BREAKING NEWS

ಬಿಜೆಪಿ ವಿರೋಧ ಪಕ್ಷದಲ್ಲಿದ್ದು ಹೋರಾಟ ಮಾಡಲಿ, ನಾವು ಜನಸೇವೆ ಮುಂದುವರೆಸುತ್ತೇವೆ: ಡಿಕೆ ಟಾಂಗ್‌

ಬೆಂಗಳೂರು: ಬಿಜೆಪಿಯ ನಾಯಕರು ವರ್ಷದ 365 ದಿನವೂ ಧರಣಿ ಮಾಡುತ್ತಲೇ ಇರಲಿ, ವಿರೋಧ ಪಕ್ಷದಲ್ಲಿದ್ದು ಹೋರಾಟ ಮಾಡಲಿ, ನಾವು ಜನಸೇವೆ ಮಾಡುವುದನ್ನು ಮುಂದುವರೆಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‍ನ ಪಂಚಖಾತ್ರಿ ಯೋಜನೆಗಳ ಕುರಿತಂತೆ ಬಿಜೆಪಿಯವರು ಧರಣಿ ಸತ್ಯಾಗ್ರಹ, ಉಪವಾಸ ಸತ್ಯಾಗ್ರಹಗಳಂತ ಹೋರಾಟಗಳನ್ನು ನಡೆಸುವುದಾಗಿ ಹೇಳುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರುಗಳಿಗೆ ಈಗಲೂ ಸೋಲಿನ ಆತ್ಮವಿಮರ್ಶನ ಮಾಡಿಕೊಳ್ಳಲಾಗುತ್ತಿಲ್ಲ. ಹೀಗಾಗಿ ಪ್ರತಿಭಟನೆಯ ಮಾತುಗಳನ್ನಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ಅನ್ನಭಾಗ್ಯ, ಗೃಹಜ್ಯೋತಿ ಸೇರಿದಂತೆ ಕಾಂಗ್ರೆಸ್ ನೀಡಿದಂತಹ ಪಂಚಖಾತ್ರಿಗಳನ್ನು ಚಾಚೂ ತಪ್ಪದೇ ಜಾರಿ ಮಾಡುತ್ತೇವೆ. ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡದೇ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ. ಅಕ್ಕಿ ಅಥವಾ ಭತ್ತವನ್ನು ಏಕಾಏಕಿ ಬೆಳೆಯಲಾಗುವುದಿಲ್ಲ. ಕೇಂದ್ರ ಸರ್ಕಾರ ಈಗಾಗಲೇ ಖರೀದಿಸಿ ದಾಸ್ತಾನು ಮಾಡಿರುವುದನ್ನು ನೀಡದೇ ಯೋಜನೆಗೆ ಅಡ್ಡಿಪಡಿಸುತ್ತಿದೆ.

ಕೇಂದ್ರ ಸರ್ಕಾರದ ಅಂಗ ಸಂಸ್ಥೆಗಳಿಂದ ಆಹಾರ ಧಾನ್ಯ ಖರೀದಿಗಾಗಿ ಕೊಟೇಷನ್ ಕೇಳಿದ್ದೇವೆ. ಒಂದು ವೇಳೆ ಅವರು ಒಪ್ಪದೇ ಇದ್ದರೆ ನಾವೇ ನೇರವಾಗಿ ಎಲ್ಲಿಂದಲಾದರೂ ಖರೀದಿ ಮಾಡಿ ಜನರಿಗೆ ನೀಡುತ್ತೇವೆ ಎಂದು ಹೇಳಿದರು.

ಕೆಲವು ಕಡೆ ರಾಗಿ, ಜೋಳ, ಗೋ ನೀಡಬೇಕು ಎಂಬ ಬೇಡಿಕೆ ಬಂದಿವೆ. ಕೇಂದ್ರ ಸರ್ಕಾರ ಸಹಕಾರ ನೀಡದೇ ಇದ್ದರೆ ವಿ ಇಲ್ಲದೇ ರಾಜ್ಯಸರ್ಕಾರವೇ ಖರೀದಿಗೆ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.

ಗೃಹಲಕ್ಷ್ಮಿ ಯೋಜನೆ ಕೂಡ ಕಾಲಮಿತಿಯಲ್ಲಿ ಆರಂಭಗೊಳ್ಳುತ್ತದೆ. ಅದರಿಂದ ಜನರಿಗೆ ಅನುಕೂಲವಾಗಲಿದೆ ಎಂದರು.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

8 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

8 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

8 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

8 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

8 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

8 hours ago