ತಿರುಪತಿ : ತಿಮ್ಮಪ್ಪನ ದರ್ಶನಕ್ಕಾಗಿ ತಿರುಮಲ ಬೆಟ್ಟದಲ್ಲಿ ಕಾಲ್ನಡಿಗೆಯಲ್ಲಿ ತೆರಳಲು ಭಕ್ತರು ಗಡಗಡ ನಡುಗುತ್ತಿದ್ದಾರೆ. ಚಿರತೆಗಳ ಭಯ ಭಕ್ತರನ್ನು ಕಾಡುತ್ತಿದೆ. ಮೆಟ್ಟಿಲು ಹತ್ತಿ ಮಗುವನ್ನು ಕೊಂದ ಚಿರತೆ ಕೊನೆಗೂ ಸಿಕ್ಕಿಬಿದ್ದಿದ್ದು, ಇದೀಗ ಮತ್ತೊಂದು ಚಿರತೆ ಹಾಗೂ ಕರಡಿ ಕಾಣಿಸಿಕೊಂಡಿರುವುದರಿಂದ ತಿರುಮಲದಲ್ಲಿ ಆತಂಕ ಮೂಡಿದೆ. ನಿನ್ನೆ ಬುಧವಾರ ಬೆಳಗ್ಗೆ ಪಾದಚಾರಿ ಮಾರ್ಗದ ಬಳಿ ಚಿರತೆಯೊಂದು ಸಂಚರಿಸಿದೆ ಎಂದು ಭಕ್ತರು ಹೇಳುತ್ತಾರೆ. ಕೆಲ ಭಕ್ತರು ಗುಂಪು ಗುಂಪಾಗಿ ಹೋಗುತ್ತಿದ್ದಾಗ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನದ ಬಳಿಯ ನಾಮಲಗಣಿ ಬಳಿ ಮರಗಳ ನಡುವೆ ಚಿರತೆ ಕಂಡ ಭಕ್ತರು ಭಯಭೀತರಾಗಿ ಓಡಿದರು.
ಸ್ವಲ್ಪ ಸಮಯದ ನಂತರ ಕರಡಿಯೂ ಕಾಣಿಸಿಕೊಂಡಿದೆ. ಗಾಬರಿಗೊಂಡ ಭಕ್ತರು ಈ ವಿಷಯವನ್ನು ಟಿಟಿಡಿ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಟಿಟಿಡಿ ಹಾಗೂ ಅರಣ್ಯಾಧಿಕಾರಿಗಳ ತಂಡ ಕೂಡಲೇ ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ತಿರುಮಲ ಅಲಿಪಿರಿ ಮಾರ್ಗದಲ್ಲಿ ಮತ್ತೆ ತೀವ್ರ ಆತಂಕ ಮತ್ತು ಉದ್ವಿಗ್ನತೆ ಉಂಟಾಗಿದೆ. ಕಾಡು ಪ್ರಾಣಿಗಳ ದಾಂಗುಡಿಯಿಟ್ಟಿ ಸರಣಿ ಘಟನೆಗಳಿಂದ ಭಕ್ತರು ಆತಂಕಗೊಂಡಿದ್ದಾರೆ.
ಈ ನಡುವೆ ತಿರುಮಲ ಮೆಟ್ಟಿಲುಗಳ ಆಸುಪಾಸಿನಲ್ಲಿ ಮೂರು ಚಿರತೆಗಳು ಓಡಾಡುತ್ತಿರುವುದನ್ನು ಟಿಟಿಡಿ ಬಹಿರಂಗಪಡಿಸಿದೆ. ಅವನ್ನು ಹಿಡಿಯಲು ಅರಣ್ಯಾಧಿಕಾರಿಗಳು ಹಾಗೂ ಟಿಟಿಡಿ ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ ಎಂದು ಸಿಇಒ ಧರ್ಮಾ ರೆಡ್ಡಿ ತಿಳಿಸಿದ್ದಾರೆ.
ತಿರುಮಲ ಮೆಟ್ಟಿಲುಗಳ ಮೇಲೆ ನಿರ್ಬಂಧಗಳು ಮುಂದುವರಿದಿದ್ದು, ಎಲ್ಲಾ ಭಕ್ತರು ಸಹಕರಿಸುವಂತೆ ಕೋರಲಾಗಿದೆ. ಚಿರತೆ ಹಿಡಿಯಲು ಕ್ರಮ ಕೈಗೊಂಡಿದ್ದು, ಅರಣ್ಯಾಧಿಕಾರಿಗಳಿಗೆ ಸಹಕಾರ ನೀಡುವುದಾಗಿ ಟಿಟಿಡಿ ತಿಳಿಸಿದೆ. ಮೂರು ದಿನಗಳ ಹಿಂದೆ ತಿರುಮಲ ಮೆಟ್ಟಿಲುಗಳ ಮೇಲಿರುವ ಶ್ರೀಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದ ಬಳಿ ನೆಲ್ಲೂರು ಜಿಲ್ಲೆಯ ಲಕ್ಷಿತಾ ಎಂಬ ಬಾಲಕಿಯನ್ನು ಚಿರತೆಯೊಂದು ಕೊಂದು ಹಾಕಿತ್ತು.
ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…
ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.…
ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…
ಬೆಂಗಳೂರು: ಆಡಳಿತರೂಢ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಿದ್ದಾ ಜಿದ್ದಿನ ರಣರಂಗವಾಗಿ ಏರ್ಪಟ್ಟು, 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಎಂದೇ…