ಬೆಂಗಳೂರು: ಗುಜರಾತ್ನ ಅಮೂಲ್ ಹಾಲು ರಾಜ್ಯ ಪ್ರವೇಶಿಸುವುದರಿಂದ ರಾಜ್ಯದ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಆತಂಕ ವ್ಯಕ್ತ ಪಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಇದನ್ನು ತಡೆಯಲಾಗದವರು ಕೈಗೆ ಬಳೆ ಹಾಕಿಕೊಂಡು ನಿಂತುಕೊಳ್ಳಲಿ ಎಂದು ಕಿಡಿಕಾರಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಎಂಎಫ್ನ ನಂದಿನಿ ಬ್ರಾಂಡ್ ಯಾವುದರಲ್ಲೂ ಕಡಿಮೆ ಇಲ್ಲ. ಹೀಗಿರುವಾಗ ಗುಜರಾತ್ನಿಂದ ಹಾಲು, ಮೊಸರು ತಂದು ಇಲ್ಲಿ ಮಾರಾಟ ಮಾಡುವ ಅಗತ್ಯವೇನು ಎಂದು ಪ್ರಶ್ನಿಸಿದರು.
ರೈತರ ಆದಾಯವನ್ನು ದ್ವಿಗುಣಗೊಳಿಸುವುದಾಗಿ ಹೇಳಿದ್ದ ಬಿಜೆಪಿ ಈಗ ಮುಳುಗಿಸುವ ಪ್ರಯತ್ನ ನಡೆಸುತ್ತಿದೆ. ಇದು ತಪ್ಪ ಬೇಕಾದರೆ ಬಿಜೆಪಿ ಸರ್ಕಾರ ತೊಲಗಬೇಕು. ಅಮೂಲ್ ಹಾಲು ನಿಯಂತ್ರಣ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅಥವಾ ಕೆಎಂಎಫ್ ಆಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಕೈನಲ್ಲಿ ಇಲ್ಲ. ಅಸಾಹಯಕರಾಗಿರುವವರು ಕೈಗೆ ಬಳೆ ತೊಟ್ಟು ಕುಳಿತುಕೊಳ್ಳಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜಕೀಯ ವಿಷಯಗಳ ಕುರಿತು ಪ್ರಕಟಣೆಗಳನ್ನು ಅಳವಡಿಸಿಕೊಂಡಿರುವ ಆಟೋಗಳಿಗೆ ತಲಾ ಐದು ಸಾವಿರ ರೂಪಾಯಿ ದಂಡ ಹಾಕುತ್ತಿರುವುದರ ವಿರುದ್ಧ ಕಿಡಿಕಾರಿದರು. ತಮ್ಮಗೆ ಇಷ್ಟವಾದ ಅಭ್ಯರ್ಥಿ ಹಾಗೂ ಪಕ್ಷಕ್ಕೆ ಬೆಂಬಲ ನೀಡುವುದು ಪ್ರತಿಯೊಬ್ಬರ ಹಕ್ಕು. ಅವರಿಗೆ ಸಾರಿಗೆ ಇಲಾಖೆ ತಲಾ ಐದು ಸಾವಿರ ರೂಪಾಯಿ ದಂಡ ವಿಧಿಸಿ, ಆಟೋಗಳನ್ನು ಜಪ್ತಿ ಮಾಡುತ್ತಿದೆ.
ಈ ರೀತಿ ಮಾಡಲು ಕಾನೂನಿನಲ್ಲಿ ಅವಕಾಶ ಇಲ್ಲ. ಕೂಡಲೇ ಆಟೋ ಚಾಲಕರಿಗೆ ನೀಡುತ್ತಿರುವ ಕಿರುಕೂಳವನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು. ಈ ಕುರಿತು ತಾವು ಚುನಾವಣಾ ಆಯೋಗಕ್ಕೆ ಪತ್ರ ಬರೆಯುವುದಾಗಿ ಭರವಸೆ ನೀಡಿದರು. ತಮ್ಮ ಪರವಾಗಿ ಪ್ರಚಾರಕ್ಕೆ ಬಳಸಿಕೊಂಡವರು ಆಟೋ ಚಾಲಕರ ನೆರವಿಗೆ ನಿಲ್ಲಬೇಕು ಎಂದು ಅವರು ಕರೆ ನೀಡಿದರು.
ಏಪ್ರಿಲ್ ಕೋಲಾರದಲ್ಲಿ ಏಪ್ರಿಲ್ 10ರಂದು ಕೋಲಾರದಲ್ಲಿ ನಡೆಯಬೇಕಿದ್ದ ಸತ್ಯಮೇವ ಜಯತೆ ಯಾತ್ರೆಗಿಂತ ಮೊದಲು ಅಭ್ಯರ್ಥಿಗಳ ಆಯ್ಕೆ ಕುರಿತು ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…