BREAKING NEWS

ತಿರುಮಲ ಬೆಟ್ಟದಲ್ಲಿ ಚಿರತೆ-ಕರಡಿ ಹಾವಳಿ : ಭಯದಲ್ಲಿ ತಿಮ್ಮಪ್ಪನ ಭಕ್ತರು

ತಿರುಪತಿ : ತಿಮ್ಮಪ್ಪನ ದರ್ಶನಕ್ಕಾಗಿ ತಿರುಮಲ ಬೆಟ್ಟದಲ್ಲಿ ಕಾಲ್ನಡಿಗೆಯಲ್ಲಿ ತೆರಳಲು ಭಕ್ತರು ಗಡಗಡ ನಡುಗುತ್ತಿದ್ದಾರೆ. ಚಿರತೆಗಳ ಭಯ ಭಕ್ತರನ್ನು ಕಾಡುತ್ತಿದೆ. ಮೆಟ್ಟಿಲು ಹತ್ತಿ ಮಗುವನ್ನು ಕೊಂದ ಚಿರತೆ ಕೊನೆಗೂ ಸಿಕ್ಕಿಬಿದ್ದಿದ್ದು, ಇದೀಗ ಮತ್ತೊಂದು ಚಿರತೆ ಹಾಗೂ ಕರಡಿ ಕಾಣಿಸಿಕೊಂಡಿರುವುದರಿಂದ ತಿರುಮಲದಲ್ಲಿ ಆತಂಕ ಮೂಡಿದೆ. ನಿನ್ನೆ ಬುಧವಾರ ಬೆಳಗ್ಗೆ ಪಾದಚಾರಿ ಮಾರ್ಗದ ಬಳಿ ಚಿರತೆಯೊಂದು ಸಂಚರಿಸಿದೆ ಎಂದು ಭಕ್ತರು ಹೇಳುತ್ತಾರೆ. ಕೆಲ ಭಕ್ತರು ಗುಂಪು ಗುಂಪಾಗಿ ಹೋಗುತ್ತಿದ್ದಾಗ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನದ ಬಳಿಯ ನಾಮಲಗಣಿ ಬಳಿ ಮರಗಳ ನಡುವೆ ಚಿರತೆ ಕಂಡ ಭಕ್ತರು ಭಯಭೀತರಾಗಿ ಓಡಿದರು.

ಸ್ವಲ್ಪ ಸಮಯದ ನಂತರ ಕರಡಿಯೂ ಕಾಣಿಸಿಕೊಂಡಿದೆ. ಗಾಬರಿಗೊಂಡ ಭಕ್ತರು ಈ ವಿಷಯವನ್ನು ಟಿಟಿಡಿ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಟಿಟಿಡಿ ಹಾಗೂ ಅರಣ್ಯಾಧಿಕಾರಿಗಳ ತಂಡ ಕೂಡಲೇ ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ತಿರುಮಲ ಅಲಿಪಿರಿ ಮಾರ್ಗದಲ್ಲಿ ಮತ್ತೆ ತೀವ್ರ ಆತಂಕ ಮತ್ತು ಉದ್ವಿಗ್ನತೆ ಉಂಟಾಗಿದೆ. ಕಾಡು ಪ್ರಾಣಿಗಳ ದಾಂಗುಡಿಯಿಟ್ಟಿ ಸರಣಿ ಘಟನೆಗಳಿಂದ ಭಕ್ತರು ಆತಂಕಗೊಂಡಿದ್ದಾರೆ.

ಈ ನಡುವೆ ತಿರುಮಲ ಮೆಟ್ಟಿಲುಗಳ ಆಸುಪಾಸಿನಲ್ಲಿ ಮೂರು ಚಿರತೆಗಳು ಓಡಾಡುತ್ತಿರುವುದನ್ನು ಟಿಟಿಡಿ ಬಹಿರಂಗಪಡಿಸಿದೆ. ಅವನ್ನು ಹಿಡಿಯಲು ಅರಣ್ಯಾಧಿಕಾರಿಗಳು ಹಾಗೂ ಟಿಟಿಡಿ ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ ಎಂದು ಸಿಇಒ ಧರ್ಮಾ ರೆಡ್ಡಿ ತಿಳಿಸಿದ್ದಾರೆ.

ತಿರುಮಲ ಮೆಟ್ಟಿಲುಗಳ ಮೇಲೆ ನಿರ್ಬಂಧಗಳು ಮುಂದುವರಿದಿದ್ದು, ಎಲ್ಲಾ ಭಕ್ತರು ಸಹಕರಿಸುವಂತೆ ಕೋರಲಾಗಿದೆ. ಚಿರತೆ ಹಿಡಿಯಲು ಕ್ರಮ ಕೈಗೊಂಡಿದ್ದು, ಅರಣ್ಯಾಧಿಕಾರಿಗಳಿಗೆ ಸಹಕಾರ ನೀಡುವುದಾಗಿ ಟಿಟಿಡಿ ತಿಳಿಸಿದೆ. ಮೂರು ದಿನಗಳ ಹಿಂದೆ ತಿರುಮಲ ಮೆಟ್ಟಿಲುಗಳ ಮೇಲಿರುವ ಶ್ರೀಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದ ಬಳಿ ನೆಲ್ಲೂರು ಜಿಲ್ಲೆಯ ಲಕ್ಷಿತಾ ಎಂಬ ಬಾಲಕಿಯನ್ನು ಚಿರತೆಯೊಂದು ಕೊಂದು ಹಾಕಿತ್ತು.

lokesh

Recent Posts

ಸೇವೆ, ಶಿಕ್ಷಣ, ಸಂಸ್ಕಾರದ ಸಂಗಮವಾಗಿದ್ದ ರಾಜೇಂದ್ರ ಶ್ರೀ

ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…

36 mins ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…

40 mins ago

ಗಾಂಧಿವಾದಕ್ಕೆ ಮರುಳಾಗಿದ್ದ ಮೈಸೂರಿನ ಯಶೋಧರಾ ದಾಸಪ್ಪ

ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…

47 mins ago

ಅಸತ್ಯ ಎಂಬುದು ಕೆಟ್ಟ ವ್ರಣದ ಹಾಗೆ

ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…

53 mins ago

ಮಳೆ ಕೊರತೆ; ಸಂಕಷ್ಟದಲ್ಲಿ ಅವಳಿ ತಾಲ್ಲೂಕುಗಳ ರೈತರು

ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…

58 mins ago