BREAKING NEWS

ರಾಜ್ಯದ ಶಾಂತಿ, ಸುವ್ಯವಸ್ಥೆ ಕದಡುವ ಯಾವುದೇ ವ್ಯಕ್ತಿ, ಸಂಘಸಂಸ್ಥೆಗಳ ವಿರುದ್ಧ ಕಾನೂನು ಕ್ರಮ: ಗೃಹ ಸಚಿವ ಡಾ. ಜಿ.ಪರಮೇಶ್ವರ್

ಬೆಂಗಳೂರು: ಸಮಾಜದ ಸ್ವಾಥ್ಯ್ತ ಹಾಳು ಮಾಡುವ, ನೈತಿಕ ಪೊಲೀಸ್ ಗಿರಿ ಹಾಗೂ ಕೋಮವಾದವನ್ನು ಸಹಿಸುವ ಪ್ರಶ್ನೆಯೇ ಇಲ್ಲ. ರಾಜ್ಯದ ಶಾಂತಿ, ಸುವ್ಯವಸ್ಥೆ ಕದಡುವ ಯಾವುದೇ ವ್ಯಕ್ತಿ, ಸಂಘಸಂಸ್ಥೆಗಳ ವಿರುದ್ಧ ಕಾನೂನು ಪ್ರಕಾರ ಕ್ರಮವಹಿಸಲಾಗುವುದು.ಶಾಂತಿ, ಸುವ್ಯವಸ್ಥೆಗೆ ಭಂಗ ತರುವವರು, ಬಜರಂಗದಳವು ಸೇರಿ ಕಾನೂನು ಕ್ರಮವಹಿಸಲಾಗುತ್ತದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಎಚ್ಚರಿಕೆ ಕೊಟ್ಟಿದ್ದಾರೆ.

ವಿಧಾನಸೌಧದಲ್ಲಿ ಕಚೇರಿ ಕೊಠಡಿ ಪೂಜೆ ನೆರವೇರಿಸಿದ ನಂತರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವ ಜತೆಗೆ ಪರಿಶುದ್ಧ ಆಡಳಿತ ನೀಡುವುದಾಗಿ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿದ್ದೇವೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಅದೇ ಕಿವಿಮಾತು ಹೇಳಿದ್ದಾರೆ. ಜನರಿಗೆ ಕೊಟ್ಟ ಮಾತು ಉಳಿಸಿಕೊಳ್ಳಲು ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ ಎಂದು ಗುಡುಗಿದರು.

ಪಕ್ಷದ ಚುನಾವಣಾ ಪ್ರಣಾಳಿಕೆ ಸ್ಪಷ್ಟವಾಗಿದೆ. ಶಾಂತಿ, ಸುವ್ಯವಸ್ಥೆಗೆ ಭಂಗ ತರುವವರು, ಬಜರಂಗದಳವು ಸೇರಿ ಕಾನೂನು ಕ್ರಮವಹಿಸಲಾಗುತ್ತದೆ ಅಂತಹ ಸಂಘಟನೆಗಳನ್ನು ನಿಷೇಧಿಸುವ ವಿಷಯವೂ ಪ್ರಸ್ತಾಪಿಸಿದ್ದು, ರಾಜ್ಯದಲ್ಲಿ ಅಂತಹ ಪ್ರಮೇಯ ಬರಲಾರದು ಎಂಬ ವಿಶ್ವಾಸವಿದೆ. ಬರಬಾರದು ಎಂದು ಆಶಿಸುವುದಾಗಿ ಹೇಳಿದರು.

ಬಜರಂಗದಳ ನಿಷೇಧದ ಬಗ್ಗೆ ಮಾತನಾಡಿದ ಅವರು, ನಮ್ಮ ಪ್ರಣಾಳಿಕೆಯಲ್ಲಿ ಯಾರು ಶಾಂತಿ ಕದಡುತ್ತಾರೆ. ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ವ್ಯಕ್ತಿ ಅಥವಾ ಸಂಘಟನೆಯ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದೇವೆ. ಅವರು ಯಾರೂ ಅದನ್ನು ಮಾಡಲ್ಲ ಎಂದರೆ ಭಯ ಪಡುವ ಅಗತ್ಯವಿಲ್ಲ. ಮಾಡುತ್ತೇವೆ ಎಂದರೆ ಅವರಿಗೆ ಭಯ ಆಗುತ್ತದೆ. ಕಾನೂನು ಮುರಿಯಲ್ಲ ಎಂದರೆ ಭಯ ಯಾಕೆ? ಅದು ಅವರಿಗೆ ಅರ್ಥ ಆದರೆ ಸಾಕು ಎಂದು ಸ್ಪಷ್ಟನೆ ನೀಡಿದರು.

ಪೊಲೀಸ್ ಇಲಾಖೆಯಲ್ಲಿ ಸೆಲ್ಯೂಟ್ ಇರುತ್ತೆ, ಒದೆನೂ ಇರುತ್ತೆ, ಮುಂದುವರೆದು ಗುಂಡು ಹಾರಿಸೋದು ಇರುತ್ತೆ. ಗುಂಡು ಹಾರಿಸೋದು ಇರುತ್ತದೆ. ಆದರೆ ಯಾರಿಗೆ ಯಾವುದು ಬೇಕೋ ತೀರ್ಮಾನ ಮಾಡಿ. ಲಾಠಿ ಏಟು ತಿನ್ನಬೇಕೋ ಅಥವಾ ಗುಂಡು ಹಾರಿಸಿಕೊಳ್ಳಬೇಕೋ ಅಥವಾ ಶಾಂತಿಯಿಂದ ರಾಜ್ಯ ನಡೆಸಬೇಕೋ ಎಂದು ಜನರೇ ತೀರ್ಮಾನ ಮಾಡಲಿ ಎಂದರು.

ನಮ್ಮ ಕಚೇರಿಯ ಪೂಜೆ ಮಾಡಿದ್ದೇವೆ. ಅನೇಕ ಜನ ಟೀಕೆ ಟಿಪ್ಪಣಿ ಮಾಡಬಹುದು. ದೇವರ ಹೆಸರಲ್ಲಿ ಪ್ರಮಾಣ ವಚನ ತೆಗೆದುಕೊಳ್ಳುತ್ತೇವೆ. ದೇವರನ್ನು ನೆನೆಸಿಕೊಂಡು ಕಚೇರಿ ಪೂಜೆ ಮಾಡಿದ್ದೇವೆ. ಇದು ನಮ್ಮೆಲ್ಲರಿಗೂ ಶಕ್ತಿ ಕೊಡುವಂತದ್ದು. ರಾಜ್ಯದ ಕಾನೂನು ವ್ಯವಸ್ಥೆಯನ್ನು ಕಾಪಾಡಬೇಕು. ಮುಖವಾಣಿಯಲ್ಲಿರುವ ಗೃಹ ಖಾತೆ ಬಹಳ ಪ್ರಾಮುಖ್ಯ. ಇಲ್ಲಿ ಏನೇ ವಿದ್ಯಮಾನಗಳು ನಡೆದರೂ ಜನತೆಗೆ ಮುಟ್ಟುತ್ತದೆ. ಇಲ್ಲಿಂದ ಒಳ್ಳೆಯ ಕೆಲಸಗಳಾಗಲಿ. ಸಚಿವ ಸಂಪುಟ ಸಭೆಯಲ್ಲಿ ಗ್ಯಾರಂಟಿ ಯೋಜನೆ ಬಗ್ಗೆ ವಿವರ ನೀಡುತ್ತೇವೆ. ಈಗ ಏನೇ ಹೇಳಿದರೂ ಅಪ್ರಸ್ತುತವಾಗುತ್ತದೆ ಎಂದು ಹೇಳಿದರು.

ಪಿಎಸ್‍ಐ ನೇಮಕ ಅಕ್ರಮ ಪ್ರಕರಣವು ಹೈಕೋರ್ಟ್‍ನಲ್ಲಿ ವಿಚಾರಣೆಯಲ್ಲಿದ್ದು, ಅಗತ್ಯ ಕಾನೂನು ಕ್ರಮಗಳ ಕುರಿತು ಅಡ್ವೋಕೇಟ್ ಜನರಲ್ ಜತೆಗೆ ಚರ್ಚಿಸಲಾಗುವುದು. ಜತೆಗೆ ತಪ್ಪಿತಸ್ಥರ ವಿರುದ್ಧ ತಕ್ಕ ಕಾನೂನು ಕ್ರಮವಾಗುವಂತೆ ನೋಡಿಕೊಳ್ಳಲು ಸರ್ಕಾರ ಬದ್ಧವೆಂದು ಪರಮೇಶ್ವರ್ ಭರವಸೆ ನೀಡಿದರು.

andolanait

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

5 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

6 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

7 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

9 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

15 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

21 hours ago