BREAKING NEWS

ನಾಳೆ ನಡೆಯುವ ಎನ್​ಡಿಎ ಸಭೆಯಲ್ಲಿ 38 ಮೈತ್ರಿ ಪಕ್ಷಗಳ ನಾಯಕರು ಭಾಗಿ: ಜೆಪಿ ನಡ್ಡಾ

ನವದೆಹಲಿ: ಲೋಕಸಭೆ ಚುನಾವಣೆಗೆ ಕೆಲವು ತಿಂಗಳು ಬಾಕಿ ಇರುವಂತೆಯೇ ರಾಜಕೀಯ ಪಕ್ಷಗಳ ಚಟುವಟಿಕೆಗಳು ಗರಿಗೆದರಿವೆ. ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಲಿಸಲು ಪಣತೊಟ್ಟಿರುವ ಕಾಂಗ್ರೆಸ್ ಸೇರಿದಂತೆ 24 ವಿರೋಧ ಪಕ್ಷಗಳು ಬೆಂಗಳೂರಿನಲ್ಲಿ ಸಭೆ ನಡೆಸುತ್ತಿವೆ. ಪ್ರಬಲ ಪೈಪೋಟಿ ಸಾಧ್ಯತೆ ಹಿನ್ನೆಲೆ ಎಚ್ಚೆತ್ತಿರುವ ಬಿಜೆಪಿ, ನಾಳೆ ಎನ್​ಡಿಎ ಸಭೆ ನಡೆಸಿ ಒಗ್ಗಟ್ಟು ಪ್ರದರ್ಶಿಸಲು ಮುಂದಾಗಿದೆ.

ಸಭೆಯಲ್ಲಿ 38 ಪಕ್ಷಗಳ ನಾಯಕರು ಭಾಗಿಯಾಗಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಪಿ ನಡ್ಡಾ, ನಾಳೆ ದೆಹಲಿಯಲ್ಲಿ ನಡೆಯಲಿರುವ ಸಭೆಯಲ್ಲಿ 38 ಮೈತ್ರಿ ಪಕ್ಷಗಳ ನಾಯಕರು ಭಾಗಿಯಾಗಲಿದ್ದಾರೆ. ಪ್ರಧಾನಿ ಮೋದಿ ಮೇಲೆ ದೇಶದ ಜನ ನಂಬಿಕೆಯಿಟ್ಟಿದ್ದಾರೆ. ಮೋದಿ ನೇತೃತ್ವದಲ್ಲಿ ಒಂಬತ್ತು ವರ್ಷಗಳ ಆಡಳಿತ ಯಶಸ್ವಿಯಾಗಿದ್ದು, ಭ್ರಷ್ಟಾಚಾರ ರಹಿತ ಆಡಳಿತ ನೀಡಿದ್ದಾರೆ. ಒಂಬತ್ತು ವರ್ಷಗಳಲ್ಲಿ ಮೋದಿಯವರ ಬಲಿಷ್ಠ ನಾಯಕತ್ವ ನೋಡಿದ್ದೇವೆ. ಕೊವಿಡ್‌ ನಿರ್ವಹಣೆಯಲ್ಲಿ ಪ್ರಧಾನಿ ಮೋದಿ ಯಶಸ್ವಿಯಾಗಿದ್ದಾರೆ ಎಂದರು.

ಕಳೆದ ಒಂಬತ್ತು ವರ್ಷಗಳಲ್ಲಿ ಎಲ್ಲಾ ಎನ್​ಡಿಎ ಮೈತ್ರಿ ಪಕ್ಷಗಳು ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಸೂಚಿ, ಯೋಜನೆಗಳು, ನೀತಿಗಳ ಬಗ್ಗೆ ಆಸಕ್ತಿ ತೋರಿಸಿವೆ. ಪಕ್ಷಗಳು ಎನ್​ಡಿಎ ಕಡೆಗೆ ಉತ್ಸಾಹದಿಂದ ಬರುತ್ತಿವೆ ಎಂದು ನಡ್ಡಾ ಹೇಳಿದರು.

ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಪಕ್ಷಗಳ ಸಭೆಯನ್ನು ಟೀಕಿಸಿದ ಜೆಪಿ ನಡ್ಡಾ, ನಮ್ಮ ಮೈತ್ರಿ ಅಧಿಕಾರಕ್ಕಾಗಿ ಅಲ್ಲ, ಅದು ಸೇವೆಗಾಗಿ. ಆದರೆ ಯುಪಿಎ ಮೈತ್ರಿಗೆ ನಾಯಕನೂ ಇಲ್ಲ, ನೀತಿಯೂ ಇಲ್ಲ. ಇದು ಹಗರಣಕೋರರ ಒಂದು ಗುಂಪು. ಅವರಿಗೆ ಯಾವ ಅಧಿಕಾರವೂ ಇಲ್ಲ ಎಂದರು.

ಇದೇ ವೇಳೆ ಮೋದಿ ಸರ್ಕಾರದ ಸಾಧನೆಗಳನ್ನು ವಿವರಿಸಿದ ನಡ್ಡಾ, ಒಂಬತ್ತು ವರ್ಷಗಳಲ್ಲಿ ಗ್ರಾಮಗಳು, ಬಡವರು, ಶೋಷಿತರು, ಸಂತ್ರಸ್ತರು, ವಂಚಿತರು, ದಲಿತರು, ಯುವಕರು, ಮಹಿಳೆಯರು, ರೈತರ ಕಡೆಗೆ ಯೋಜನೆಗಳನ್ನು ಕೇಂದ್ರೀಕರಿಸಲಾಗಿದೆ. ಅವರ ಸಬಲೀಕರಣದಲ್ಲಿ ನಮಗೆ ಸಾಕಷ್ಟು ಯಶಸ್ಸು ಸಿಕ್ಕಿದೆ. ಕಳೆದ ಒಂಬತ್ತು ವರ್ಷಗಳಲ್ಲಿ, ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಪ್ರಬಲ ನಾಯಕತ್ವ ಸಿಕ್ಕಿದೆ. ಈ ನಾಯಕತ್ವಕ್ಕೆ ಜನರ ಮೆಚ್ಚುಗೆ ಪಡೆದಿದೆ ಮತ್ತು ಅತ್ಯಂತ ಸಕಾರಾತ್ಮಕ ವಾತಾವರಣವನ್ನು ಸೃಷ್ಟಿಸಿದೆ ಎಂದರು.

ಉಪೇಂದ್ರ ಕುಶ್ವಾಹಾಗೆ ಆಹ್ವಾನ ನೀಡಿದ ಜೆಪಿ ನಡ್ಡಾ

ನಾಳೆ ನಡೆಯುವ ಎನ್‌ಡಿಎ ಮಹತ್ವದ ಸಭೆಗೆ ರಾಷ್ಟ್ರೀಯ ಲೋಕ ಜನತಾದಳದ ಅಧ್ಯಕ್ಷ ಉಪೇಂದ್ರ ಕುಶ್ವಾಹಾ ಅವರಿಗೆ ಆಹ್ವಾನ ನೀಡಲಾಗಿದೆ. ಸಭೆಯಲ್ಲಿ ಭಾಗಿಯಾಗುವಂತೆ ಉಪೇಂದ್ರ ಕುಶ್ವಾಹಾಗೆ ನಡ್ಡಾ ಅವರು ಆಹ್ವಾನ ನೀಡಿದ್ದಾರೆ. ಆದರೆ ಅವರ ಭಾಗವಹಿಸುವಿಕೆ ಬಗ್ಗೆ ಇದುವರೆಗೆ ಯಾವುದೇ ಅಧಿಕೃತ ಮಾಹಿತಿ ತಿಳಿದುಬಂದಿಲ್ಲ.

andolanait

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

4 hours ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

4 hours ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

4 hours ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

5 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

14 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

14 hours ago