ಚಾಮರಾಜನಗರ : ನಮಗೆ ಆಪರೇಷನ್ ಹಸ್ತ ಅವಶ್ಯಕತೆಯಿಲ್ಲ. ಬೇರೆ ಪಕ್ಷದ ನಾಯಕರು, ಕಾರ್ಯಕರ್ತರು ಅವರಾಗಿಯೇ ಇಚ್ಚೆಪಟ್ಟು ಬಂದರೆ ತಡೆಯಲು ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ನಗರದ ಹೊರವಲಯದ ಬದನಗುಪ್ಪೆ ಕೈಗಾರಿಕೆ ಪ್ರದೇಶದಲ್ಲಿ ಟೆಕ್ರಾನ್ ಬ್ಯಾಟರೀಶ್ ಕಾರ್ಖಾನೆ ಶಂಕುಸ್ಥಾಪನೆ ನೆರವೇರಿಸಲು ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಈ ವೇಳೆ ರೇಣುಕಾಚಾರ್ಯ ಭೇಟಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ,’ನಾನೊಬ್ಬ ಉಪಮುಖ್ಯಮಂತ್ರಿ, ಪಕ್ಷದ ಅಧ್ಯಕ್ಷ. ಹಾಗಾಗಿ ಅವರ ಕ್ಷೇತ್ರದ ಸಮಸ್ಯೆ ಬಗ್ಗೆ ಚರ್ಚಿಸಲು ಬಂದಿದ್ದರು’ ಎಂದರು.
ಅಶೋಕ್ ಗೆ ಮಾಹಿತಿಯಿಲ್ಲ : ಮೋದಿ ಭೇಟಿ ವೇಳೆ ಸಿಎಂ- ಡಿಸಿಎಂ ಆಗಮಿಸದ ಬಗ್ಗೆ ಅಶೋಕ್ ಟೀಕೆಗೆ ಪ್ರತಿಕ್ರಿಯೆ ನೀಡಿ, ಮೋದಿ ಭೇಟಿ ಬಗ್ಗೆ ರಾಜ್ಯ ಬಿಜೆಪಿ ನಾಯಕರಿಗೆ ಪ್ರಧಾನಿ ಕಾರ್ಯಾಲಯದಿಂದ ಮಾಹಿತಿಯನ್ನೇ ನೀಡಿಲ್ಲ. ಆರ್ ಅಶೋಕ್ಗೆ ಪ್ರಧಾನಿ ಭೇಟಿಯ ಸರಿಯಾದ ಮಾಹಿತಿಯೇ ಇಲ್ಲ! ಪ್ರಧಾನಿ ಕಾರ್ಯಕ್ರಮಕ್ಕೆ ಯಾರನ್ನು ಕರೆದಿದ್ದಾರೆ ಅನ್ನೋ ಮಾಹಿತಿನೆ ಇಲ್ಲಿನ ಬಿಜೆಪಿ ನಾಯಕರಿಗೆ ಇಲ್ಲ ಎಂದು ಟಾಂಗ್ ನೀಡಿದರು.
ಸಿಎಂ, ಡಿಸಿಎಂ, ರಾಜ್ಯಪಾಲರು ಬರುವುದದು ಬೇಡವೆಂದು ಪ್ರಧಾನ ಮಂತ್ರಿ ಹೇಳುತ್ತಾರೆ. ಆದರೆ ಇಲ್ಲಿ ಶಿಷ್ಠಾಚಾರ ಪಾಲನೆ ಮಾಡಿಲ್ಲವೆಂದು ಅಶೋಕ್ ಹೇಳುತ್ತಿದ್ದಾರೆ. ಏನೋ ಪ್ರಚಾರಕ್ಕೆ ಮಾತಾಡಬೇಕು ಅಂತ ಮಾಧ್ಯಮದವರ ಮುಂದೆ ಸುಖಾಸುಮ್ಮನೆ ಮಾತನಾಡಿದ್ದಾರೆ ಅಷ್ಟೇ. ನಾವು ಕಾಂಗ್ರೆಸ್ ನವರು ಎಲ್ಲಾ ರೀತಿಯ ಪ್ರೋಟೊಕಾಲ್ ಪಾಲಿಸುತ್ತೇವೆ ಎಂದರು.
ಆಕ್ಸಿಜನ್ ಸಂತ್ರಸ್ತರಿಗೆ ಉದ್ಯೋಗ : ಆಕ್ಸಿಜನ್ ದುರಂತದ ಸಂತ್ರಸ್ತರಿಗೆ ಚಾಮರಾಜನಗರ ಮೆಡಿಕಲ್ ಕಾಲೇಜಿನಲ್ಲೇ ಉದ್ಯೋಗ ನೀಡಲಾಗುವುದು. ಈ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವರು ಹಾಗು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಲಾಗಿದೆ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯೊಂದಿಗು ಸಭೆ ಮಾಡಲಾಗಿದೆ. ಆಕ್ಸಿಜನ್ ದುರಂತದ ಬಗ್ಗೆ ಪರಿಶೀಲಿಸಲು ಸೂಚಿಸಲಾಗಿದೆ. ಸಂತ್ರಸ್ತರಿಗೆ ಸಹಾಯ ಹಾಗು ನ್ಯಾಯ ಒದಗಿಸುವುದು ಮುಖ್ಯಮಂತ್ರಿ ಗಳು ಹಾಗೂ ನನ್ನ ಆದ್ಯತೆಯಾಗಿದೆ ಎಂದು ಹೇಳಿದರು.
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…
ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…
ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…