BREAKING NEWS

ನಾಳೆ ನಡೆಯುವ ಎನ್​ಡಿಎ ಸಭೆಯಲ್ಲಿ 38 ಮೈತ್ರಿ ಪಕ್ಷಗಳ ನಾಯಕರು ಭಾಗಿ: ಜೆಪಿ ನಡ್ಡಾ

ನವದೆಹಲಿ: ಲೋಕಸಭೆ ಚುನಾವಣೆಗೆ ಕೆಲವು ತಿಂಗಳು ಬಾಕಿ ಇರುವಂತೆಯೇ ರಾಜಕೀಯ ಪಕ್ಷಗಳ ಚಟುವಟಿಕೆಗಳು ಗರಿಗೆದರಿವೆ. ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಲಿಸಲು ಪಣತೊಟ್ಟಿರುವ ಕಾಂಗ್ರೆಸ್ ಸೇರಿದಂತೆ 24 ವಿರೋಧ ಪಕ್ಷಗಳು ಬೆಂಗಳೂರಿನಲ್ಲಿ ಸಭೆ ನಡೆಸುತ್ತಿವೆ. ಪ್ರಬಲ ಪೈಪೋಟಿ ಸಾಧ್ಯತೆ ಹಿನ್ನೆಲೆ ಎಚ್ಚೆತ್ತಿರುವ ಬಿಜೆಪಿ, ನಾಳೆ ಎನ್​ಡಿಎ ಸಭೆ ನಡೆಸಿ ಒಗ್ಗಟ್ಟು ಪ್ರದರ್ಶಿಸಲು ಮುಂದಾಗಿದೆ.

ಸಭೆಯಲ್ಲಿ 38 ಪಕ್ಷಗಳ ನಾಯಕರು ಭಾಗಿಯಾಗಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಪಿ ನಡ್ಡಾ, ನಾಳೆ ದೆಹಲಿಯಲ್ಲಿ ನಡೆಯಲಿರುವ ಸಭೆಯಲ್ಲಿ 38 ಮೈತ್ರಿ ಪಕ್ಷಗಳ ನಾಯಕರು ಭಾಗಿಯಾಗಲಿದ್ದಾರೆ. ಪ್ರಧಾನಿ ಮೋದಿ ಮೇಲೆ ದೇಶದ ಜನ ನಂಬಿಕೆಯಿಟ್ಟಿದ್ದಾರೆ. ಮೋದಿ ನೇತೃತ್ವದಲ್ಲಿ ಒಂಬತ್ತು ವರ್ಷಗಳ ಆಡಳಿತ ಯಶಸ್ವಿಯಾಗಿದ್ದು, ಭ್ರಷ್ಟಾಚಾರ ರಹಿತ ಆಡಳಿತ ನೀಡಿದ್ದಾರೆ. ಒಂಬತ್ತು ವರ್ಷಗಳಲ್ಲಿ ಮೋದಿಯವರ ಬಲಿಷ್ಠ ನಾಯಕತ್ವ ನೋಡಿದ್ದೇವೆ. ಕೊವಿಡ್‌ ನಿರ್ವಹಣೆಯಲ್ಲಿ ಪ್ರಧಾನಿ ಮೋದಿ ಯಶಸ್ವಿಯಾಗಿದ್ದಾರೆ ಎಂದರು.

ಕಳೆದ ಒಂಬತ್ತು ವರ್ಷಗಳಲ್ಲಿ ಎಲ್ಲಾ ಎನ್​ಡಿಎ ಮೈತ್ರಿ ಪಕ್ಷಗಳು ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಸೂಚಿ, ಯೋಜನೆಗಳು, ನೀತಿಗಳ ಬಗ್ಗೆ ಆಸಕ್ತಿ ತೋರಿಸಿವೆ. ಪಕ್ಷಗಳು ಎನ್​ಡಿಎ ಕಡೆಗೆ ಉತ್ಸಾಹದಿಂದ ಬರುತ್ತಿವೆ ಎಂದು ನಡ್ಡಾ ಹೇಳಿದರು.

ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಪಕ್ಷಗಳ ಸಭೆಯನ್ನು ಟೀಕಿಸಿದ ಜೆಪಿ ನಡ್ಡಾ, ನಮ್ಮ ಮೈತ್ರಿ ಅಧಿಕಾರಕ್ಕಾಗಿ ಅಲ್ಲ, ಅದು ಸೇವೆಗಾಗಿ. ಆದರೆ ಯುಪಿಎ ಮೈತ್ರಿಗೆ ನಾಯಕನೂ ಇಲ್ಲ, ನೀತಿಯೂ ಇಲ್ಲ. ಇದು ಹಗರಣಕೋರರ ಒಂದು ಗುಂಪು. ಅವರಿಗೆ ಯಾವ ಅಧಿಕಾರವೂ ಇಲ್ಲ ಎಂದರು.

ಇದೇ ವೇಳೆ ಮೋದಿ ಸರ್ಕಾರದ ಸಾಧನೆಗಳನ್ನು ವಿವರಿಸಿದ ನಡ್ಡಾ, ಒಂಬತ್ತು ವರ್ಷಗಳಲ್ಲಿ ಗ್ರಾಮಗಳು, ಬಡವರು, ಶೋಷಿತರು, ಸಂತ್ರಸ್ತರು, ವಂಚಿತರು, ದಲಿತರು, ಯುವಕರು, ಮಹಿಳೆಯರು, ರೈತರ ಕಡೆಗೆ ಯೋಜನೆಗಳನ್ನು ಕೇಂದ್ರೀಕರಿಸಲಾಗಿದೆ. ಅವರ ಸಬಲೀಕರಣದಲ್ಲಿ ನಮಗೆ ಸಾಕಷ್ಟು ಯಶಸ್ಸು ಸಿಕ್ಕಿದೆ. ಕಳೆದ ಒಂಬತ್ತು ವರ್ಷಗಳಲ್ಲಿ, ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಪ್ರಬಲ ನಾಯಕತ್ವ ಸಿಕ್ಕಿದೆ. ಈ ನಾಯಕತ್ವಕ್ಕೆ ಜನರ ಮೆಚ್ಚುಗೆ ಪಡೆದಿದೆ ಮತ್ತು ಅತ್ಯಂತ ಸಕಾರಾತ್ಮಕ ವಾತಾವರಣವನ್ನು ಸೃಷ್ಟಿಸಿದೆ ಎಂದರು.

ಉಪೇಂದ್ರ ಕುಶ್ವಾಹಾಗೆ ಆಹ್ವಾನ ನೀಡಿದ ಜೆಪಿ ನಡ್ಡಾ

ನಾಳೆ ನಡೆಯುವ ಎನ್‌ಡಿಎ ಮಹತ್ವದ ಸಭೆಗೆ ರಾಷ್ಟ್ರೀಯ ಲೋಕ ಜನತಾದಳದ ಅಧ್ಯಕ್ಷ ಉಪೇಂದ್ರ ಕುಶ್ವಾಹಾ ಅವರಿಗೆ ಆಹ್ವಾನ ನೀಡಲಾಗಿದೆ. ಸಭೆಯಲ್ಲಿ ಭಾಗಿಯಾಗುವಂತೆ ಉಪೇಂದ್ರ ಕುಶ್ವಾಹಾಗೆ ನಡ್ಡಾ ಅವರು ಆಹ್ವಾನ ನೀಡಿದ್ದಾರೆ. ಆದರೆ ಅವರ ಭಾಗವಹಿಸುವಿಕೆ ಬಗ್ಗೆ ಇದುವರೆಗೆ ಯಾವುದೇ ಅಧಿಕೃತ ಮಾಹಿತಿ ತಿಳಿದುಬಂದಿಲ್ಲ.

andolanait

Recent Posts

ಮಹದೇಶ್ವರ ಬೆಟ್ಟ ಮುಖ್ಯರಸ್ತೆ ಬದಿಯಲ್ಲಿ ಒಂಟಿಸಲಗ ದರ್ಶನ: ಭಯಭೀತರಾದ ವಾಹನ ಸವಾರರು

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…

2 hours ago

ಸೈಬರ್ ಕ್ರೈಂ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಕಳೆದುಹೋಗಿದ್ದ 104 ಮೊಬೈಲ್ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…

2 hours ago

ಮಕ್ಕಳಿಗೆ ಜಂತುಹುಳು ಮಾತ್ರೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು

ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…

2 hours ago

ಕಾಯಕ ಶರಣರ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು: ಡಾ.ಬಿ.ವಿ.ನಂದೀಶ್

ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…

3 hours ago

ಮಕ್ಕಳು ಅಂತರ್ಜಾಲದ ಬಳಕೆ ಕಡಿಮೆ ಮಾಡಬೇಕು: ಬಿ.ಸಿ.ಶಿವಾನಂದ ಮೂರ್ತಿ

ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…

3 hours ago

ಮಂಡ್ಯ ಜಿಲ್ಲೆ ಇ-ಪೌತಿ ಖಾತಾ ಆಂದೋಲನದಲ್ಲಿ ರಾಜ್ಯಕ್ಕೆ ಪ್ರಥಮ

ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…

3 hours ago