BREAKING NEWS

ಕಾಂಗ್ರೆಸ್ ಗ್ಯಾರಂಟಿಗೆ ಸ್ವಲ್ಪ ಸಮಯ ಕೊಡೋಣ, ಆಮೇಲೆ ಹೋರಾಟ ಮಾಡೋಣ : ಕೆಎಸ್‌ ಈಶ್ವರಪ್ಪ

ಶಿವಮೊಗ್ಗ : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ತಿಂಗಳಾದರೂ ಗ್ಯಾರಂಟಿ ಅಂಶಗಳನ್ನು ಪೂರ್ಣವಾಗಿ ಸಮರ್ಪಕವಾಗಿ ಜಾರಿ ಮಾಡಿಲ್ಲ. ಕಾಂಗ್ರೆಸ್ ಸರ್ಕಾರಕ್ಕೆ ಸಮಯ ಕೊಟ್ಟು ನೋಡೋಣ. ಅದಾದ್ಮೇಲೆ ನಾವು ಕಾರ್ಯಪ್ರವೃತ್ತರಾಗುತ್ತೇವೆ ಎಂದು ಮಾಜಿ ಸಚಿವ ಕೆಎಸ್‌ ಈಶ್ವರಪ್ಪ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಎಲ್ಲ ಗ್ಯಾರಂಟಿ ಯೋಜನೆಗಳನ್ನು ಮೊದಲನೇ ಸಚಿವ ಸಂಪುಟದಲ್ಲಿಯೇ ಜಾರಿ ಮಾಡುತ್ತೇವೆ ಎಂದು ಹೇಳಿದ್ದರು. ಆದರೆ, ಇನ್ನು ಗ್ಯಾರಂಟಿಗಳನ್ನು ಜಾರಿ ಮಾಡಿಲ್ಲ. ಕಾದು‌ ನೋಡೋಣ,‌ ಇನ್ನು ಸ್ವಲ್ಪ ಸಮಯ ಕೊಡೋಣ ಎಂದು ನಮ್ಮ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ರಾಜಕೀಯ ಪಕ್ಷಕ್ಕೆ ಸಮಯ ಕೊಡಬೇಕು, ಅವರು ಹೇಗೆ ಮಾಡುತ್ತಾರೆ ಎಂಬುದನ್ನು ನೋಡಿ ಮುಂದೆ ನಮ್ಮ ಹೆಜ್ಜೆಗಳನ್ನು ಇಡುತ್ತೇವೆ ಎಂದರು.

ಹೌದು, ಎಲ್ಲರಿಗೂ ಉಚಿತ ಎಂದು ಹೇಳಿದ್ದರು. ಈಗ ಅನೇಕ ಷರತ್ತುಗಳನ್ನು ವಿಧಿಸುತ್ತಿದ್ದಾರೆ. ಜನರಿಗೆ ಆಕ್ರೋಶ ವ್ಯಕ್ತವಾಗಿದೆ. ಹಾಗಾಗಿ ಬಿಜೆಪಿ ನಾಯಕರೆಲ್ಲಾ ಒಟ್ಟಿಗೆ ಕೂತು ಚರ್ಚೆ ಮಾಡಿ ಜನಪರ ಕಾರ್ಯಕ್ರಮಗಳನ್ನ ಕಾಂಗ್ರೆಸ್ ಸರ್ಕಾರ ಜಾರಿಗೆ ತರುವಂತೆ ನಾವು ಯೋಚನೆ ಮಾಡಿ ಹೋರಾಟ ರೂಪಿಸುತ್ತೇವೆ ಎಂದು ಈಶ್ವರಪ್ಪ ಹೇಳಿದರು.

ನನಗೆ 75 ವರ್ಷ ಆಗಿದೆ, ಖುಷಿ ತಂದಿದೆ! : 75 ವರ್ಷ ನನಗೆ ಆಗಿದೆ ಎಂದು ನನ್ನ ಹಿತೈಷಿಗಳು ಎಲ್ಲರೂ ಸಂಭ್ರಮಿಸುತ್ತಿದ್ದಾರೆ. ಈ ವಿಚಾರ ನನಗೆ ಖುಷಿ ತಂದಿದೆ. ಇದು ನನ್ನ ಭಾಗ್ಯ ಎಂದು ಭಾವಿಸುತ್ತೇನೆ. ಇಂದು ಕಾಶಿ ಮಠದ ಜಗದ್ಗುರುಗಳಾದ ಚಂದ್ರಶೇಖರ ಶಿವಾಚಾರ್ಯರು ನನ್ನ ಮನೆಗೆ ಬಂದು ನನ್ನನ್ನು ಆಶೀರ್ವಾದ ಮಾಡಿದ್ದಾರೆ. ಅವರಾಗಿಯೇ ನನ್ನ ಹುಟ್ಟು ಹಬ್ಬದ ಮಾಹಿತಿ ತಿಳಿದು ನನ್ನ ಮನೆಗೆ ಬಂದಿರುವುದು ನನ್ನ ಪುಣ್ಯ. ಎಲ್ಲ ಹಿತೈಷಿಗಳು ನನಗೆ ಆಶೀರ್ವಾದ ಮಾಡಿದ್ದಾರೆ. ಬರುವ ದಿನಗಳಲ್ಲಿ ಈ ಸಮಾಜದ ಸೇವೆ ಮಾಡೋದಕ್ಕಾಗಿ ಹಾಗೂ ಧರ್ಮ ರಕ್ಷಣೆಗಾಗಿ ನಾನು ಕೆಲಸ ಮಾಡುತ್ತೇನೆ. ಇವತ್ತು ಹೆಚ್ಚು ಸ್ಪೂರ್ತಿ ನನಗೆ ಸಿಕ್ಕಿದೆ ಎಂದು ನಾನು ಭಾವಿಸುತ್ತೇನೆ. ಮೊನ್ನೆ ನಮ್ಮ ಇಡೀ ಕುಟುಂಬದ 18 ಜನ ಸದಸ್ಯರು ಚಾರ್ ಧಾಮ್ ಪ್ರವಾಸ ಮಾಡಿ ಬಂದಿದ್ದೇವೆ ಎಂದರು.

ಸಾಕಷ್ಟು ತೀರ್ಥಯಾತ್ರೆ ಮಾಡಿದೀನಿ! : ಚುನಾವಣೆಗಳೆಲ್ಲಾ ಮುಗಿದ ನಂತರ ಸಾಕಷ್ಟು ಸಮಯ ಮಾಡಿಕೊಂಡು ಪುಣ್ಯಕ್ಷೇತ್ರಗಳನ್ನು ದರ್ಶನ ಮಾಡಿ ಬಂದಿದ್ದೇವೆ. ಯಮುನೋತ್ರಿಗೆ ಹೋಗುವ ಸಂದರ್ಭದಲ್ಲಿ ಮಳೆ ಬಂತು, ಜನರ ಮಧ್ಯೆ ನಾಲ್ಕು ಗಂಟೆ ಮಳೆಯಲ್ಲೇ ನಿಂತಿದ್ದು ನನಗೆ ವಿಶೇಷ ಅನುಭೂತಿ ನೀಡಿದೆ ಎಂದು ಹೇಳಿದರು.

lokesh

Recent Posts

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

3 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

5 hours ago

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

5 hours ago

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…

5 hours ago

ಓದುಗರ ಪತ್ರ: ಸ್ಥಳ ಶುದ್ಧೀಕರಣಕ್ಕಿಂತ ಮನ ಶುದ್ಧೀಕರಣವಾಗಲಿ

ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…

6 hours ago

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

10 hours ago