ಬೆಂಗಳೂರು: ವಿಧಾನಮಂಡಲ ಅಧಿವೇಶನವನ್ನು ಜುಲೈ 21ರವರೆಗೆ ವಿಸ್ತರಿಸಲಾಗಿದ್ದು, ಜುಲೈ 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 14ನೇ ಬಾರಿ ಬಜೆಟ್ ಮಂಡಿಸಲಿದ್ದಾರೆ ಎಂದು ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ತಿಳಿಸಿದರು.
ವಿಧಾನಮಂಡಲ ಅಧಿವೇಶನವನ್ನು ಜುಲೈ 21 ರಂದು ವರೆಗೆ ನಡೆಸಲು ಬಿಎಸಿ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಅವರು ಹೇಳಿದ್ದಾರೆ.
ಈ ಮುಂಚೆ ಜುಲೈ 3 ರಿಂದ ಜುಲೈ 14 ವರೆಗೆ ವಿಧಾನಮಂಡಲ ಅಧಿವೇಶನ ನಿಗದಿಯಾಗಿತ್ತು. ಇದೀಗ ಅದನ್ನು 21ರ ವರೆಗೆ ವಿಸ್ತರಿಸಲಾಗಿದೆ.
ವಿಧಾನಸಭೆಯ ಕಲಾಪದ ಮಧ್ಯೆ ಸಭಾಧ್ಯಕ್ಷರು ಜುಲೈ 5 ರಂದು ಈಗಾಗಲೆ ಸ್ವೀಕರಿಸಿದ ವಿಧೇಯಕಗಳ ಮಂಡನೆ ಮಂಡಿಸುವುದು, ರಾಜ್ಯಪಾಲರ ವಂದನಾ ನಿರ್ಣಯದ ಮೇಲೆ ಚರ್ಚೆ, ಜುಲೈ 6ರಂದು ಬೆಳಿಗ್ಗೆ ಮುಖ್ಯಮಂತ್ರಿಗಳು ರಾಜ್ಯಪಾಲರ ವಂದನಾ ನಿರ್ಣಯದ ಚರ್ಚೆಗೆ ಉತ್ತರ ನೀಡಲಿದ್ದಾರೆ.
ಜುಲೈ 7ರಂದು ಮುಖ್ಯಮಂತ್ರಿಗಳು 2023-24ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಜುಲೈ 10ರಿಂದ 19ರವೆಗೆ ಇಲಾಖಾವಾರು ಬೇಡಿಕೆಗಳ ಕುರಿತು ಚರ್ಚೆ ನಡೆಸಲಾಗುವುದು. ಜುಲೈ 20ರಂದು ಹಣಕಾಸು ವಿಧೇಯಕಗಳ ಅಂಗೀಕಾರವಿರಲಿದೆ ಎಂದು ತಿಳಿಸಿದರು.
ಈ ಮಧ್ಯೆ ವಿಧಾನಸಭೆ ಮತ್ತು ವಿಧಾನ ಪರಿಷತ್ ನಲ್ಲಿ ಬಿಜೆಪಿ ಸದಸ್ಯರು ಧರಣಿ ಮುಂದುವರಿಸಿದ್ದು, ಗ್ಯಾರಂಟಿ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸುತ್ತಿದ್ದಾರೆ. ಗ್ಯಾರಂಟಿ ಜಾರಿ ಬಗ್ಗೆ ಯಾವ ರೀತಿ ಮೋಸ ಆಗಿದೆ ಎಂದು ನಿಲುವಳಿ ಸೂಚನೆ ನೀಡಿದ್ದೇವೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಮೊದಲು ಷರತ್ತು ಇಲ್ಲದೆ ಗ್ಯಾರಂಟಿ ಜಾರಿ ಎಂದು ಹೇಳಿದ್ದರು. ಈ ಬಗ್ಗೆ ಚರ್ಚೆಗೆ ಅವಕಾಶ ನೀಡಿದರೆ ನಾವು ಚರ್ಚೆ ಮಾಡುತ್ತೇವೆ ಎಂದು ಹೇಳಿದರು. ಮುಂದಿನ ದಿನಗಳಲ್ಲಿ ಚರ್ಚೆಗೆ ಅವಕಾಶ ನೀಡುತ್ತೇನೆ. ದಿನಕ್ಕೆ ಒಂದು ನಿಲುವಳಿ ಮಾತ್ರ ಚರ್ಚೆಗೆ ಎತ್ತಿಕೊಳ್ಳಬಹುದು, ತಾವೆಲ್ಲ ಧರಣಿ ಕೈಬಿಟ್ಟು ಆಸನಕ್ಕೆ ಬನ್ನಿ ಎಂದು ಸ್ಪೀಕರ್ ಯುಟಿ ಖಾದರ್ ಮನವಿ ಮಾಡಿದರು.
ಇದಕ್ಕೆ ಒಪ್ಪದ ಬಿಜೆಪಿ ಸ್ಪೀಕರ್ ಯು.ಟಿ.ಖಾದರ್ ಓನ್ ಸೈಡ್ ಸ್ಪೀಕರ್, ಓನ್ ಸೈಡ್ ಸ್ಪೀಕರ್ ಎಂದು ಘೋಷಣೆ ಕೂಗಲು ಆರಂಭಿಸಿದರು. ಬಿಜೆಪಿ ಗದ್ದಲ ಮುಂದುವರಿದ ಹಿನ್ನೆಲೆ ಕಲಾಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು ನಾಳೆ ಬೆಳಗ್ಗೆ 10.30ಕ್ಕೆ ಮುಂದೂಡಿದ್ದಾರೆ
ಇನ್ನು ಗ್ಯಾರಂಟಿ ಯೋಜನೆಗಳ ಬಗ್ಗೆ ಚರ್ಚೆಗೆ ಆಗ್ರಹಿಸಿ ಬಿಜೆಪಿ ಸದಸ್ಯರ ಧರಣಿ ಹಿನ್ನೆಲೆಯಲ್ಲಿ ವಿಧಾನಪರಿಷತ್ ಕಲಾಪವನ್ನು ಸಭಾಪತಿ ಬಸವರಾಜ ಹೊರಟ್ಟಿ ಅವರು ನಾಳೆ ಬೆಳಗ್ಗೆ 11 ಗಂಟೆಗೆ ಮುಂದೂಡಿದ್ದಾರೆ.
ದೇಶದ ತುಂಬಾ ಇಂದು ಭಕ್ತ ಗಣ ಮಾಡುತ್ತಿದೆ ಜಪ ರಾಮ ರಾಮ... ಆ ಟ್ರಂಪಣ್ಣನೂ ಜಪಿಸುತ್ತಿದ್ದಾರಂತೆ ಯಾವಾಗ ಘೋಷಿಸುತ್ತದೆಯೋ ಇರಾನ್,…
ಕೆಲವು ತಿಂಗಳ ಹಿಂದೆ ಹೈದರಾಲಿರಸ್ತೆಯ ಎರಡೂ ಬದಿ ೪೦ ಮರಗಳನ್ನು ಹೊಂದಿ ಹಸಿರು ಕಂಗೊಳಿಸುತ್ತಿತ್ತು. ರಸ್ತೆ ಅಗಲೀಕರಣದ ನೆಪದಲ್ಲಿ ಅಹೋರಾತ್ರಿ…
ಇತ್ತೀಚಿನ ದಿನಗಳಲ್ಲಿ ಬೆಂಗಳೂರು, ಮೈಸೂರು, ಹೈದರಾಬಾದ್, ಮುಂಬೈನಂತಹ ನಗರ ಪ್ರದೇಶಗಳಲ್ಲಿ ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರೆ ಎಂಬ ಆಪ್…
ಕನ್ನಡ ಚಿತ್ರರಂಗ ಸದ್ದು ಮಾಡುತ್ತಿದೆ. ರಾಜ್ಯಮಟ್ಟದಲ್ಲಿ, ರಾಷ್ಟ್ರಮಟ್ಟದಲ್ಲಿ. ಅಭಿವ್ಯಕ್ತಿ ಸ್ವಾತಂತ್ರ್ಯದ ಎಲ್ಲ ಮುಖಗಳ ಪರಿಚಯವೂ ಈಗ ಆಗತೊಡಗಿದೆ. ನಿರ್ಮಾಪಕ ಕನಕಪುರ…
ಮಹಾದೇಶ್ ಎಂ.ಗೌಡ ಹನೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ೨೪ ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ…
ಭೇರ್ಯ ಮಹೇಶ್ ಡಿಜಿಟಲ್ ಗ್ರಂಥಾಲಯ, ಸ್ವಚ್ಛತೆ, ನೈರ್ಮಲ್ಯ, ನೀರು ಸರಬರಾಜು, ಇನ್ನಿತರ ವಿಭಾಗಗಳಲ್ಲಿ ವಿಶೇಷ ಸಾಧನೆ ಭೇರ್ಯ: ಭಾರತದ ನಿಜವಾದ…