BREAKING NEWS

ವಿರೋಧ ಪಕ್ಷದ ನಾಯಕರು ಬೇಕಾಗಿದ್ದಾರೆ : ಟ್ವೀಟ್‌ನಲ್ಲೇ ಕಾಲೆಳೆದ ಕಾಂಗ್ರೆಸ್‌

ಬೆಂಗಳೂರು : ಸಂವಿಧಾನ ತಿಳಿದವರು, ಪ್ರಜಾಪ್ರಭುತ್ವ ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ, ಸಿಡಿಗೆ ತಡೆಯಾಜ್ಞೆ ತರದವರು, ಭ್ರಷ್ಟಾಚಾರಿಯಲ್ಲದ ವಿಪಕ್ಷ ನಾಯಕ ಬೇಕಾಗಿದ್ದಾರೆ. ವಾಟ್ಸಪ್ ಯೂನಿವರ್ಸಿಟಿಯಲ್ಲಿ ಪದವಿ ಪಡೆದಿರಬಾರದು, ಸುಳ್ಳು ಹೇಳಬಾರದು ಅಂತಹ ವಿಪಕ್ಷನಾಯಕ ಬೇಕಾಗಿದ್ದಾರೆʼʼ ಇದು ಯಾವುದೋ ಜಾಹೀರಾತಿನ ಪ್ರಕಟಣೆಯಲ್ಲ ರಾಜ್ಯ ಕಾಂಗ್ರೆಸ್‌, ಬಿಜೆಪಿಯನ್ನು ಟ್ವೀಟ್‌ ಮೂಲಕ ಟೀಕಿಸಿರುವ ಪರಿ ಇದಾಗಿದೆ.

2023ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಮುಗಿದು 50 ದಿನಗಳೇ ಕಳೆದಿದೆ. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ವಹಿಸಿಕೊಂಡು ಒಂದು ತಿಂಗಳು ಕಳೆದಿದೆ. ಇಷ್ಟಾದರೂ ಬಿಜೆಪಿ ವಿರೋಧ ಪಕ್ಷದ ನಾಯಕನನ್ನ ಆಯ್ಕೆ ಮಾಡುವಲ್ಲಿ ಎಡವಿದೆ. ಈ ವಿಚಾರದ ಬಗ್ಗೆ ಕಾಂಗ್ರೆಸ್‌ ಟ್ವೀಟ್‌ ಮೂಲಕ ಟೀಕಿಸಿದೆ.

ಟ್ವೀಟ್‌ನಲ್ಲಿ ಏನಿದೆ?

ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ…
* ಸಂವಿಧಾನವನ್ನು ತಿಳಿದವರು, ಪ್ರಜಾಪ್ರಭುತ್ವವನ್ನು ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ.
* ಸಿಡಿಗೆ ತಡೆಯಾಜ್ಞೆ ತರದವರು, ಭ್ರಷ್ಟಾಚಾರಿಯಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ.
* RSS ಕೈಗೊಂಬೆಯಾಗದವರು, ಕೋಮುವಾದಿ ಅಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ.
* ವಾಟ್ಸಪ್ ಯೂನಿವರ್ಸಿಟಿಯಲ್ಲಿ ಪದವಿ ಪಡೆದಿರಬಾರದು, ಸುಳ್ಳು ಹೇಳಬಾರದು.
* ಘನತೆಯ ವ್ಯಕ್ತಿತ್ವದವರು, ತೂಕದ ಮಾತಿನವರು ವಿಪಕ್ಷ ನಾಯಕ ಬೇಕಾಗಿದ್ದಾರೆ.
* ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ!

ಚುನಾವಣೆ ಮುಗಿದು 50ಕ್ಕೂ ಹೆಚ್ಚು ದಿನ ಕಳೆಯಿತು. ನಮ್ಮ ಸರ್ಕಾರ ರಚನೆ ಆಗಿ ತಿಂಗಳು ಕಳೆಯಿತು. ಮಂತ್ರಿಮಂಡಲವೂ ರಚನೆಯಾಯ್ತು. ಸರ್ಕಾರ ಕೆಲಸ ಶುರು ಮಾಡಿಯಾಯ್ತು. ಹಲವು ಕ್ಯಾಬಿನೆಟ್ ಸಭೆಗಳಾದವು, ಹಲವು ತೀರ್ಮಾನಗಳಾದವು. ಮೂರು ಗ್ಯಾರಂಟಿಗಳೂ ಜಾರಿಯಾದವು. ಇಷ್ಟೆಲ್ಲಾ ಆದರೂ ಬಿಜೆಪಿಗೆ ಒಬ್ಬ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲಾಗಿಲ್ಲ. ರಾಜ್ಯ ಬಿಜೆಪಿ ಆಡಳಿತ ಮಾಡಲು ನಾಲಾಯಕ್ ಎಂದು ಈಗಾಗಲೇ ಜನರು ಸರ್ಟಿಫಿಕೇಟ್ ಕೊಟ್ಟಾಗಿದೆ. ಈಗ ವಿರೋಧ ಪಕ್ಷವಾಗಿರಲೂ ಸಹ ನಾಲಾಯಕ್ ಎಂದು ತಿಳಿಯುತ್ತಿದೆ. ಪ್ರಜಾಪ್ರಭುತ್ವದ ಸೌಂದರ್ಯಕ್ಕಾಗಿ ಸಮರ್ಥ ವಿಪಕ್ಷ ನಾಯಕನನ್ನ ಎದುರು ನೋಡುತ್ತಿದ್ದೇವೆ. ನಮ್ಮ ಆಸೆ ಈಡೇರುತ್ತದೋ ಇಲ್ಲವೋ ಗೊತ್ತಿಲ್ಲ ಎಂದು ವ್ಯಂಗ್ಯ ಮಾಡಿದೆ.

lokesh

Recent Posts

ಬೃಹತ್ ಮಹಾನಗರ ಪಾಲಿಕೆ ಬಜೆಟ್; ಹತ್ತಾರು ನಿರೀಕ್ಷೆ

ಕೆ.ಬಿ.ರಮೇಶನಾಯಕ ಈ ಬಾರಿಯೂ ಆಡಳಿತಾಧಿಕಾರಿಯಿಂದಲೇ ಬಜೆಟ್ ಮಂಡನೆ ಯಾವುದೇ ಕ್ಷಣದಲ್ಲಿ ಸರ್ಕಾರದಿಂದ ಅಧಿಕೃತ ಅಧಿಸೂಚನೆ ಜಾರಿ ಮೈಸೂರು: ರಾಜ್ಯ ಸರ್ಕಾರ…

3 mins ago

ಮಹದೇಶ್ವರ ಬೆಟ್ಟ ಮುಖ್ಯರಸ್ತೆ ಬದಿಯಲ್ಲಿ ಒಂಟಿಸಲಗ ದರ್ಶನ: ಭಯಭೀತರಾದ ವಾಹನ ಸವಾರರು

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…

12 hours ago

ಸೈಬರ್ ಕ್ರೈಂ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಕಳೆದುಹೋಗಿದ್ದ 104 ಮೊಬೈಲ್ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…

12 hours ago

ಮಕ್ಕಳಿಗೆ ಜಂತುಹುಳು ಮಾತ್ರೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು

ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…

13 hours ago

ಕಾಯಕ ಶರಣರ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು: ಡಾ.ಬಿ.ವಿ.ನಂದೀಶ್

ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…

13 hours ago