ದಾವಣಗೆರೆ : ಸಾಹಿತಿಗಳಿಗೆ ಅನಾಮಧೇಯ ಪತ್ರದ ಮೂಲಕ ಜೀವ ಬೆದರಿಕೆ ಪತ್ರ ಕಳುಹಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ದಾವಣಗೆರೆ ಮೂಲದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.
ಪತ್ರ ಬರೆಯುತ್ತಿದ್ದ ಹಿಂದೂ ಸಂಘಟನೆ ಕಾರ್ಯಕರ್ತ ಶಿವಾಜಿ ರಾವ್ ಜಾಧವ್ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಸುಮಾರು ಎರಡು ವರ್ಷಗಳಿಂದ ಕೊಲೆ ಬೆದರಿಕೆ ಪತ್ರ ಬರೆಯುತ್ತಿದ್ದ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಸಿಸಿಬಿ ಎಸಿಪಿ ನವೀನ್ ಕುಲಕರ್ಣಿ ಮತ್ತು ತಂಡ ದಾವಣಗೆರೆಯಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ದಾವಣಗೆರೆ ಸೇರಿದಂತೆ ಕೆಲವೆಡೆ ಕಾರ್ಯಾಚರಣೆ ನಡೆಸಿದ ಸಿಸಿಬಿ, ಪತ್ರ ಬರೆದಿರುವ ಶಂಕೆಯ ಮೇರೆಗೆ 8 ಮಂದಿಯನ್ನು ವಶಕ್ಕೆ ಪಡೆದಿತ್ತು. ಈ ಪೈಕಿ ಶಿವಾಜಿ ರಾವ್ ಜಾಧವ್ ಮೇಲೆ ಸಿಸಿಬಿಗೆ ಪ್ರಬಲ ಅನುಮಾನ ವ್ಯಕ್ತವಾಗಿತ್ತು.
ಖ್ಯಾತ ಸಾಹಿತಿಗಳಾದ ಕುಂ.ವೀರಭದ್ರಪ್ಪ, ಬಂಜಗೆರೆ ಜಯಪ್ರಕಾಶ್, ಬಿ.ಎಲ್.ವೇಣು, ಬಿ.ಟಿ.ಲಲಿತಾ ನಾಯಕ್, ವಸುಂಧರ ಭೂಪತಿ ಸೇರಿದಂತೆ ಕೆಲವು ಸ್ವಾಮೀಜಿಗಳಿಗೆ ಅನಾಮಧೇಯ ಹೆಸರಿನಲ್ಲಿ ಜೀವ ಬೆದರಿಕೆ ಪತ್ರಗಳು ಬಂದಿದ್ದವು. ಈ ಪತ್ರಗಳನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರವು, ಇದರ ಹಿಂದಿರುವವರನ್ನು ಪತ್ತೆ ಹಚ್ಚಲು ಸಿಸಿಬಿಗೆ ತನಿಖೆಗೆ ವಹಿಸಿತ್ತು. ಪತ್ರಗಳು ನಿರಂತರವಾಗಿ ಬರುತ್ತಿದ್ದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಏಳು ಕಡೆಗಳಲ್ಲಿ ಎಫ್ಐಆರ್ ದಾಖಲಾಗಿತ್ತು.
ನಿಮ್ಮನ್ನು ಯಾಕೆ ಕೊಲೆ ಮಾಡಬಾರದು? ನಿಮ್ಮನ್ನು ಯಾಕೆ ಗುಂಡಿಟ್ಟು ಕೊಲ್ಲಬಾರದು? ನೀವು ನಿಮ್ಮ ಕೊನೆ ದಿನಗಳನ್ನು ಎಣಿಸುತ್ತಿದ್ದೀರಿ ಎಂದು ಶಿವಾಜಿ ರಾವ್ ಪತ್ರ ಬರೆಯುತ್ತಿದ್ದ. ಪ್ರತಿ ಬೆದರಿಕೆ ಪತ್ರದಲ್ಲೂ ಒಂದೇ ರೀತಿಯ ಕೈ ಬರಹ ಇತ್ತು. ದಾವಣಗೆರೆಯಿಂದಲೇ ಈ ಪತ್ರಗಳು ಪೋಸ್ಟ್ ಆಗುತ್ತಿದ್ದವು. ಎರಡು ವರ್ಷಗಳಿಂದ ಬರುತ್ತಿದ್ದ ಅನಾಮಧೇಯ ಬೆದರಿಕೆ ಪತ್ರದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಏಳು ಎಫ್ಐಆರ್ ದಾಖಲಾಗಿತ್ತು. ನಂತರ ಪ್ರಕರಣವನ್ನು ರಾಜ್ಯ ಸರ್ಕಾರ ಸಿಸಿಬಿಗೆ ವರ್ಗಾಯಿಸಿತ್ತು.
ಒಂದೇ ಕೈಬರಹದಿಂದ ಕೊಲೆ ಬೆದರಿಕೆ ಬಂದಿದೆ ಎನ್ನುವುದು ವಿಧಿ ವಿಜ್ಞಾನ ಪ್ರಯೋಗಾಲಯದ ಪರೀಕ್ಷೆಯಿಂದ ದೃಢಪಟ್ಟಿತ್ತು. ತನಿಖೆಯಿಂದ ದಾವಣಗೆರೆ ಮೂಲದಿಂದ ಪತ್ರ ಬಂದಿದ್ದರೂ ಬೇರೆ ಬೇರೆ ತಾಲೂಕು, ಜಿಲ್ಲೆಗಳಿಗೆ ಹೋಗಿ ಪೋಸ್ಟ್ ಮಾಡಲಾಗಿತ್ತು.
ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…
ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…
ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…
ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…
ಮೈಸೂರು: ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…
ಮೈಸೂರು: ಕಾಂತಾರ ದೈವದ ಪಾತ್ರಕ್ಕೆ ಅಪಮಾನ ಮಾಡಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ…