BREAKING NEWS

ಬಿಜೆಪಿ ವಿರೋಧ ಪಕ್ಷದಲ್ಲಿದ್ದು ಹೋರಾಟ ಮಾಡಲಿ, ನಾವು ಜನಸೇವೆ ಮುಂದುವರೆಸುತ್ತೇವೆ: ಡಿಕೆ ಟಾಂಗ್‌

ಬೆಂಗಳೂರು: ಬಿಜೆಪಿಯ ನಾಯಕರು ವರ್ಷದ 365 ದಿನವೂ ಧರಣಿ ಮಾಡುತ್ತಲೇ ಇರಲಿ, ವಿರೋಧ ಪಕ್ಷದಲ್ಲಿದ್ದು ಹೋರಾಟ ಮಾಡಲಿ, ನಾವು ಜನಸೇವೆ ಮಾಡುವುದನ್ನು ಮುಂದುವರೆಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‍ನ ಪಂಚಖಾತ್ರಿ ಯೋಜನೆಗಳ ಕುರಿತಂತೆ ಬಿಜೆಪಿಯವರು ಧರಣಿ ಸತ್ಯಾಗ್ರಹ, ಉಪವಾಸ ಸತ್ಯಾಗ್ರಹಗಳಂತ ಹೋರಾಟಗಳನ್ನು ನಡೆಸುವುದಾಗಿ ಹೇಳುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರುಗಳಿಗೆ ಈಗಲೂ ಸೋಲಿನ ಆತ್ಮವಿಮರ್ಶನ ಮಾಡಿಕೊಳ್ಳಲಾಗುತ್ತಿಲ್ಲ. ಹೀಗಾಗಿ ಪ್ರತಿಭಟನೆಯ ಮಾತುಗಳನ್ನಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ಅನ್ನಭಾಗ್ಯ, ಗೃಹಜ್ಯೋತಿ ಸೇರಿದಂತೆ ಕಾಂಗ್ರೆಸ್ ನೀಡಿದಂತಹ ಪಂಚಖಾತ್ರಿಗಳನ್ನು ಚಾಚೂ ತಪ್ಪದೇ ಜಾರಿ ಮಾಡುತ್ತೇವೆ. ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡದೇ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ. ಅಕ್ಕಿ ಅಥವಾ ಭತ್ತವನ್ನು ಏಕಾಏಕಿ ಬೆಳೆಯಲಾಗುವುದಿಲ್ಲ. ಕೇಂದ್ರ ಸರ್ಕಾರ ಈಗಾಗಲೇ ಖರೀದಿಸಿ ದಾಸ್ತಾನು ಮಾಡಿರುವುದನ್ನು ನೀಡದೇ ಯೋಜನೆಗೆ ಅಡ್ಡಿಪಡಿಸುತ್ತಿದೆ.

ಕೇಂದ್ರ ಸರ್ಕಾರದ ಅಂಗ ಸಂಸ್ಥೆಗಳಿಂದ ಆಹಾರ ಧಾನ್ಯ ಖರೀದಿಗಾಗಿ ಕೊಟೇಷನ್ ಕೇಳಿದ್ದೇವೆ. ಒಂದು ವೇಳೆ ಅವರು ಒಪ್ಪದೇ ಇದ್ದರೆ ನಾವೇ ನೇರವಾಗಿ ಎಲ್ಲಿಂದಲಾದರೂ ಖರೀದಿ ಮಾಡಿ ಜನರಿಗೆ ನೀಡುತ್ತೇವೆ ಎಂದು ಹೇಳಿದರು.

ಕೆಲವು ಕಡೆ ರಾಗಿ, ಜೋಳ, ಗೋ ನೀಡಬೇಕು ಎಂಬ ಬೇಡಿಕೆ ಬಂದಿವೆ. ಕೇಂದ್ರ ಸರ್ಕಾರ ಸಹಕಾರ ನೀಡದೇ ಇದ್ದರೆ ವಿ ಇಲ್ಲದೇ ರಾಜ್ಯಸರ್ಕಾರವೇ ಖರೀದಿಗೆ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.

ಗೃಹಲಕ್ಷ್ಮಿ ಯೋಜನೆ ಕೂಡ ಕಾಲಮಿತಿಯಲ್ಲಿ ಆರಂಭಗೊಳ್ಳುತ್ತದೆ. ಅದರಿಂದ ಜನರಿಗೆ ಅನುಕೂಲವಾಗಲಿದೆ ಎಂದರು.

andolanait

Recent Posts

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

53 mins ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

4 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

4 hours ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

4 hours ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

4 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸೋಲಿನಿಂದ ಸೊರಗಿದ ದೀದಿಯನ್ನು ಕೈಬಿಟ್ಟ ಆಪ್ತರು

ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…

5 hours ago