BREAKING NEWS

ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ : ಹಿಂದೂ ಸಂಘಟನೆ ಕಾರ್ಯಕರ್ತ ಅರೆಸ್ಟ್

ದಾವಣಗೆರೆ‌ : ಸಾಹಿತಿಗಳಿಗೆ ಅನಾಮಧೇಯ ಪತ್ರದ ಮೂಲಕ ಜೀವ ಬೆದರಿಕೆ ಪತ್ರ ಕಳುಹಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ದಾವಣಗೆರೆ ಮೂಲದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.

ಪತ್ರ ಬರೆಯುತ್ತಿದ್ದ ಹಿಂದೂ ಸಂಘಟನೆ ಕಾರ್ಯಕರ್ತ ಶಿವಾಜಿ ರಾವ್‌ ಜಾಧವ್ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಸುಮಾರು ಎರಡು ವರ್ಷಗಳಿಂದ ಕೊಲೆ ಬೆದರಿಕೆ ಪತ್ರ ಬರೆಯುತ್ತಿದ್ದ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಸಿಸಿಬಿ ಎಸಿಪಿ ನವೀನ್ ಕುಲಕರ್ಣಿ ಮತ್ತು ತಂಡ ದಾವಣಗೆರೆಯಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ದಾವಣಗೆರೆ ಸೇರಿದಂತೆ ಕೆಲವೆಡೆ ಕಾರ್ಯಾಚರಣೆ ನಡೆಸಿದ ಸಿಸಿಬಿ, ಪತ್ರ ಬರೆದಿರುವ ಶಂಕೆಯ ಮೇರೆಗೆ 8 ಮಂದಿಯನ್ನು ವಶಕ್ಕೆ ಪಡೆದಿತ್ತು. ಈ ಪೈಕಿ ಶಿವಾಜಿ ರಾವ್‌ ಜಾಧವ್ ಮೇಲೆ ಸಿಸಿಬಿಗೆ ಪ್ರಬಲ ಅನುಮಾನ ವ್ಯಕ್ತವಾಗಿತ್ತು.

ಖ್ಯಾತ ಸಾಹಿತಿಗಳಾದ ಕುಂ.ವೀರಭದ್ರಪ್ಪ, ಬಂಜಗೆರೆ ಜಯಪ್ರಕಾಶ್, ಬಿ.ಎಲ್.ವೇಣು, ಬಿ.ಟಿ.ಲಲಿತಾ ನಾಯಕ್‌, ವಸುಂಧರ ಭೂಪತಿ ಸೇರಿದಂತೆ ಕೆಲವು ಸ್ವಾಮೀಜಿಗಳಿಗೆ ಅನಾಮಧೇಯ ಹೆಸರಿನಲ್ಲಿ ಜೀವ ಬೆದರಿಕೆ ಪತ್ರಗಳು ಬಂದಿದ್ದವು. ಈ ಪತ್ರಗಳನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರವು, ಇದರ ಹಿಂದಿರುವವರನ್ನು ಪತ್ತೆ ಹಚ್ಚಲು ಸಿಸಿಬಿಗೆ ತನಿಖೆಗೆ ವಹಿಸಿತ್ತು. ಪತ್ರಗಳು ನಿರಂತರವಾಗಿ ಬರುತ್ತಿದ್ದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಏಳು ಕಡೆಗಳಲ್ಲಿ ಎಫ್‌ಐಆರ್ ದಾಖಲಾಗಿತ್ತು.

ನಿಮ್ಮನ್ನು ಯಾಕೆ ಕೊಲೆ ಮಾಡಬಾರದು? ನಿಮ್ಮನ್ನು ಯಾಕೆ ಗುಂಡಿಟ್ಟು ಕೊಲ್ಲಬಾರದು? ನೀವು ನಿಮ್ಮ ಕೊನೆ ದಿನಗಳನ್ನು ಎಣಿಸುತ್ತಿದ್ದೀರಿ ಎಂದು ಶಿವಾಜಿ ರಾವ್ ಪತ್ರ ಬರೆಯುತ್ತಿದ್ದ. ಪ್ರತಿ ಬೆದರಿಕೆ ಪತ್ರದಲ್ಲೂ ಒಂದೇ ರೀತಿಯ ಕೈ ಬರಹ ಇತ್ತು. ದಾವಣಗೆರೆಯಿಂದಲೇ ಈ ಪತ್ರಗಳು ಪೋಸ್ಟ್ ಆಗುತ್ತಿದ್ದವು. ಎರಡು ವರ್ಷಗಳಿಂದ ಬರುತ್ತಿದ್ದ ಅನಾಮಧೇಯ ಬೆದರಿಕೆ ಪತ್ರದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಏಳು ಎಫ್‌ಐಆರ್ ದಾಖಲಾಗಿತ್ತು. ನಂತರ ಪ್ರಕರಣವನ್ನು ರಾಜ್ಯ ಸರ್ಕಾರ ಸಿಸಿಬಿಗೆ ವರ್ಗಾಯಿಸಿತ್ತು.

ಒಂದೇ ಕೈಬರಹದಿಂದ ಕೊಲೆ ಬೆದರಿಕೆ ಬಂದಿದೆ ಎನ್ನುವುದು ವಿಧಿ ವಿಜ್ಞಾನ ಪ್ರಯೋಗಾಲಯದ ಪರೀಕ್ಷೆಯಿಂದ ದೃಢಪಟ್ಟಿತ್ತು. ತನಿಖೆಯಿಂದ ದಾವಣಗೆರೆ ಮೂಲದಿಂದ ಪತ್ರ ಬಂದಿದ್ದರೂ ಬೇರೆ ಬೇರೆ ತಾಲೂಕು, ಜಿಲ್ಲೆಗಳಿಗೆ ಹೋಗಿ ಪೋಸ್ಟ್‌ ಮಾಡಲಾಗಿತ್ತು.

lokesh

Recent Posts

ಫಾಸ್ಟ್‌ಟ್ಯಾಗ್ ಇಲ್ಲದಿದ್ದರೆ ಹೆದ್ದಾರಿಗಿಲ್ಲ ಪ್ರವೇಶ

ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…

13 mins ago

ಅಮೆರಿಕದೊಂದಿಗೆ ಯಾವುದೇ ನೇರ ಮಾತುಕತೆ ನಡೆದಿಲ್ಲ : ಇರಾನ್‌ ಸ್ಪಷ್ಟನೆ

ಟೆಹ್ರಾನ್‌ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…

20 mins ago

ಹೊರ್ಮುಜ್‌ ಜಲಸಂಧಿ ಮುಕ್ತಗೊಳಿಸಿ ; ಇರಾನ್‌ಗೆ ಅಂತಿಮ ಎಚ್ಚರಿಕೆ ನೀಡಿದ ಟ್ರಂಪ್‌

ವಾಷಿಂಗ್ಟನ್‌ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್‌ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…

46 mins ago

ದೇಶದಲ್ಲೇ ಮೊದಲ ಮಕ್ಕಳ ಬೃಹತ್ ಆಸ್ಪತ್ರೆ ಬೆಂಗಳೂರಿನಲ್ಲಿ

ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…

2 hours ago

ಬೈಲಕುಪ್ಪೆ ಹಿಟ್‌ ಅಂಡ್‌ ರನ್‌ ಕೇಸ್‌ ; ರಸ್ತೆ ತಡೆದು ಪ್ರತಿಭಟನೆ ನಡೆಸಿದ ಸ್ಥಳೀಯರು

ಬೈಲಕುಪ್ಪೆ : ನಿನ್ನೆ ರಾತ್ರಿ ನಡೆದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ…

2 hours ago

ಬಹುಭಾಷಾ ನಟ ಪ್ರಕಾಶ್‌ ರಾಜ್‌ ತಾಯಿ ಸುವರ್ಣಲತಾ ನಿಧನ

ಹೈದರಬಾದ್‌ : ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ ಅವರು ನಿಧನರಾಗಿದ್ದಾರೆ. 85 ವರ್ಷದ ಸುವರ್ಣಲತಾ ಅವರು…

2 hours ago