BREAKING NEWS

ನಾಳೆ ನಡೆಯುವ ಎನ್​ಡಿಎ ಸಭೆಯಲ್ಲಿ 38 ಮೈತ್ರಿ ಪಕ್ಷಗಳ ನಾಯಕರು ಭಾಗಿ: ಜೆಪಿ ನಡ್ಡಾ

ನವದೆಹಲಿ: ಲೋಕಸಭೆ ಚುನಾವಣೆಗೆ ಕೆಲವು ತಿಂಗಳು ಬಾಕಿ ಇರುವಂತೆಯೇ ರಾಜಕೀಯ ಪಕ್ಷಗಳ ಚಟುವಟಿಕೆಗಳು ಗರಿಗೆದರಿವೆ. ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಲಿಸಲು ಪಣತೊಟ್ಟಿರುವ ಕಾಂಗ್ರೆಸ್ ಸೇರಿದಂತೆ 24 ವಿರೋಧ ಪಕ್ಷಗಳು ಬೆಂಗಳೂರಿನಲ್ಲಿ ಸಭೆ ನಡೆಸುತ್ತಿವೆ. ಪ್ರಬಲ ಪೈಪೋಟಿ ಸಾಧ್ಯತೆ ಹಿನ್ನೆಲೆ ಎಚ್ಚೆತ್ತಿರುವ ಬಿಜೆಪಿ, ನಾಳೆ ಎನ್​ಡಿಎ ಸಭೆ ನಡೆಸಿ ಒಗ್ಗಟ್ಟು ಪ್ರದರ್ಶಿಸಲು ಮುಂದಾಗಿದೆ.

ಸಭೆಯಲ್ಲಿ 38 ಪಕ್ಷಗಳ ನಾಯಕರು ಭಾಗಿಯಾಗಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಪಿ ನಡ್ಡಾ, ನಾಳೆ ದೆಹಲಿಯಲ್ಲಿ ನಡೆಯಲಿರುವ ಸಭೆಯಲ್ಲಿ 38 ಮೈತ್ರಿ ಪಕ್ಷಗಳ ನಾಯಕರು ಭಾಗಿಯಾಗಲಿದ್ದಾರೆ. ಪ್ರಧಾನಿ ಮೋದಿ ಮೇಲೆ ದೇಶದ ಜನ ನಂಬಿಕೆಯಿಟ್ಟಿದ್ದಾರೆ. ಮೋದಿ ನೇತೃತ್ವದಲ್ಲಿ ಒಂಬತ್ತು ವರ್ಷಗಳ ಆಡಳಿತ ಯಶಸ್ವಿಯಾಗಿದ್ದು, ಭ್ರಷ್ಟಾಚಾರ ರಹಿತ ಆಡಳಿತ ನೀಡಿದ್ದಾರೆ. ಒಂಬತ್ತು ವರ್ಷಗಳಲ್ಲಿ ಮೋದಿಯವರ ಬಲಿಷ್ಠ ನಾಯಕತ್ವ ನೋಡಿದ್ದೇವೆ. ಕೊವಿಡ್‌ ನಿರ್ವಹಣೆಯಲ್ಲಿ ಪ್ರಧಾನಿ ಮೋದಿ ಯಶಸ್ವಿಯಾಗಿದ್ದಾರೆ ಎಂದರು.

ಕಳೆದ ಒಂಬತ್ತು ವರ್ಷಗಳಲ್ಲಿ ಎಲ್ಲಾ ಎನ್​ಡಿಎ ಮೈತ್ರಿ ಪಕ್ಷಗಳು ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಸೂಚಿ, ಯೋಜನೆಗಳು, ನೀತಿಗಳ ಬಗ್ಗೆ ಆಸಕ್ತಿ ತೋರಿಸಿವೆ. ಪಕ್ಷಗಳು ಎನ್​ಡಿಎ ಕಡೆಗೆ ಉತ್ಸಾಹದಿಂದ ಬರುತ್ತಿವೆ ಎಂದು ನಡ್ಡಾ ಹೇಳಿದರು.

ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಪಕ್ಷಗಳ ಸಭೆಯನ್ನು ಟೀಕಿಸಿದ ಜೆಪಿ ನಡ್ಡಾ, ನಮ್ಮ ಮೈತ್ರಿ ಅಧಿಕಾರಕ್ಕಾಗಿ ಅಲ್ಲ, ಅದು ಸೇವೆಗಾಗಿ. ಆದರೆ ಯುಪಿಎ ಮೈತ್ರಿಗೆ ನಾಯಕನೂ ಇಲ್ಲ, ನೀತಿಯೂ ಇಲ್ಲ. ಇದು ಹಗರಣಕೋರರ ಒಂದು ಗುಂಪು. ಅವರಿಗೆ ಯಾವ ಅಧಿಕಾರವೂ ಇಲ್ಲ ಎಂದರು.

ಇದೇ ವೇಳೆ ಮೋದಿ ಸರ್ಕಾರದ ಸಾಧನೆಗಳನ್ನು ವಿವರಿಸಿದ ನಡ್ಡಾ, ಒಂಬತ್ತು ವರ್ಷಗಳಲ್ಲಿ ಗ್ರಾಮಗಳು, ಬಡವರು, ಶೋಷಿತರು, ಸಂತ್ರಸ್ತರು, ವಂಚಿತರು, ದಲಿತರು, ಯುವಕರು, ಮಹಿಳೆಯರು, ರೈತರ ಕಡೆಗೆ ಯೋಜನೆಗಳನ್ನು ಕೇಂದ್ರೀಕರಿಸಲಾಗಿದೆ. ಅವರ ಸಬಲೀಕರಣದಲ್ಲಿ ನಮಗೆ ಸಾಕಷ್ಟು ಯಶಸ್ಸು ಸಿಕ್ಕಿದೆ. ಕಳೆದ ಒಂಬತ್ತು ವರ್ಷಗಳಲ್ಲಿ, ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಪ್ರಬಲ ನಾಯಕತ್ವ ಸಿಕ್ಕಿದೆ. ಈ ನಾಯಕತ್ವಕ್ಕೆ ಜನರ ಮೆಚ್ಚುಗೆ ಪಡೆದಿದೆ ಮತ್ತು ಅತ್ಯಂತ ಸಕಾರಾತ್ಮಕ ವಾತಾವರಣವನ್ನು ಸೃಷ್ಟಿಸಿದೆ ಎಂದರು.

ಉಪೇಂದ್ರ ಕುಶ್ವಾಹಾಗೆ ಆಹ್ವಾನ ನೀಡಿದ ಜೆಪಿ ನಡ್ಡಾ

ನಾಳೆ ನಡೆಯುವ ಎನ್‌ಡಿಎ ಮಹತ್ವದ ಸಭೆಗೆ ರಾಷ್ಟ್ರೀಯ ಲೋಕ ಜನತಾದಳದ ಅಧ್ಯಕ್ಷ ಉಪೇಂದ್ರ ಕುಶ್ವಾಹಾ ಅವರಿಗೆ ಆಹ್ವಾನ ನೀಡಲಾಗಿದೆ. ಸಭೆಯಲ್ಲಿ ಭಾಗಿಯಾಗುವಂತೆ ಉಪೇಂದ್ರ ಕುಶ್ವಾಹಾಗೆ ನಡ್ಡಾ ಅವರು ಆಹ್ವಾನ ನೀಡಿದ್ದಾರೆ. ಆದರೆ ಅವರ ಭಾಗವಹಿಸುವಿಕೆ ಬಗ್ಗೆ ಇದುವರೆಗೆ ಯಾವುದೇ ಅಧಿಕೃತ ಮಾಹಿತಿ ತಿಳಿದುಬಂದಿಲ್ಲ.

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

6 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

7 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

7 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

7 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

7 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

7 hours ago