BREAKING NEWS

ಕಾಂಗ್ರೆಸ್ ಹೈಕಮಾಂಡ್ ನಿಂದ ಶೆಟ್ಟರ್ ಗೆ ವಿಧಾನ ಪರಿಷತ್ ಟಿಕೆಟ್

ಬೆಂಗಳೂರು: ವಿಧಾನ ಪರಿಷತ್ ನ ಮೂರು ಸ್ಥಾನಗಳಿಗೆ ನಡೆಯಲಿರುವ ಉಪಚುನಾವಣೆಗೆ ಕಾಂಗ್ರೆಸ್ ಹೈಕಮಾಂಡ್ ಅಭ್ಯರ್ಥಿಗಳ ಹೆಸರನ್ನು ಸೋಮವಾರ ಪ್ರಕಟಿಸಿದ್ದು, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಅವಕಾಶ ಕಲ್ಪಿಸಿದೆ.

ನಿರೀಕ್ಷೆಯಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಸಚಿವ ಎನ್.ಎಸ್. ಬೋಸರಾಜು ಅವರ ಹೆಸರನ್ನು ಘೋಷಿಸಲಾಗಿದೆ. ತಿಪ್ಪಣ್ಣಪ್ಪ ಕಮಕನೂರು ಅವರಿಗೆ ಟಿಕೆಟ್ ಘೋಷಿಸಲಾಗಿದೆ.

ಜೂನ್‌ 30 ರಂದು ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಶಾಸಕರು ಮತದಾನ ಮಾಡಲಿದ್ದಾರೆ. ಜೂನ್ 20( ಮಂಗಳವಾರ) ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದ್ದು, ಜೂನ್‌ 21 ರಂದು ನಾಮಪತ್ರಗಳ ಪರಿಶೀಲನೆ ನಡೆಸಲಾಗುತ್ತದೆ. ಜೂನ್‌ 30 ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ. ಸಂಖ್ಯಾಬಲದ ಆಧಾರದಲ್ಲಿ ಮೂವರೂ ಆಯ್ಕೆಯಾಗುವುದು ಖಚಿತ.

ಬಿಜೆಪಿಯಿಂದ ಸದಸ್ಯರಾಗಿದ್ದ ಆರ್. ಶಂಕರ್, ಲಕ್ಷ್ಮಣ ಸವದಿ, ಬಾಬುರಾವ್ ಚಿಂಚನಸೂರ್ ಅವರು ವಿಧಾನಸಭೆ ಚುನಾವಣೆಗೆ ಪಕ್ಷಾಂತರ ಮಾಡಿ ಸ್ಪರ್ಧಿಸುವ ಸಲುವಾಗಿ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಹೀಗಾಗಿ ಪರಿಷತ್​​ನ ಮೂರು ಸ್ಥಾನ ತೆರವಾಗಿದ್ದವು.

ಶೆಟ್ಟರ್ ಅವರ ಸದಸ್ಯತ್ವದ ಅವಧಿ 2028 ಜೂನ್ 14 ರ ವರೆಗೆ ಇರಲಿದೆ. ತಿಪ್ಪಣ್ಣಪ್ಪ ಕಮಕನೂರು ಅವರ ಅವಧಿ 2026 ಜೂನ್ 30 ರ ವರೆಗೆ ಇರಲಿದ್ದು, ಸಚಿವ ಬೋಸರಾಜು ಅವರ ಅವಧಿ ಒಂದು ವರ್ಷದಲ್ಲೇ (2024 ಜೂನ್ 17) ಮುಕ್ತಾಯವಾಗಲಿದೆ.

andolanait

Recent Posts

ರೈತರ ಅಭ್ಯುದಯಕ್ಕೆ ಸರ್ಕಾರ ಬದ್ಧ: ಸಚಿವ ಪ್ರಿಯಾಂಕ್ ಖರ್ಗೆ.

ಚಿತ್ತಾಪುರ: ಕಾಂಗ್ರೆಸ್ ಸರ್ಕಾರ ರೈತರ ಅಭ್ಯುದಯಕ್ಕೆ ಶ್ರಮಿಸುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ನುಡಿದರು.…

7 mins ago

ರಾಜ್ಯಸಭೆ ಸದಸ್ಯರಾಗಿ ನಾಳೆ ನಿತೀಶ್‌ ಕುಮಾರ್‌ ಪ್ರಮಾಣ ವಚನ ಸ್ವೀಕಾರ

ಪಾಟ್ನಾ: ಮುಂದಿನ ವಾರ ಬಿಹಾರಕ್ಕೆ ಹೊಸ ಮುಖ್ಯಮಂತ್ರಿ ಆಯ್ಕೆಯಾಗುವ ಸಾಧ್ಯತೆ ಇದ್ದು, ನಾಳೆ ನಿತೀಶ್ ಕುಮಾರ್ ರಾಜ್ಯಸಭೆಯ ಸದಸ್ಯರಾಗಿ ಪ್ರಮಾಣವಚನ…

16 mins ago

ದಾವಣಗೆರೆ ದಕ್ಷಿಣದಲ್ಲಿ ಶೇ.50, ಬಾಗಲಕೋಟೆಯಲ್ಲಿ ಶೇ.54ರಷ್ಟು ಮತದಾನ

ಬೆಂಗಳೂರು: ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ಸಂಜೆ 4.30ರ ವೇಳೆಗೆ ಬಾಗಲಕೋಟೆಯಲ್ಲಿ ಶೇ.54.82 ಹಾಗೂ ದಾವಣಗೆರೆ…

21 mins ago

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಜೈಲು ಶಿಕ್ಷೆ, 7 ಲಕ್ಷ ದಂಡ

ಮಂಡ್ಯ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ…

41 mins ago

ಶಾಲೆಗಳಲ್ಲಿ ವಂದೇ ಮಾತರಂ ಆರು ಚರಣಗಳೊಂದಿಗೆ ಹಾಡೋದು ಕಡ್ಡಾಯ ಹೈಕೋರ್ಟ್‌ನಿಂದ ಅರ್ಜಿ ವಜಾ

ಬೆಂಗಳೂರು: ಶಾಲೆಗಳಲ್ಲಿ ಪ್ರತಿದಿನ ವಂದೇ ಮಾತರಂ'ಗೀತೆಯನ್ನು ಎಲ್ಲ ಆರು ಚರಣಗಳೊಂದಿಗೆ ಕಡ್ಡಾಯವಾಗಿ ಹಾಡುವ ಸಂಬಂಧ ಕೇಂದ್ರ ಸರ್ಕಾರ ಹೊರಡಿಸಿರುವ ಶಿಷ್ಟಾಚಾರ…

1 hour ago

ದ್ವಿತೀಯ ಪಿಯುಸಿ ಫಲಿತಾಂಶ: ದಕ್ಷಿಣ ಕನ್ನಡದ ದಿಶಾ ರಾಜ್ಯಕ್ಕೆ ಪ್ರಥಮ

ಮಂಗಳೂರು: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್‌ ಕಾಲೇಜು ವಿದ್ಯಾರ್ಥಿನಿ ದಿಶಾ 600ಕ್ಕೆ…

2 hours ago