ಬೆಂಗಳೂರು: ಗುಜರಾತ್ನ ಅಮೂಲ್ ಹಾಲು ರಾಜ್ಯ ಪ್ರವೇಶಿಸುವುದರಿಂದ ರಾಜ್ಯದ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಆತಂಕ ವ್ಯಕ್ತ ಪಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಇದನ್ನು ತಡೆಯಲಾಗದವರು ಕೈಗೆ ಬಳೆ ಹಾಕಿಕೊಂಡು ನಿಂತುಕೊಳ್ಳಲಿ ಎಂದು ಕಿಡಿಕಾರಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಎಂಎಫ್ನ ನಂದಿನಿ ಬ್ರಾಂಡ್ ಯಾವುದರಲ್ಲೂ ಕಡಿಮೆ ಇಲ್ಲ. ಹೀಗಿರುವಾಗ ಗುಜರಾತ್ನಿಂದ ಹಾಲು, ಮೊಸರು ತಂದು ಇಲ್ಲಿ ಮಾರಾಟ ಮಾಡುವ ಅಗತ್ಯವೇನು ಎಂದು ಪ್ರಶ್ನಿಸಿದರು.
ರೈತರ ಆದಾಯವನ್ನು ದ್ವಿಗುಣಗೊಳಿಸುವುದಾಗಿ ಹೇಳಿದ್ದ ಬಿಜೆಪಿ ಈಗ ಮುಳುಗಿಸುವ ಪ್ರಯತ್ನ ನಡೆಸುತ್ತಿದೆ. ಇದು ತಪ್ಪ ಬೇಕಾದರೆ ಬಿಜೆಪಿ ಸರ್ಕಾರ ತೊಲಗಬೇಕು. ಅಮೂಲ್ ಹಾಲು ನಿಯಂತ್ರಣ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅಥವಾ ಕೆಎಂಎಫ್ ಆಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಕೈನಲ್ಲಿ ಇಲ್ಲ. ಅಸಾಹಯಕರಾಗಿರುವವರು ಕೈಗೆ ಬಳೆ ತೊಟ್ಟು ಕುಳಿತುಕೊಳ್ಳಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜಕೀಯ ವಿಷಯಗಳ ಕುರಿತು ಪ್ರಕಟಣೆಗಳನ್ನು ಅಳವಡಿಸಿಕೊಂಡಿರುವ ಆಟೋಗಳಿಗೆ ತಲಾ ಐದು ಸಾವಿರ ರೂಪಾಯಿ ದಂಡ ಹಾಕುತ್ತಿರುವುದರ ವಿರುದ್ಧ ಕಿಡಿಕಾರಿದರು. ತಮ್ಮಗೆ ಇಷ್ಟವಾದ ಅಭ್ಯರ್ಥಿ ಹಾಗೂ ಪಕ್ಷಕ್ಕೆ ಬೆಂಬಲ ನೀಡುವುದು ಪ್ರತಿಯೊಬ್ಬರ ಹಕ್ಕು. ಅವರಿಗೆ ಸಾರಿಗೆ ಇಲಾಖೆ ತಲಾ ಐದು ಸಾವಿರ ರೂಪಾಯಿ ದಂಡ ವಿಧಿಸಿ, ಆಟೋಗಳನ್ನು ಜಪ್ತಿ ಮಾಡುತ್ತಿದೆ.
ಈ ರೀತಿ ಮಾಡಲು ಕಾನೂನಿನಲ್ಲಿ ಅವಕಾಶ ಇಲ್ಲ. ಕೂಡಲೇ ಆಟೋ ಚಾಲಕರಿಗೆ ನೀಡುತ್ತಿರುವ ಕಿರುಕೂಳವನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು. ಈ ಕುರಿತು ತಾವು ಚುನಾವಣಾ ಆಯೋಗಕ್ಕೆ ಪತ್ರ ಬರೆಯುವುದಾಗಿ ಭರವಸೆ ನೀಡಿದರು. ತಮ್ಮ ಪರವಾಗಿ ಪ್ರಚಾರಕ್ಕೆ ಬಳಸಿಕೊಂಡವರು ಆಟೋ ಚಾಲಕರ ನೆರವಿಗೆ ನಿಲ್ಲಬೇಕು ಎಂದು ಅವರು ಕರೆ ನೀಡಿದರು.
ಏಪ್ರಿಲ್ ಕೋಲಾರದಲ್ಲಿ ಏಪ್ರಿಲ್ 10ರಂದು ಕೋಲಾರದಲ್ಲಿ ನಡೆಯಬೇಕಿದ್ದ ಸತ್ಯಮೇವ ಜಯತೆ ಯಾತ್ರೆಗಿಂತ ಮೊದಲು ಅಭ್ಯರ್ಥಿಗಳ ಆಯ್ಕೆ ಕುರಿತು ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…