BREAKING NEWS

ತಿರುಮಲ ಬೆಟ್ಟದಲ್ಲಿ ಚಿರತೆ-ಕರಡಿ ಹಾವಳಿ : ಭಯದಲ್ಲಿ ತಿಮ್ಮಪ್ಪನ ಭಕ್ತರು

ತಿರುಪತಿ : ತಿಮ್ಮಪ್ಪನ ದರ್ಶನಕ್ಕಾಗಿ ತಿರುಮಲ ಬೆಟ್ಟದಲ್ಲಿ ಕಾಲ್ನಡಿಗೆಯಲ್ಲಿ ತೆರಳಲು ಭಕ್ತರು ಗಡಗಡ ನಡುಗುತ್ತಿದ್ದಾರೆ. ಚಿರತೆಗಳ ಭಯ ಭಕ್ತರನ್ನು ಕಾಡುತ್ತಿದೆ. ಮೆಟ್ಟಿಲು ಹತ್ತಿ ಮಗುವನ್ನು ಕೊಂದ ಚಿರತೆ ಕೊನೆಗೂ ಸಿಕ್ಕಿಬಿದ್ದಿದ್ದು, ಇದೀಗ ಮತ್ತೊಂದು ಚಿರತೆ ಹಾಗೂ ಕರಡಿ ಕಾಣಿಸಿಕೊಂಡಿರುವುದರಿಂದ ತಿರುಮಲದಲ್ಲಿ ಆತಂಕ ಮೂಡಿದೆ. ನಿನ್ನೆ ಬುಧವಾರ ಬೆಳಗ್ಗೆ ಪಾದಚಾರಿ ಮಾರ್ಗದ ಬಳಿ ಚಿರತೆಯೊಂದು ಸಂಚರಿಸಿದೆ ಎಂದು ಭಕ್ತರು ಹೇಳುತ್ತಾರೆ. ಕೆಲ ಭಕ್ತರು ಗುಂಪು ಗುಂಪಾಗಿ ಹೋಗುತ್ತಿದ್ದಾಗ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನದ ಬಳಿಯ ನಾಮಲಗಣಿ ಬಳಿ ಮರಗಳ ನಡುವೆ ಚಿರತೆ ಕಂಡ ಭಕ್ತರು ಭಯಭೀತರಾಗಿ ಓಡಿದರು.

ಸ್ವಲ್ಪ ಸಮಯದ ನಂತರ ಕರಡಿಯೂ ಕಾಣಿಸಿಕೊಂಡಿದೆ. ಗಾಬರಿಗೊಂಡ ಭಕ್ತರು ಈ ವಿಷಯವನ್ನು ಟಿಟಿಡಿ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಟಿಟಿಡಿ ಹಾಗೂ ಅರಣ್ಯಾಧಿಕಾರಿಗಳ ತಂಡ ಕೂಡಲೇ ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ತಿರುಮಲ ಅಲಿಪಿರಿ ಮಾರ್ಗದಲ್ಲಿ ಮತ್ತೆ ತೀವ್ರ ಆತಂಕ ಮತ್ತು ಉದ್ವಿಗ್ನತೆ ಉಂಟಾಗಿದೆ. ಕಾಡು ಪ್ರಾಣಿಗಳ ದಾಂಗುಡಿಯಿಟ್ಟಿ ಸರಣಿ ಘಟನೆಗಳಿಂದ ಭಕ್ತರು ಆತಂಕಗೊಂಡಿದ್ದಾರೆ.

ಈ ನಡುವೆ ತಿರುಮಲ ಮೆಟ್ಟಿಲುಗಳ ಆಸುಪಾಸಿನಲ್ಲಿ ಮೂರು ಚಿರತೆಗಳು ಓಡಾಡುತ್ತಿರುವುದನ್ನು ಟಿಟಿಡಿ ಬಹಿರಂಗಪಡಿಸಿದೆ. ಅವನ್ನು ಹಿಡಿಯಲು ಅರಣ್ಯಾಧಿಕಾರಿಗಳು ಹಾಗೂ ಟಿಟಿಡಿ ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ ಎಂದು ಸಿಇಒ ಧರ್ಮಾ ರೆಡ್ಡಿ ತಿಳಿಸಿದ್ದಾರೆ.

ತಿರುಮಲ ಮೆಟ್ಟಿಲುಗಳ ಮೇಲೆ ನಿರ್ಬಂಧಗಳು ಮುಂದುವರಿದಿದ್ದು, ಎಲ್ಲಾ ಭಕ್ತರು ಸಹಕರಿಸುವಂತೆ ಕೋರಲಾಗಿದೆ. ಚಿರತೆ ಹಿಡಿಯಲು ಕ್ರಮ ಕೈಗೊಂಡಿದ್ದು, ಅರಣ್ಯಾಧಿಕಾರಿಗಳಿಗೆ ಸಹಕಾರ ನೀಡುವುದಾಗಿ ಟಿಟಿಡಿ ತಿಳಿಸಿದೆ. ಮೂರು ದಿನಗಳ ಹಿಂದೆ ತಿರುಮಲ ಮೆಟ್ಟಿಲುಗಳ ಮೇಲಿರುವ ಶ್ರೀಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದ ಬಳಿ ನೆಲ್ಲೂರು ಜಿಲ್ಲೆಯ ಲಕ್ಷಿತಾ ಎಂಬ ಬಾಲಕಿಯನ್ನು ಚಿರತೆಯೊಂದು ಕೊಂದು ಹಾಕಿತ್ತು.

lokesh

Recent Posts

ಪಿರಿಯಾಪಟ್ಟಣ | ನಿಲ್ಲದ ಸರ್ವರ್‌ ಸಮಸ್ಯೆ ; ಪಡಿತರ ಪಡೆಯಲು ಪರದಾಟ

ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…

2 hours ago

ಗೌರವಯುತವಾಗಿ ನಡೆದುಕೊಂಡ ಸಿದ್ದರಾಮಯ್ಯ : ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…

3 hours ago

ನಾಳೆ ಸಿಎಲ್‌ಪಿ ಸಭೆ ಕರೆದಿದ್ದೇವೆ, ಸಿದ್ದರಾಮಯ್ಯ ಜತೆ ಚರ್ಚಿಸಿದ್ದೇನೆ : ಡಿ.ಕೆ.ಶಿವಕುಮಾರ್‌

ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…

4 hours ago

ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ…

9 hours ago

ರಾಜ್ಯ ಸಚಿವ ಸಂಪುಟ ವಿಸರ್ಜನೆ: ಸಚಿವರ ಸರ್ಕಾರಿ ವಾಹನಗಳು ವಾಪಸ್‌

ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…

9 hours ago

ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಡಿ.ಕೆ.ಶಿವಕುಮಾರ್‌

ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…

10 hours ago