ಚಾಮರಾಜನಗರ : ಇಲ್ಲಿನ ಭೋಗಪುರ ಬಳಿ ಲಘು ವಿಮಾನವೊಂದು ಪತನವಾಗಿದ್ದು ಇಬ್ಬರು ಪೈಲಟ್ ಗಳು ಅಪಾಯದಿಂದ ಪಾರಾಗಿದ್ದಾರೆ.
ವಿಮಾನದಲ್ಲಿ ತಾಂತ್ರಿಕ ತೊಂದರೆ ಕಾಣಿಸಿಕೊಂಡು ಅಪಾಯದ ಮುನ್ಸೂಚನೆ ಲಭಿಸುತ್ತಿದ್ದಂತೆ ಇಬ್ಬರೂ ಪೈಲಟ್ ಗಳು ಪ್ಯಾರಾಚೂಟ್ ಮೂಲಕ ಕೆಳಗಿಳಿದಿದ್ದಾರೆ. ವಿಮಾನ ವೇಗದಲ್ಲಿ ಬಂದು ನೆಲಕ್ಕಪ್ಪಳಿಸುತ್ತಿದ್ದಂತೆ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾಗಿದೆ.
ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು ಈ ಕುರಿತು ತನಿಖೆ ಕೈಗೊಳ್ಳಲಾಗುತ್ತಿದೆ. ಕಳೆದ ಮಂಗಳವಾರವಷ್ಟೇ ಬೆಳಗಾವಿ ತಾಲೂಕಿನ ಹೊನ್ನಿಹಾಳ ಗ್ರಾಮದಲ್ಲಿ ಸಾಂಬ್ರಾ ನಿಲ್ದಾಣದಿಂದ ಹೊರಟಿದ್ದ ಲಘು ತರಬೇತಿ ವಿಮಾನ ಹೊಲವೊಂದರಲ್ಲಿ ತುರ್ತು ಭೂಸ್ಪರ್ಷ ಮಾಡಿತ್ತು. ಈ ಘಟನೆಯಲ್ಲೂ ಪೈಲಟ್ ಗಳು ಅಪಾಯವಿಲ್ಲದೆ ಪಾರಾಗಿದ್ದರು. ಇದರ ಬೆನ್ನಿಗೇ ಭೋಗಪುರ ಹೊರವಲಯದಲ್ಲಿ ಈ ಘಟನೆ ನಡೆದಿದೆ.
ಮಳವಳ್ಳಿ : ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಶವವನ್ನು ಆತನ ಪಾಳು ಮನೆ ಮುಂದೆ ಎಸೆದು ಹೋಗಿರುವ ದುಷ್ಕೃತ್ಯವೊಂದು ಮಳವಳ್ಳಿ…
ಕೋಲ್ಕತ್ತಾ : ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ಸೋಮವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡ ಇಟಲಿ ವಿರುದ್ಧ…
ನಂಜನಗೂಡು : ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30 ಸಾವಿರ ದಂಡ ವಿಧಿಸುವ…
ಬೆಂಗಳೂರು : ದುಬೈನ ಕರ್ನಾಟಕ ಸಂಘದೊಂದಿಗೆ ನವೆಂಬರ್ 22 ರಂದು ನಾವಿಕ ರಾಜ್ಯೋತ್ಸವ ಮತ್ತು ನಾಟಕೋತ್ಸವವನ್ನು ಆಯೋಜಿಸಲಾಗಿದೆ ಎಂದು ನಾವು…
ಹೊಸದಿಲ್ಲಿ : ಭಾರತ ಸರ್ಕಾರವು ಸ್ಪೆಶಾಲಿಟಿ ಸ್ಟೀಲ್ (ವಿಶೇಷ ಉಕ್ಕು) ಉತ್ಪಾದನೆಗೆ ಸಂಬಂಧಿಸಿ ಹೊಸದಾಗಿ ಉತ್ತೇಜನಾ (ಪಿಎಲ್ಐ) ಯೋಜನೆ 1.2…
ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಲ್ಲಿ ಅಂತರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆಯಲ್ಲಿಂದು…