BREAKING NEWS

ತಿರುಮಲ ಬೆಟ್ಟದಲ್ಲಿ ಚಿರತೆ-ಕರಡಿ ಹಾವಳಿ : ಭಯದಲ್ಲಿ ತಿಮ್ಮಪ್ಪನ ಭಕ್ತರು

ತಿರುಪತಿ : ತಿಮ್ಮಪ್ಪನ ದರ್ಶನಕ್ಕಾಗಿ ತಿರುಮಲ ಬೆಟ್ಟದಲ್ಲಿ ಕಾಲ್ನಡಿಗೆಯಲ್ಲಿ ತೆರಳಲು ಭಕ್ತರು ಗಡಗಡ ನಡುಗುತ್ತಿದ್ದಾರೆ. ಚಿರತೆಗಳ ಭಯ ಭಕ್ತರನ್ನು ಕಾಡುತ್ತಿದೆ. ಮೆಟ್ಟಿಲು ಹತ್ತಿ ಮಗುವನ್ನು ಕೊಂದ ಚಿರತೆ ಕೊನೆಗೂ ಸಿಕ್ಕಿಬಿದ್ದಿದ್ದು, ಇದೀಗ ಮತ್ತೊಂದು ಚಿರತೆ ಹಾಗೂ ಕರಡಿ ಕಾಣಿಸಿಕೊಂಡಿರುವುದರಿಂದ ತಿರುಮಲದಲ್ಲಿ ಆತಂಕ ಮೂಡಿದೆ. ನಿನ್ನೆ ಬುಧವಾರ ಬೆಳಗ್ಗೆ ಪಾದಚಾರಿ ಮಾರ್ಗದ ಬಳಿ ಚಿರತೆಯೊಂದು ಸಂಚರಿಸಿದೆ ಎಂದು ಭಕ್ತರು ಹೇಳುತ್ತಾರೆ. ಕೆಲ ಭಕ್ತರು ಗುಂಪು ಗುಂಪಾಗಿ ಹೋಗುತ್ತಿದ್ದಾಗ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನದ ಬಳಿಯ ನಾಮಲಗಣಿ ಬಳಿ ಮರಗಳ ನಡುವೆ ಚಿರತೆ ಕಂಡ ಭಕ್ತರು ಭಯಭೀತರಾಗಿ ಓಡಿದರು.

ಸ್ವಲ್ಪ ಸಮಯದ ನಂತರ ಕರಡಿಯೂ ಕಾಣಿಸಿಕೊಂಡಿದೆ. ಗಾಬರಿಗೊಂಡ ಭಕ್ತರು ಈ ವಿಷಯವನ್ನು ಟಿಟಿಡಿ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಟಿಟಿಡಿ ಹಾಗೂ ಅರಣ್ಯಾಧಿಕಾರಿಗಳ ತಂಡ ಕೂಡಲೇ ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ತಿರುಮಲ ಅಲಿಪಿರಿ ಮಾರ್ಗದಲ್ಲಿ ಮತ್ತೆ ತೀವ್ರ ಆತಂಕ ಮತ್ತು ಉದ್ವಿಗ್ನತೆ ಉಂಟಾಗಿದೆ. ಕಾಡು ಪ್ರಾಣಿಗಳ ದಾಂಗುಡಿಯಿಟ್ಟಿ ಸರಣಿ ಘಟನೆಗಳಿಂದ ಭಕ್ತರು ಆತಂಕಗೊಂಡಿದ್ದಾರೆ.

ಈ ನಡುವೆ ತಿರುಮಲ ಮೆಟ್ಟಿಲುಗಳ ಆಸುಪಾಸಿನಲ್ಲಿ ಮೂರು ಚಿರತೆಗಳು ಓಡಾಡುತ್ತಿರುವುದನ್ನು ಟಿಟಿಡಿ ಬಹಿರಂಗಪಡಿಸಿದೆ. ಅವನ್ನು ಹಿಡಿಯಲು ಅರಣ್ಯಾಧಿಕಾರಿಗಳು ಹಾಗೂ ಟಿಟಿಡಿ ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ ಎಂದು ಸಿಇಒ ಧರ್ಮಾ ರೆಡ್ಡಿ ತಿಳಿಸಿದ್ದಾರೆ.

ತಿರುಮಲ ಮೆಟ್ಟಿಲುಗಳ ಮೇಲೆ ನಿರ್ಬಂಧಗಳು ಮುಂದುವರಿದಿದ್ದು, ಎಲ್ಲಾ ಭಕ್ತರು ಸಹಕರಿಸುವಂತೆ ಕೋರಲಾಗಿದೆ. ಚಿರತೆ ಹಿಡಿಯಲು ಕ್ರಮ ಕೈಗೊಂಡಿದ್ದು, ಅರಣ್ಯಾಧಿಕಾರಿಗಳಿಗೆ ಸಹಕಾರ ನೀಡುವುದಾಗಿ ಟಿಟಿಡಿ ತಿಳಿಸಿದೆ. ಮೂರು ದಿನಗಳ ಹಿಂದೆ ತಿರುಮಲ ಮೆಟ್ಟಿಲುಗಳ ಮೇಲಿರುವ ಶ್ರೀಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದ ಬಳಿ ನೆಲ್ಲೂರು ಜಿಲ್ಲೆಯ ಲಕ್ಷಿತಾ ಎಂಬ ಬಾಲಕಿಯನ್ನು ಚಿರತೆಯೊಂದು ಕೊಂದು ಹಾಕಿತ್ತು.

lokesh

Recent Posts

ರೈತರ ನಿದ್ದೆಗೆಡಿಸಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಕಿಕ್ಕೇರಿ: ಹೋಬಳಿಯ ಗೊಲ್ಲರಕೊಪ್ಪಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ರೈತರಿಗೆ ಆತಂಕ ಸೃಷ್ಟಿಸಿ ಜಾನುವಾರುಗಳು ಹಾಗೂ ಸಾಕು…

6 hours ago

ಶಿವಶಂಕರಪ್ಪ ಸಾಹುಕಾರ್‌ಗೆ ಹೊಸ ಕಾನೂನು ಸಂಕಷ್ಟ

ಬೆಂಗಳೂರು: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿದ ಬೆನ್ನಲ್ಲೇ ಈ ಹೊಸ ಕಾನೂನು ಸಂಕಷ್ಟ ಎದುರಾಗಿದೆ.…

9 hours ago

ಗೋಪಾಲಸ್ವಾಮಿ ಬೆಟ್ಟ: ಕೊನೆಗೂ ಭಕ್ತರಿಗೆ ಸಿಕ್ಕಿತು ನೆರಳು!

ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ…

13 hours ago

ಓದುಗರ ಪತ್ರ: ಅಧ್ಯಾತ್ಮ ದುರಂತ!

ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…

17 hours ago

ಓದುಗರ ಪತ್ರ: ರಸ್ತೆ, ಉದ್ಯಾನಕ್ಕೆ ಎಸ್. ಜಾನಕಿ ಅವರ ಹೆಸರಿಡಿ

ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…

17 hours ago

ಓದುಗರ ಪತ್ರ: ಚಾಮರಾಜಪುರಂನಲ್ಲಿ ರೈಲುಗಳ ನಿಲುಗಡೆಯಾಗಲಿ

ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…

17 hours ago