BREAKING NEWS

ಅಮುಲ್‌ ಪ್ರವೇಶ ತಡೆಯಲಾಗದವರು ಕೈಗೆ ಬಳೆ ಹಾಕಿಕೊಂಡು ನಿಂತುಕೊಳ್ಳಲಿ: ಡಿಕೆ ಗರಂ

ಬೆಂಗಳೂರು: ಗುಜರಾತ್‍ನ ಅಮೂಲ್ ಹಾಲು ರಾಜ್ಯ ಪ್ರವೇಶಿಸುವುದರಿಂದ ರಾಜ್ಯದ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಆತಂಕ ವ್ಯಕ್ತ ಪಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಇದನ್ನು ತಡೆಯಲಾಗದವರು ಕೈಗೆ ಬಳೆ ಹಾಕಿಕೊಂಡು ನಿಂತುಕೊಳ್ಳಲಿ ಎಂದು ಕಿಡಿಕಾರಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಎಂಎಫ್‍ನ ನಂದಿನಿ ಬ್ರಾಂಡ್ ಯಾವುದರಲ್ಲೂ ಕಡಿಮೆ ಇಲ್ಲ. ಹೀಗಿರುವಾಗ ಗುಜರಾತ್‍ನಿಂದ ಹಾಲು, ಮೊಸರು ತಂದು ಇಲ್ಲಿ ಮಾರಾಟ ಮಾಡುವ ಅಗತ್ಯವೇನು ಎಂದು ಪ್ರಶ್ನಿಸಿದರು.

ರೈತರ ಆದಾಯವನ್ನು ದ್ವಿಗುಣಗೊಳಿಸುವುದಾಗಿ ಹೇಳಿದ್ದ ಬಿಜೆಪಿ ಈಗ ಮುಳುಗಿಸುವ ಪ್ರಯತ್ನ ನಡೆಸುತ್ತಿದೆ. ಇದು ತಪ್ಪ ಬೇಕಾದರೆ ಬಿಜೆಪಿ ಸರ್ಕಾರ ತೊಲಗಬೇಕು. ಅಮೂಲ್ ಹಾಲು ನಿಯಂತ್ರಣ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅಥವಾ ಕೆಎಂಎಫ್ ಆಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಕೈನಲ್ಲಿ ಇಲ್ಲ. ಅಸಾಹಯಕರಾಗಿರುವವರು ಕೈಗೆ ಬಳೆ ತೊಟ್ಟು ಕುಳಿತುಕೊಳ್ಳಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜಕೀಯ ವಿಷಯಗಳ ಕುರಿತು ಪ್ರಕಟಣೆಗಳನ್ನು ಅಳವಡಿಸಿಕೊಂಡಿರುವ ಆಟೋಗಳಿಗೆ ತಲಾ ಐದು ಸಾವಿರ ರೂಪಾಯಿ ದಂಡ ಹಾಕುತ್ತಿರುವುದರ ವಿರುದ್ಧ ಕಿಡಿಕಾರಿದರು. ತಮ್ಮಗೆ ಇಷ್ಟವಾದ ಅಭ್ಯರ್ಥಿ ಹಾಗೂ ಪಕ್ಷಕ್ಕೆ ಬೆಂಬಲ ನೀಡುವುದು ಪ್ರತಿಯೊಬ್ಬರ ಹಕ್ಕು. ಅವರಿಗೆ ಸಾರಿಗೆ ಇಲಾಖೆ ತಲಾ ಐದು ಸಾವಿರ ರೂಪಾಯಿ ದಂಡ ವಿಧಿಸಿ, ಆಟೋಗಳನ್ನು ಜಪ್ತಿ ಮಾಡುತ್ತಿದೆ.

ಈ ರೀತಿ ಮಾಡಲು ಕಾನೂನಿನಲ್ಲಿ ಅವಕಾಶ ಇಲ್ಲ. ಕೂಡಲೇ ಆಟೋ ಚಾಲಕರಿಗೆ ನೀಡುತ್ತಿರುವ ಕಿರುಕೂಳವನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು. ಈ ಕುರಿತು ತಾವು ಚುನಾವಣಾ ಆಯೋಗಕ್ಕೆ ಪತ್ರ ಬರೆಯುವುದಾಗಿ ಭರವಸೆ ನೀಡಿದರು. ತಮ್ಮ ಪರವಾಗಿ ಪ್ರಚಾರಕ್ಕೆ ಬಳಸಿಕೊಂಡವರು ಆಟೋ ಚಾಲಕರ ನೆರವಿಗೆ ನಿಲ್ಲಬೇಕು ಎಂದು ಅವರು ಕರೆ ನೀಡಿದರು.

ಏಪ್ರಿಲ್ ಕೋಲಾರದಲ್ಲಿ ಏಪ್ರಿಲ್ 10ರಂದು ಕೋಲಾರದಲ್ಲಿ ನಡೆಯಬೇಕಿದ್ದ ಸತ್ಯಮೇವ ಜಯತೆ ಯಾತ್ರೆಗಿಂತ ಮೊದಲು ಅಭ್ಯರ್ಥಿಗಳ ಆಯ್ಕೆ ಕುರಿತು ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.

andolanait

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

11 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

14 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

16 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

16 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

16 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

16 hours ago