ಬೆಂಗಳೂರು: ಗುಜರಾತ್ನ ಅಮೂಲ್ ಹಾಲು ರಾಜ್ಯ ಪ್ರವೇಶಿಸುವುದರಿಂದ ರಾಜ್ಯದ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಆತಂಕ ವ್ಯಕ್ತ ಪಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಇದನ್ನು ತಡೆಯಲಾಗದವರು ಕೈಗೆ ಬಳೆ ಹಾಕಿಕೊಂಡು ನಿಂತುಕೊಳ್ಳಲಿ ಎಂದು ಕಿಡಿಕಾರಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಎಂಎಫ್ನ ನಂದಿನಿ ಬ್ರಾಂಡ್ ಯಾವುದರಲ್ಲೂ ಕಡಿಮೆ ಇಲ್ಲ. ಹೀಗಿರುವಾಗ ಗುಜರಾತ್ನಿಂದ ಹಾಲು, ಮೊಸರು ತಂದು ಇಲ್ಲಿ ಮಾರಾಟ ಮಾಡುವ ಅಗತ್ಯವೇನು ಎಂದು ಪ್ರಶ್ನಿಸಿದರು.
ರೈತರ ಆದಾಯವನ್ನು ದ್ವಿಗುಣಗೊಳಿಸುವುದಾಗಿ ಹೇಳಿದ್ದ ಬಿಜೆಪಿ ಈಗ ಮುಳುಗಿಸುವ ಪ್ರಯತ್ನ ನಡೆಸುತ್ತಿದೆ. ಇದು ತಪ್ಪ ಬೇಕಾದರೆ ಬಿಜೆಪಿ ಸರ್ಕಾರ ತೊಲಗಬೇಕು. ಅಮೂಲ್ ಹಾಲು ನಿಯಂತ್ರಣ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅಥವಾ ಕೆಎಂಎಫ್ ಆಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಕೈನಲ್ಲಿ ಇಲ್ಲ. ಅಸಾಹಯಕರಾಗಿರುವವರು ಕೈಗೆ ಬಳೆ ತೊಟ್ಟು ಕುಳಿತುಕೊಳ್ಳಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜಕೀಯ ವಿಷಯಗಳ ಕುರಿತು ಪ್ರಕಟಣೆಗಳನ್ನು ಅಳವಡಿಸಿಕೊಂಡಿರುವ ಆಟೋಗಳಿಗೆ ತಲಾ ಐದು ಸಾವಿರ ರೂಪಾಯಿ ದಂಡ ಹಾಕುತ್ತಿರುವುದರ ವಿರುದ್ಧ ಕಿಡಿಕಾರಿದರು. ತಮ್ಮಗೆ ಇಷ್ಟವಾದ ಅಭ್ಯರ್ಥಿ ಹಾಗೂ ಪಕ್ಷಕ್ಕೆ ಬೆಂಬಲ ನೀಡುವುದು ಪ್ರತಿಯೊಬ್ಬರ ಹಕ್ಕು. ಅವರಿಗೆ ಸಾರಿಗೆ ಇಲಾಖೆ ತಲಾ ಐದು ಸಾವಿರ ರೂಪಾಯಿ ದಂಡ ವಿಧಿಸಿ, ಆಟೋಗಳನ್ನು ಜಪ್ತಿ ಮಾಡುತ್ತಿದೆ.
ಈ ರೀತಿ ಮಾಡಲು ಕಾನೂನಿನಲ್ಲಿ ಅವಕಾಶ ಇಲ್ಲ. ಕೂಡಲೇ ಆಟೋ ಚಾಲಕರಿಗೆ ನೀಡುತ್ತಿರುವ ಕಿರುಕೂಳವನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು. ಈ ಕುರಿತು ತಾವು ಚುನಾವಣಾ ಆಯೋಗಕ್ಕೆ ಪತ್ರ ಬರೆಯುವುದಾಗಿ ಭರವಸೆ ನೀಡಿದರು. ತಮ್ಮ ಪರವಾಗಿ ಪ್ರಚಾರಕ್ಕೆ ಬಳಸಿಕೊಂಡವರು ಆಟೋ ಚಾಲಕರ ನೆರವಿಗೆ ನಿಲ್ಲಬೇಕು ಎಂದು ಅವರು ಕರೆ ನೀಡಿದರು.
ಏಪ್ರಿಲ್ ಕೋಲಾರದಲ್ಲಿ ಏಪ್ರಿಲ್ 10ರಂದು ಕೋಲಾರದಲ್ಲಿ ನಡೆಯಬೇಕಿದ್ದ ಸತ್ಯಮೇವ ಜಯತೆ ಯಾತ್ರೆಗಿಂತ ಮೊದಲು ಅಭ್ಯರ್ಥಿಗಳ ಆಯ್ಕೆ ಕುರಿತು ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ಮೈಸೂರು : ಯುವ ಸಮುದಾಯಕ್ಕೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ವಿಕಸಿತ…
ಮೈಸೂರು : ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಸ್ತುಗಳಿಗೆ ಸಂಬಂಸಿದಂತೆ ಎನ್ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರವೇ ಬೇರೆ.…
ಹೊಸದಿಲ್ಲಿ: ಕಳೆದ 12 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಶಿಸ್ತುಬದ್ಧ ಆರ್ಥಿಕ ನಿರ್ವಹಣೆ ನಡೆಯುತ್ತಿರುವುದರಿಂದ ಭಾರತದ ಜಿಡಿಪಿ ದರ…
ಹೊಸದಿಲ್ಲಿ : ಕೇಂದ್ರ ಸರ್ಕಾರ 2026-27 ನೇ ಸಾಲಿಗೆ 17.2 ಲಕ್ಷ ಕೋಟಿ ರೂ. ಸಾಲ ಪಡೆಯಲಿದೆ ಎಂದು ಹಣಕಾಸು…
ಹೊಸದಿಲ್ಲಿ : ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಆಯವ್ಯಯದಲ್ಲಿ…
ಬೆಂಗಳೂರು : ಹಣಕಾಸು ತಜ್ಞೆ ಅಲ್ಲದ ಕೇಂದ್ರದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ೯ನೇ ಕಳಪೆ ಬಜೆಟ್ ಇದಾಗಿದೆ.…