ಬೆಂಗಳೂರು: ಗುಜರಾತ್ನ ಅಮೂಲ್ ಹಾಲು ರಾಜ್ಯ ಪ್ರವೇಶಿಸುವುದರಿಂದ ರಾಜ್ಯದ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಆತಂಕ ವ್ಯಕ್ತ ಪಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಇದನ್ನು ತಡೆಯಲಾಗದವರು ಕೈಗೆ ಬಳೆ ಹಾಕಿಕೊಂಡು ನಿಂತುಕೊಳ್ಳಲಿ ಎಂದು ಕಿಡಿಕಾರಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಎಂಎಫ್ನ ನಂದಿನಿ ಬ್ರಾಂಡ್ ಯಾವುದರಲ್ಲೂ ಕಡಿಮೆ ಇಲ್ಲ. ಹೀಗಿರುವಾಗ ಗುಜರಾತ್ನಿಂದ ಹಾಲು, ಮೊಸರು ತಂದು ಇಲ್ಲಿ ಮಾರಾಟ ಮಾಡುವ ಅಗತ್ಯವೇನು ಎಂದು ಪ್ರಶ್ನಿಸಿದರು.
ರೈತರ ಆದಾಯವನ್ನು ದ್ವಿಗುಣಗೊಳಿಸುವುದಾಗಿ ಹೇಳಿದ್ದ ಬಿಜೆಪಿ ಈಗ ಮುಳುಗಿಸುವ ಪ್ರಯತ್ನ ನಡೆಸುತ್ತಿದೆ. ಇದು ತಪ್ಪ ಬೇಕಾದರೆ ಬಿಜೆಪಿ ಸರ್ಕಾರ ತೊಲಗಬೇಕು. ಅಮೂಲ್ ಹಾಲು ನಿಯಂತ್ರಣ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅಥವಾ ಕೆಎಂಎಫ್ ಆಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಕೈನಲ್ಲಿ ಇಲ್ಲ. ಅಸಾಹಯಕರಾಗಿರುವವರು ಕೈಗೆ ಬಳೆ ತೊಟ್ಟು ಕುಳಿತುಕೊಳ್ಳಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜಕೀಯ ವಿಷಯಗಳ ಕುರಿತು ಪ್ರಕಟಣೆಗಳನ್ನು ಅಳವಡಿಸಿಕೊಂಡಿರುವ ಆಟೋಗಳಿಗೆ ತಲಾ ಐದು ಸಾವಿರ ರೂಪಾಯಿ ದಂಡ ಹಾಕುತ್ತಿರುವುದರ ವಿರುದ್ಧ ಕಿಡಿಕಾರಿದರು. ತಮ್ಮಗೆ ಇಷ್ಟವಾದ ಅಭ್ಯರ್ಥಿ ಹಾಗೂ ಪಕ್ಷಕ್ಕೆ ಬೆಂಬಲ ನೀಡುವುದು ಪ್ರತಿಯೊಬ್ಬರ ಹಕ್ಕು. ಅವರಿಗೆ ಸಾರಿಗೆ ಇಲಾಖೆ ತಲಾ ಐದು ಸಾವಿರ ರೂಪಾಯಿ ದಂಡ ವಿಧಿಸಿ, ಆಟೋಗಳನ್ನು ಜಪ್ತಿ ಮಾಡುತ್ತಿದೆ.
ಈ ರೀತಿ ಮಾಡಲು ಕಾನೂನಿನಲ್ಲಿ ಅವಕಾಶ ಇಲ್ಲ. ಕೂಡಲೇ ಆಟೋ ಚಾಲಕರಿಗೆ ನೀಡುತ್ತಿರುವ ಕಿರುಕೂಳವನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು. ಈ ಕುರಿತು ತಾವು ಚುನಾವಣಾ ಆಯೋಗಕ್ಕೆ ಪತ್ರ ಬರೆಯುವುದಾಗಿ ಭರವಸೆ ನೀಡಿದರು. ತಮ್ಮ ಪರವಾಗಿ ಪ್ರಚಾರಕ್ಕೆ ಬಳಸಿಕೊಂಡವರು ಆಟೋ ಚಾಲಕರ ನೆರವಿಗೆ ನಿಲ್ಲಬೇಕು ಎಂದು ಅವರು ಕರೆ ನೀಡಿದರು.
ಏಪ್ರಿಲ್ ಕೋಲಾರದಲ್ಲಿ ಏಪ್ರಿಲ್ 10ರಂದು ಕೋಲಾರದಲ್ಲಿ ನಡೆಯಬೇಕಿದ್ದ ಸತ್ಯಮೇವ ಜಯತೆ ಯಾತ್ರೆಗಿಂತ ಮೊದಲು ಅಭ್ಯರ್ಥಿಗಳ ಆಯ್ಕೆ ಕುರಿತು ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…
ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…
ಹೊಸದಿಲ್ಲಿ : ಎಲ್ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…
ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…