BREAKING NEWS

ಕಾಂಗ್ರೆಸ್ ಹೈಕಮಾಂಡ್ ನಿಂದ ಶೆಟ್ಟರ್ ಗೆ ವಿಧಾನ ಪರಿಷತ್ ಟಿಕೆಟ್

ಬೆಂಗಳೂರು: ವಿಧಾನ ಪರಿಷತ್ ನ ಮೂರು ಸ್ಥಾನಗಳಿಗೆ ನಡೆಯಲಿರುವ ಉಪಚುನಾವಣೆಗೆ ಕಾಂಗ್ರೆಸ್ ಹೈಕಮಾಂಡ್ ಅಭ್ಯರ್ಥಿಗಳ ಹೆಸರನ್ನು ಸೋಮವಾರ ಪ್ರಕಟಿಸಿದ್ದು, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಅವಕಾಶ ಕಲ್ಪಿಸಿದೆ.

ನಿರೀಕ್ಷೆಯಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಸಚಿವ ಎನ್.ಎಸ್. ಬೋಸರಾಜು ಅವರ ಹೆಸರನ್ನು ಘೋಷಿಸಲಾಗಿದೆ. ತಿಪ್ಪಣ್ಣಪ್ಪ ಕಮಕನೂರು ಅವರಿಗೆ ಟಿಕೆಟ್ ಘೋಷಿಸಲಾಗಿದೆ.

ಜೂನ್‌ 30 ರಂದು ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಶಾಸಕರು ಮತದಾನ ಮಾಡಲಿದ್ದಾರೆ. ಜೂನ್ 20( ಮಂಗಳವಾರ) ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದ್ದು, ಜೂನ್‌ 21 ರಂದು ನಾಮಪತ್ರಗಳ ಪರಿಶೀಲನೆ ನಡೆಸಲಾಗುತ್ತದೆ. ಜೂನ್‌ 30 ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ. ಸಂಖ್ಯಾಬಲದ ಆಧಾರದಲ್ಲಿ ಮೂವರೂ ಆಯ್ಕೆಯಾಗುವುದು ಖಚಿತ.

ಬಿಜೆಪಿಯಿಂದ ಸದಸ್ಯರಾಗಿದ್ದ ಆರ್. ಶಂಕರ್, ಲಕ್ಷ್ಮಣ ಸವದಿ, ಬಾಬುರಾವ್ ಚಿಂಚನಸೂರ್ ಅವರು ವಿಧಾನಸಭೆ ಚುನಾವಣೆಗೆ ಪಕ್ಷಾಂತರ ಮಾಡಿ ಸ್ಪರ್ಧಿಸುವ ಸಲುವಾಗಿ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಹೀಗಾಗಿ ಪರಿಷತ್​​ನ ಮೂರು ಸ್ಥಾನ ತೆರವಾಗಿದ್ದವು.

ಶೆಟ್ಟರ್ ಅವರ ಸದಸ್ಯತ್ವದ ಅವಧಿ 2028 ಜೂನ್ 14 ರ ವರೆಗೆ ಇರಲಿದೆ. ತಿಪ್ಪಣ್ಣಪ್ಪ ಕಮಕನೂರು ಅವರ ಅವಧಿ 2026 ಜೂನ್ 30 ರ ವರೆಗೆ ಇರಲಿದ್ದು, ಸಚಿವ ಬೋಸರಾಜು ಅವರ ಅವಧಿ ಒಂದು ವರ್ಷದಲ್ಲೇ (2024 ಜೂನ್ 17) ಮುಕ್ತಾಯವಾಗಲಿದೆ.

andolanait

Recent Posts

ಮಂಡ್ಯ | ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಬಂದಿದ್ದ ಕೈದಿ ಜನರ ಕೈಗೆ ಸಿಕ್ಕಿಬಿದ್ದ

ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…

18 mins ago

ದಸರಾ ಗಜಪಡೆ ವೀಕ್ಷಣೆ ಟಿಕೆಟ್‌ ರದ್ದು

ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…

1 hour ago

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…

1 hour ago

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

2 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

7 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

10 hours ago