
ತಮ್ಮ ದೂರುಗಳ ಪರಿಹಾರಕ್ಕೆ ಸೂಕ್ತ ವೇದಿಕೆಯನ್ನು ಕೋರಿ ಡೆಹ್ರಾಡೂನ್ನ ಜಿಲ್ಲಾ ವಕೀಲರ ಸಂಘವು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯವು ಈ ಆದೇಶದ ಮೂಲಕ ವಿಲೇವಾರಿ ಮಾಡಿದೆ ಮತ್ತು ಈ ಆದೇಶದ ಪ್ರತಿಯನ್ನು ಎಲ್ಲಾ ಹೈಕೋರ್ಟ್ಗಳ ರಿಜಿಸ್ಟ್ರಾರ್ ಜನರಲ್ಗೆ ಕಳುಹಿಸಲು ಸೂಚಿಸಿ ಆದೇಶ ಹೊರಡಿಸಿದೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…