ಬೆಂಗಳೂರು: ವಿಧಾನ ಪರಿಷತ್ ನ ಮೂರು ಸ್ಥಾನಗಳಿಗೆ ನಡೆಯಲಿರುವ ಉಪಚುನಾವಣೆಗೆ ಕಾಂಗ್ರೆಸ್ ಹೈಕಮಾಂಡ್ ಅಭ್ಯರ್ಥಿಗಳ ಹೆಸರನ್ನು ಸೋಮವಾರ ಪ್ರಕಟಿಸಿದ್ದು, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಅವಕಾಶ ಕಲ್ಪಿಸಿದೆ.
ನಿರೀಕ್ಷೆಯಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಸಚಿವ ಎನ್.ಎಸ್. ಬೋಸರಾಜು ಅವರ ಹೆಸರನ್ನು ಘೋಷಿಸಲಾಗಿದೆ. ತಿಪ್ಪಣ್ಣಪ್ಪ ಕಮಕನೂರು ಅವರಿಗೆ ಟಿಕೆಟ್ ಘೋಷಿಸಲಾಗಿದೆ.
ಜೂನ್ 30 ರಂದು ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಶಾಸಕರು ಮತದಾನ ಮಾಡಲಿದ್ದಾರೆ. ಜೂನ್ 20( ಮಂಗಳವಾರ) ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದ್ದು, ಜೂನ್ 21 ರಂದು ನಾಮಪತ್ರಗಳ ಪರಿಶೀಲನೆ ನಡೆಸಲಾಗುತ್ತದೆ. ಜೂನ್ 30 ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ. ಸಂಖ್ಯಾಬಲದ ಆಧಾರದಲ್ಲಿ ಮೂವರೂ ಆಯ್ಕೆಯಾಗುವುದು ಖಚಿತ.
ಬಿಜೆಪಿಯಿಂದ ಸದಸ್ಯರಾಗಿದ್ದ ಆರ್. ಶಂಕರ್, ಲಕ್ಷ್ಮಣ ಸವದಿ, ಬಾಬುರಾವ್ ಚಿಂಚನಸೂರ್ ಅವರು ವಿಧಾನಸಭೆ ಚುನಾವಣೆಗೆ ಪಕ್ಷಾಂತರ ಮಾಡಿ ಸ್ಪರ್ಧಿಸುವ ಸಲುವಾಗಿ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಹೀಗಾಗಿ ಪರಿಷತ್ನ ಮೂರು ಸ್ಥಾನ ತೆರವಾಗಿದ್ದವು.
ಶೆಟ್ಟರ್ ಅವರ ಸದಸ್ಯತ್ವದ ಅವಧಿ 2028 ಜೂನ್ 14 ರ ವರೆಗೆ ಇರಲಿದೆ. ತಿಪ್ಪಣ್ಣಪ್ಪ ಕಮಕನೂರು ಅವರ ಅವಧಿ 2026 ಜೂನ್ 30 ರ ವರೆಗೆ ಇರಲಿದ್ದು, ಸಚಿವ ಬೋಸರಾಜು ಅವರ ಅವಧಿ ಒಂದು ವರ್ಷದಲ್ಲೇ (2024 ಜೂನ್ 17) ಮುಕ್ತಾಯವಾಗಲಿದೆ.
ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್ ಠಾಣೆ ವ್ಯಾಪ್ತಿಯ…
ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…
ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಹಾಗೂ ಕರ್ನಾಟಕ ರಾಜ್ಯ…
ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…
ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…
ಬೆಂಗಳೂರು: ನಿಮಗೆಲ್ಲಾ ಡಿಬಾಸ್, ಆ ಡಿಬಾಸ್ ನನಗೆ ಮಗ ನೆನಪಿಟ್ಟುಕೊಳ್ಳಿ. ಇನ್ನೆರಡು ತಿಂಗಳಲ್ಲಿ ದರ್ಶನ್ ಹೊರಬರುತ್ತಾರೆ ಎಂದು ನಟ ರವಿಚಂದ್ರನ್…