BREAKING NEWS

ಜು.21ರವರೆಗೆ ವಿಧಾನಮಂಡಲ ಅಧಿವೇಶನ ವಿಸ್ತರಣೆ: ಯು.ಟಿ.ಖಾದರ್‌

ಬೆಂಗಳೂರು: ವಿಧಾನಮಂಡಲ ಅಧಿವೇಶನವನ್ನು ಜುಲೈ 21ರವರೆಗೆ ವಿಸ್ತರಿಸಲಾಗಿದ್ದು, ಜುಲೈ 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 14ನೇ ಬಾರಿ ಬಜೆಟ್ ಮಂಡಿಸಲಿದ್ದಾರೆ ಎಂದು ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ತಿಳಿಸಿದರು.

ವಿಧಾನಮಂಡಲ ಅಧಿವೇಶನವನ್ನು ಜುಲೈ 21 ರಂದು ವರೆಗೆ ನಡೆಸಲು ಬಿಎಸಿ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಅವರು ಹೇಳಿದ್ದಾರೆ.

ಈ ಮುಂಚೆ ಜುಲೈ 3 ರಿಂದ ಜುಲೈ 14 ವರೆಗೆ ವಿಧಾನಮಂಡಲ ಅಧಿವೇಶನ ನಿಗದಿಯಾಗಿತ್ತು. ಇದೀಗ ಅದನ್ನು 21ರ ವರೆಗೆ ವಿಸ್ತರಿಸಲಾಗಿದೆ.

ವಿಧಾನಸಭೆಯ ಕಲಾಪದ ಮಧ್ಯೆ ಸಭಾಧ್ಯಕ್ಷರು ಜುಲೈ 5 ರಂದು ಈಗಾಗಲೆ ಸ್ವೀಕರಿಸಿದ ವಿಧೇಯಕಗಳ ಮಂಡನೆ ಮಂಡಿಸುವುದು, ರಾಜ್ಯಪಾಲರ ವಂದನಾ ನಿರ್ಣಯದ ಮೇಲೆ ಚರ್ಚೆ, ಜುಲೈ 6ರಂದು ಬೆಳಿಗ್ಗೆ ಮುಖ್ಯಮಂತ್ರಿಗಳು ರಾಜ್ಯಪಾಲರ ವಂದನಾ ನಿರ್ಣಯದ ಚರ್ಚೆಗೆ ಉತ್ತರ ನೀಡಲಿದ್ದಾರೆ.

ಜುಲೈ 7ರಂದು ಮುಖ್ಯಮಂತ್ರಿಗಳು 2023-24ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಜುಲೈ 10ರಿಂದ 19ರವೆಗೆ ಇಲಾಖಾವಾರು ಬೇಡಿಕೆಗಳ ಕುರಿತು ಚರ್ಚೆ ನಡೆಸಲಾಗುವುದು. ಜುಲೈ 20ರಂದು ಹಣಕಾಸು ವಿಧೇಯಕಗಳ ಅಂಗೀಕಾರವಿರಲಿದೆ ಎಂದು ತಿಳಿಸಿದರು.

ಈ ಮಧ್ಯೆ ವಿಧಾನಸಭೆ ಮತ್ತು ವಿಧಾನ ಪರಿಷತ್ ನಲ್ಲಿ ಬಿಜೆಪಿ ಸದಸ್ಯರು ಧರಣಿ ಮುಂದುವರಿಸಿದ್ದು, ಗ್ಯಾರಂಟಿ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸುತ್ತಿದ್ದಾರೆ. ಗ್ಯಾರಂಟಿ ಜಾರಿ ಬಗ್ಗೆ ಯಾವ ರೀತಿ ಮೋಸ ಆಗಿದೆ ಎಂದು ನಿಲುವಳಿ ಸೂಚನೆ ನೀಡಿದ್ದೇವೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಮೊದಲು ಷರತ್ತು ಇಲ್ಲದೆ ಗ್ಯಾರಂಟಿ ಜಾರಿ ಎಂದು ಹೇಳಿದ್ದರು. ಈ ಬಗ್ಗೆ ಚರ್ಚೆಗೆ ಅವಕಾಶ ನೀಡಿದರೆ ನಾವು ಚರ್ಚೆ ಮಾಡುತ್ತೇವೆ ಎಂದು ಹೇಳಿದರು. ಮುಂದಿನ ದಿನಗಳಲ್ಲಿ ಚರ್ಚೆಗೆ ಅವಕಾಶ ನೀಡುತ್ತೇನೆ. ದಿನಕ್ಕೆ ಒಂದು ನಿಲುವಳಿ ಮಾತ್ರ ಚರ್ಚೆಗೆ ಎತ್ತಿಕೊಳ್ಳಬಹುದು, ತಾವೆಲ್ಲ ಧರಣಿ ಕೈಬಿಟ್ಟು ಆಸನಕ್ಕೆ ಬನ್ನಿ ಎಂದು ಸ್ಪೀಕರ್ ಯುಟಿ ಖಾದರ್ ಮನವಿ ಮಾಡಿದರು.

ಇದಕ್ಕೆ ಒಪ್ಪದ ಬಿಜೆಪಿ ಸ್ಪೀಕರ್ ಯು.ಟಿ‌.ಖಾದರ್ ಓನ್ ಸೈಡ್ ಸ್ಪೀಕರ್, ಓನ್ ಸೈಡ್ ಸ್ಪೀಕರ್ ಎಂದು ಘೋಷಣೆ ಕೂಗಲು ಆರಂಭಿಸಿದರು. ಬಿಜೆಪಿ ಗದ್ದಲ ಮುಂದುವರಿದ ಹಿನ್ನೆಲೆ ಕಲಾಪವನ್ನು ಸ್ಪೀಕರ್ ಯು.ಟಿ.ಖಾದರ್‌ ಅವರು ನಾಳೆ ಬೆಳಗ್ಗೆ 10.30ಕ್ಕೆ ಮುಂದೂಡಿದ್ದಾರೆ

ಇನ್ನು ಗ್ಯಾರಂಟಿ ಯೋಜನೆಗಳ ಬಗ್ಗೆ ಚರ್ಚೆಗೆ ಆಗ್ರಹಿಸಿ ಬಿಜೆಪಿ ಸದಸ್ಯರ ಧರಣಿ ಹಿನ್ನೆಲೆಯಲ್ಲಿ ವಿಧಾನಪರಿಷತ್ ಕಲಾಪವನ್ನು ಸಭಾಪತಿ ಬಸವರಾಜ ಹೊರಟ್ಟಿ ಅವರು ನಾಳೆ ಬೆಳಗ್ಗೆ 11 ಗಂಟೆಗೆ ಮುಂದೂಡಿದ್ದಾರೆ.

andolanait

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

5 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

5 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

7 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

7 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

7 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

15 hours ago