BREAKING NEWS

ವಿಧಾನಪರಿಷತ್‍ನ ಉಪಚುನಾವಣೆ: ಅವಿರೋಧವಾಗಿ ಆಯ್ಕೆಯಾದ ಕಾಂಗ್ರೆಸ್‌ ಅಭ್ಯರ್ಥಿಗಳು

ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್‍ನ ಉಪಚುನಾವಣೆಯಲ್ಲಿ ಕಾಂಗ್ರೆಸ್‍ನಿಂದ ಸ್ಪರ್ಧಿಸಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಚಿವ ಎಸ್.ಎನ್.ಬೋಸರಾಜ್ ಹಾಗು ತಿಪ್ಪಣ್ಣಪ್ಪ ಕಮಕನೂರು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ವಿಧಾನಪರಿಷತ್‍ನಲ್ಲಿ ಖಾಲಿ ಇದ್ದ 3 ಸದಸ್ಯ ಸ್ಥಾನಗಳಿಗೆ ಪ್ರತ್ಯೇಕವಾಗಿ ಅಧಿಸೂಚನೆ ಹೊರಡಿಸಲಾಗಿತ್ತು. 3 ಸದಸ್ಯ ಸ್ಥಾನದ ಚುನಾವಣೆಗೂ ತಲಾ ಒಬ್ಬರೇ ಅಭ್ಯರ್ಥಿಗಳು ಉಳಿದಿದ್ದರಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

2028ರ ಜೂ.14ರವರೆಗೆ ಅವಧಿಯಿರುವ ವಿಧಾನಪರಿಷತ್‍ನ ಸದಸ್ಯ ಸ್ಥಾನಕ್ಕೆ ಸ್ಪರ್ಧಿಸಿದ್ದ ಜಗದೀಶ್ ಶೆಟ್ಟರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಅವರ ರಾಜೀನಾಮೆಯಿಂದ ಈ ಸ್ಥಾನ ತೆರವಾಗಿತ್ತು. 2026ರ ಜೂ.30ರವರೆಗೆ ಅವಧಿಯಿರುವ ಮೇಲ್ಮನೆ ಸದಸ್ಯ ಸ್ಥಾನಕ್ಕೆ ಸ್ಪರ್ಧಿಸಿದ್ದ ತಿಪ್ಪಣ್ಣಪ್ಪ ಕಮಕನೂರು ಸಹ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಮಾಜಿ ಸಚಿವ ಆರ್.ಶಂಕರ್ ಅವರ ರಾಜೀನಾಮೆಯಿಂದ ಈ ಸ್ಥಾನ ತೆರವಾಗಿತ್ತು.  2024ರ ಜೂ.17ರವರೆಗಿನ ಅವಧಿಯ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಸ್ಪರ್ಧಿಸಿದ್ದ ಸಚಿವ ಎನ್.ಎಸ್.ಬೋಸರಾಜ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಮಾಜಿ ಸಚಿವ ಬಾಬುರಾವ್ ಚಿಂಚನಸೂರು ರಾಜೀನಾಮೆಯಿಂದ ಈ ಸ್ಥಾನ ತೆರವಾಗಿತ್ತು. ನಾಮಪತ್ರ ಸಲ್ಲಿಸಲು ಕಡೆಯ ದಿನವಾದ ಜೂ.20ರಂದು ಈ ಮೂವರು ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದರು.

ಅಂತಿಮವಾಗಿ ಚುನಾವಣಾ ಕಣದಲ್ಲಿ 3 ಮಂದಿ ಮಾತ್ರ ಉಳಿದಿದ್ದರು. ನಾಮಪತ್ರ ವಾಪಸ್ ಪಡೆಯಲು ಇಂದು ಕಡೆಯ ದಿನವಾಗಿದ್ದು, ನಿಗದಿತ ಅವಧಿ ಮುಗಿದ ಬಳಿಕ ಮೇಲ್ಮನೆಗೆ ಈ ಮೂವರು ಅವಿರೋಧವಾಗಿ ಆಯ್ಕೆಯಾಗಿರುವುದನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ.

andolanait

Recent Posts

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

1 hour ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

2 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

4 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

7 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

7 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

7 hours ago