BREAKING NEWS

ತಿರುಮಲ ಬೆಟ್ಟದಲ್ಲಿ ಚಿರತೆ-ಕರಡಿ ಹಾವಳಿ : ಭಯದಲ್ಲಿ ತಿಮ್ಮಪ್ಪನ ಭಕ್ತರು

ತಿರುಪತಿ : ತಿಮ್ಮಪ್ಪನ ದರ್ಶನಕ್ಕಾಗಿ ತಿರುಮಲ ಬೆಟ್ಟದಲ್ಲಿ ಕಾಲ್ನಡಿಗೆಯಲ್ಲಿ ತೆರಳಲು ಭಕ್ತರು ಗಡಗಡ ನಡುಗುತ್ತಿದ್ದಾರೆ. ಚಿರತೆಗಳ ಭಯ ಭಕ್ತರನ್ನು ಕಾಡುತ್ತಿದೆ. ಮೆಟ್ಟಿಲು ಹತ್ತಿ ಮಗುವನ್ನು ಕೊಂದ ಚಿರತೆ ಕೊನೆಗೂ ಸಿಕ್ಕಿಬಿದ್ದಿದ್ದು, ಇದೀಗ ಮತ್ತೊಂದು ಚಿರತೆ ಹಾಗೂ ಕರಡಿ ಕಾಣಿಸಿಕೊಂಡಿರುವುದರಿಂದ ತಿರುಮಲದಲ್ಲಿ ಆತಂಕ ಮೂಡಿದೆ. ನಿನ್ನೆ ಬುಧವಾರ ಬೆಳಗ್ಗೆ ಪಾದಚಾರಿ ಮಾರ್ಗದ ಬಳಿ ಚಿರತೆಯೊಂದು ಸಂಚರಿಸಿದೆ ಎಂದು ಭಕ್ತರು ಹೇಳುತ್ತಾರೆ. ಕೆಲ ಭಕ್ತರು ಗುಂಪು ಗುಂಪಾಗಿ ಹೋಗುತ್ತಿದ್ದಾಗ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನದ ಬಳಿಯ ನಾಮಲಗಣಿ ಬಳಿ ಮರಗಳ ನಡುವೆ ಚಿರತೆ ಕಂಡ ಭಕ್ತರು ಭಯಭೀತರಾಗಿ ಓಡಿದರು.

ಸ್ವಲ್ಪ ಸಮಯದ ನಂತರ ಕರಡಿಯೂ ಕಾಣಿಸಿಕೊಂಡಿದೆ. ಗಾಬರಿಗೊಂಡ ಭಕ್ತರು ಈ ವಿಷಯವನ್ನು ಟಿಟಿಡಿ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಟಿಟಿಡಿ ಹಾಗೂ ಅರಣ್ಯಾಧಿಕಾರಿಗಳ ತಂಡ ಕೂಡಲೇ ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ತಿರುಮಲ ಅಲಿಪಿರಿ ಮಾರ್ಗದಲ್ಲಿ ಮತ್ತೆ ತೀವ್ರ ಆತಂಕ ಮತ್ತು ಉದ್ವಿಗ್ನತೆ ಉಂಟಾಗಿದೆ. ಕಾಡು ಪ್ರಾಣಿಗಳ ದಾಂಗುಡಿಯಿಟ್ಟಿ ಸರಣಿ ಘಟನೆಗಳಿಂದ ಭಕ್ತರು ಆತಂಕಗೊಂಡಿದ್ದಾರೆ.

ಈ ನಡುವೆ ತಿರುಮಲ ಮೆಟ್ಟಿಲುಗಳ ಆಸುಪಾಸಿನಲ್ಲಿ ಮೂರು ಚಿರತೆಗಳು ಓಡಾಡುತ್ತಿರುವುದನ್ನು ಟಿಟಿಡಿ ಬಹಿರಂಗಪಡಿಸಿದೆ. ಅವನ್ನು ಹಿಡಿಯಲು ಅರಣ್ಯಾಧಿಕಾರಿಗಳು ಹಾಗೂ ಟಿಟಿಡಿ ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ ಎಂದು ಸಿಇಒ ಧರ್ಮಾ ರೆಡ್ಡಿ ತಿಳಿಸಿದ್ದಾರೆ.

ತಿರುಮಲ ಮೆಟ್ಟಿಲುಗಳ ಮೇಲೆ ನಿರ್ಬಂಧಗಳು ಮುಂದುವರಿದಿದ್ದು, ಎಲ್ಲಾ ಭಕ್ತರು ಸಹಕರಿಸುವಂತೆ ಕೋರಲಾಗಿದೆ. ಚಿರತೆ ಹಿಡಿಯಲು ಕ್ರಮ ಕೈಗೊಂಡಿದ್ದು, ಅರಣ್ಯಾಧಿಕಾರಿಗಳಿಗೆ ಸಹಕಾರ ನೀಡುವುದಾಗಿ ಟಿಟಿಡಿ ತಿಳಿಸಿದೆ. ಮೂರು ದಿನಗಳ ಹಿಂದೆ ತಿರುಮಲ ಮೆಟ್ಟಿಲುಗಳ ಮೇಲಿರುವ ಶ್ರೀಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದ ಬಳಿ ನೆಲ್ಲೂರು ಜಿಲ್ಲೆಯ ಲಕ್ಷಿತಾ ಎಂಬ ಬಾಲಕಿಯನ್ನು ಚಿರತೆಯೊಂದು ಕೊಂದು ಹಾಕಿತ್ತು.

lokesh

Recent Posts

ಪೈಲ್ವಾನರ ಕಸರತ್ತಿಗೆ ಗರಡಿ ಮನೆಗಳು ಸಜ್ಜು

ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…

2 mins ago

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

8 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

9 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

10 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

11 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

11 hours ago