BREAKING NEWS

ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ : ಹಿಂದೂ ಸಂಘಟನೆ ಕಾರ್ಯಕರ್ತ ಅರೆಸ್ಟ್

ದಾವಣಗೆರೆ‌ : ಸಾಹಿತಿಗಳಿಗೆ ಅನಾಮಧೇಯ ಪತ್ರದ ಮೂಲಕ ಜೀವ ಬೆದರಿಕೆ ಪತ್ರ ಕಳುಹಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ದಾವಣಗೆರೆ ಮೂಲದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.

ಪತ್ರ ಬರೆಯುತ್ತಿದ್ದ ಹಿಂದೂ ಸಂಘಟನೆ ಕಾರ್ಯಕರ್ತ ಶಿವಾಜಿ ರಾವ್‌ ಜಾಧವ್ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಸುಮಾರು ಎರಡು ವರ್ಷಗಳಿಂದ ಕೊಲೆ ಬೆದರಿಕೆ ಪತ್ರ ಬರೆಯುತ್ತಿದ್ದ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಸಿಸಿಬಿ ಎಸಿಪಿ ನವೀನ್ ಕುಲಕರ್ಣಿ ಮತ್ತು ತಂಡ ದಾವಣಗೆರೆಯಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ದಾವಣಗೆರೆ ಸೇರಿದಂತೆ ಕೆಲವೆಡೆ ಕಾರ್ಯಾಚರಣೆ ನಡೆಸಿದ ಸಿಸಿಬಿ, ಪತ್ರ ಬರೆದಿರುವ ಶಂಕೆಯ ಮೇರೆಗೆ 8 ಮಂದಿಯನ್ನು ವಶಕ್ಕೆ ಪಡೆದಿತ್ತು. ಈ ಪೈಕಿ ಶಿವಾಜಿ ರಾವ್‌ ಜಾಧವ್ ಮೇಲೆ ಸಿಸಿಬಿಗೆ ಪ್ರಬಲ ಅನುಮಾನ ವ್ಯಕ್ತವಾಗಿತ್ತು.

ಖ್ಯಾತ ಸಾಹಿತಿಗಳಾದ ಕುಂ.ವೀರಭದ್ರಪ್ಪ, ಬಂಜಗೆರೆ ಜಯಪ್ರಕಾಶ್, ಬಿ.ಎಲ್.ವೇಣು, ಬಿ.ಟಿ.ಲಲಿತಾ ನಾಯಕ್‌, ವಸುಂಧರ ಭೂಪತಿ ಸೇರಿದಂತೆ ಕೆಲವು ಸ್ವಾಮೀಜಿಗಳಿಗೆ ಅನಾಮಧೇಯ ಹೆಸರಿನಲ್ಲಿ ಜೀವ ಬೆದರಿಕೆ ಪತ್ರಗಳು ಬಂದಿದ್ದವು. ಈ ಪತ್ರಗಳನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರವು, ಇದರ ಹಿಂದಿರುವವರನ್ನು ಪತ್ತೆ ಹಚ್ಚಲು ಸಿಸಿಬಿಗೆ ತನಿಖೆಗೆ ವಹಿಸಿತ್ತು. ಪತ್ರಗಳು ನಿರಂತರವಾಗಿ ಬರುತ್ತಿದ್ದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಏಳು ಕಡೆಗಳಲ್ಲಿ ಎಫ್‌ಐಆರ್ ದಾಖಲಾಗಿತ್ತು.

ನಿಮ್ಮನ್ನು ಯಾಕೆ ಕೊಲೆ ಮಾಡಬಾರದು? ನಿಮ್ಮನ್ನು ಯಾಕೆ ಗುಂಡಿಟ್ಟು ಕೊಲ್ಲಬಾರದು? ನೀವು ನಿಮ್ಮ ಕೊನೆ ದಿನಗಳನ್ನು ಎಣಿಸುತ್ತಿದ್ದೀರಿ ಎಂದು ಶಿವಾಜಿ ರಾವ್ ಪತ್ರ ಬರೆಯುತ್ತಿದ್ದ. ಪ್ರತಿ ಬೆದರಿಕೆ ಪತ್ರದಲ್ಲೂ ಒಂದೇ ರೀತಿಯ ಕೈ ಬರಹ ಇತ್ತು. ದಾವಣಗೆರೆಯಿಂದಲೇ ಈ ಪತ್ರಗಳು ಪೋಸ್ಟ್ ಆಗುತ್ತಿದ್ದವು. ಎರಡು ವರ್ಷಗಳಿಂದ ಬರುತ್ತಿದ್ದ ಅನಾಮಧೇಯ ಬೆದರಿಕೆ ಪತ್ರದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಏಳು ಎಫ್‌ಐಆರ್ ದಾಖಲಾಗಿತ್ತು. ನಂತರ ಪ್ರಕರಣವನ್ನು ರಾಜ್ಯ ಸರ್ಕಾರ ಸಿಸಿಬಿಗೆ ವರ್ಗಾಯಿಸಿತ್ತು.

ಒಂದೇ ಕೈಬರಹದಿಂದ ಕೊಲೆ ಬೆದರಿಕೆ ಬಂದಿದೆ ಎನ್ನುವುದು ವಿಧಿ ವಿಜ್ಞಾನ ಪ್ರಯೋಗಾಲಯದ ಪರೀಕ್ಷೆಯಿಂದ ದೃಢಪಟ್ಟಿತ್ತು. ತನಿಖೆಯಿಂದ ದಾವಣಗೆರೆ ಮೂಲದಿಂದ ಪತ್ರ ಬಂದಿದ್ದರೂ ಬೇರೆ ಬೇರೆ ತಾಲೂಕು, ಜಿಲ್ಲೆಗಳಿಗೆ ಹೋಗಿ ಪೋಸ್ಟ್‌ ಮಾಡಲಾಗಿತ್ತು.

lokesh

Recent Posts

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

40 mins ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

11 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

11 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

11 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

11 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

12 hours ago