BREAKING NEWS

ಕರ್ನಾಟಕದಂತೆ ಮಧ್ಯಪ್ರದೇಶದಲ್ಲಿ ಪೇಸಿಎಂ ಮಾದರಿಯ ತಂತ್ರ ಪ್ರಯೋಗಿಸಲು ಹೋಗಿ ಪೇಚಿಗೆ ಸಿಲುಕಿದ ಕಾಂಗ್ರೆಸ್​

ಮಧ್ಯಪ್ರದೇಶ : ಕರ್ನಾಟಕದ ವಿಧಾನಸಭೆ ಚುನಾವಣೆ ಸಮಯದಲ್ಲಿ ಆಗ ಮುಖ್ಯಮಂತ್ರಿಯಾಗಿದ್ದ ಬಸವರಾಜ್ ಬೊಮ್ಮಾಯಿ ಅವರ ವಿರುದ್ಧ ಕಾಂಗ್ರೆಸ್​ ಮಾಡಿದ್ದ ಪೇ ಸಿಎಂ ಅಭಿಯಾನದಂತೆ ಮಧ್ಯಪ್ರದೇಶದಲ್ಲೂ ಮಾಡಲು ಹೋಗಿ ಪೇಚಿಗೆ ಸಿಲುಕಿದೆ. ಕರ್ನಾಟಕದಲ್ಲಿ ಪೇಟಿಎಂ ಮಾದರಿಯಲ್ಲಿ ಪೇಸಿಎಂ ಎಂದು ಬರೆದು ಪೋಸ್ಟರ್​ಗಳನ್ನು ಅಂಟಿಸಲಾಗಿತ್ತು, ಮಧ್ಯಪ್ರದೇಶದಲ್ಲೂ ಸಿಎಂ ಶಿವರಾಜ್ ಸಿಂಗ್ ಅವರ ಪೋಸ್ಟರ್​ಗೆ ಫೋನ್ ಪೇ ಲೋಗೋ ಬಳಕೆ ಮಾಡಿ ಸಂಕಷ್ಟಕ್ಕೆ ಸಿಲುಕಿದೆ. ಅದರಲ್ಲಿ ಫೋನ್​ ಪೇ ಮಾದರಿಯನ್ನು ಬಳಕೆ ಮಾಡಿರುವ ಕಾರಣ ಫೋನ್​ ಪೇ ಸಂಸ್ಥೆಯು ಕಾಂಗ್ರೆಸ್​ಗೆ ಎಚ್ಚರಿಕೆ ನೀಡಿದೆ.

ತಮ್ಮ ಲೋಗೋವನ್ನು ದುರ್ಬಳಕೆ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದು, ಕಾನೂನು ಸಮರದ ಎಚ್ಚರಿಕೆ ನೀಡಿದೆ. ಮಧ್ಯಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ರಾಜಕೀಯ ಜಿದ್ದಾಜಿದ್ದಿಯೂ ಜೋರಾಗಿದೆ. ಪೋಸ್ಟರ್ ವಾರ್, ಟ್ವಿಟ್ಟರ್ ವಾರ್, ಮಾತಿನ ಸಮರ ಎಲ್ಲವೂ ನಡೆಯುತ್ತಿದ್ದು ಸಧ್ಯಕ್ಕೆ ಪೋಸ್ಟರ್ ವಾರ್ ಚಾಲ್ತಿಯಲ್ಲಿದೆ.

ವರದಿ ಪ್ರಕಾರ, PhonePe ಕಂಪನಿಯು ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್‌ನೊಂದಿಗೆ ಕಾಂಗ್ರೆಸ್​ MPಯನ್ನು ಟ್ಯಾಗ್ ಮಾಡುವ ಮೂಲಕ ಎಚ್ಚರಿಕೆ ನೀಡಿದೆ. ಅವರು ಟ್ವೀಟ್ ಮಾಡಿ PhonePe ಲೋಗೋ ನಮ್ಮ ಕಂಪನಿಯ ನೋಂದಾಯಿತ ಟ್ರೇಡ್‌ಮಾರ್ಕ್ ಆಗಿದೆ. ಅದನ್ನು ದುರುಪಯೋಗ ಪಡಿಸಿಕೊಳ್ಳಲಾಗಿದೆ.

ಪೋಸ್ಟರ್‌ನಿಂದ ನಮ್ಮ ಲೋಗೋ ಮತ್ತು ಬ್ರ್ಯಾಂಡ್ ಬಣ್ಣವನ್ನು ತೆಗೆದುಹಾಕಲು ನಾವು ವಿನಮ್ರವಾಗಿ ವಿನಂತಿಸುತ್ತೇವೆ. PhonePe ತನ್ನ ಬ್ರ್ಯಾಂಡ್ ಲೋಗೋವನ್ನು ರಾಜಕೀಯ ಅಥವಾ ರಾಜಕೀಯೇತರ ಯಾವುದೇ ಮೂರನೇ ವ್ಯಕ್ತಿಯಿಂದ ಬಳಸುವುದನ್ನು ನಾವು ವಿರೋಧಿಸುತ್ತೇವೆ, ನಾವು ಯಾವುದೇ ರಾಜಕೀಯ ಪಕ್ಷದೊಂದಿಗೆ ಸಂಬಂಧ ಹೊಂದಿಲ್ಲ ಎಂದು ಬರೆದಿದೆ.

ಬಿಜೆಪಿಯೇ ಒಂದು ವಾರ ಮೊದಲು ಕಮಲ್​ ನಾಥ್ ವಿರುದ್ಧ ಪೋಸ್ಟರ್​ ಹಾಕಿತ್ತು, ಅವರೇ ಮೊದಲು ಈ ಪೋಸ್ಟರ್​ ವಾರ್ ಆರಂಭಿಸಿದವರು ಎಂದು ಕಾಂಗ್ರೆಸ್ ದೂರಿದೆ. ಆದರೆ ಆ ಪೋಸ್ಟರ್ ನಾವು ಹಾಕಿದ್ದಲ್ಲ ಅದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಬಿಜೆಪಿ ಪ್ರತಿಕ್ರಿಯಿಸಿದೆ.

lokesh

Recent Posts

2030ರ ವೇಳೆಗೆ 2 ಮಿಲಿಯನ್‌ ಉದ್ಯೋಗ ಸೃಷ್ಟಿ, ಅಭಿವೃದ್ಧಿ ಪರ ಆಯವ್ಯಯ : ಸಂಸದ ಯದುವೀರ್‌

ಮೈಸೂರು : ಯುವ ಸಮುದಾಯಕ್ಕೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ವಿಕಸಿತ…

7 hours ago

ಜನರನ್ನು ದಿಕ್ಕು ತಪ್ಪಿಸುತ್ತಿರುವ ಎನ್‌ಸಿಬಿ : ಎಂ.ಲಕ್ಷ್ಮಣ್‌ ಆರೋಪ

ಮೈಸೂರು : ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಸ್ತುಗಳಿಗೆ ಸಂಬಂಸಿದಂತೆ ಎನ್‌ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರವೇ ಬೇರೆ.…

7 hours ago

ಬಡತನ ಪ್ರಮಾಣ ಗಣನೀಯ ಇಳಿಕೆ: ನಿರ್ಮಲಾ

ಹೊಸದಿಲ್ಲಿ: ಕಳೆದ 12 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಶಿಸ್ತುಬದ್ಧ ಆರ್ಥಿಕ ನಿರ್ವಹಣೆ ನಡೆಯುತ್ತಿರುವುದರಿಂದ ಭಾರತದ ಜಿಡಿಪಿ ದರ…

7 hours ago

ಕೇಂದ್ರ ಬಜೆಟ್‌ | 17.2 ಲಕ್ಷ ಕೋಟಿ ರೂ. ಸಾಲ

ಹೊಸದಿಲ್ಲಿ : ಕೇಂದ್ರ ಸರ್ಕಾರ 2026-27 ನೇ ಸಾಲಿಗೆ 17.2 ಲಕ್ಷ ಕೋಟಿ ರೂ. ಸಾಲ ಪಡೆಯಲಿದೆ ಎಂದು ಹಣಕಾಸು…

7 hours ago

ಕೇಂದ್ರ ಬಜೆಟ್‌ | ಯಾವುದು ಅಗ್ಗ, ಯಾವುದು ದುಬಾರಿ ?

ಹೊಸದಿಲ್ಲಿ : ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಆಯವ್ಯಯದಲ್ಲಿ…

7 hours ago

ಕರ್ನಾಟಕ ವಿರೋಧಿ ಬಜೆಟ್‌ : ಎಚ್‌ಸಿಎಂ ವ್ಯಂಗ್ಯ

ಬೆಂಗಳೂರು : ಹಣಕಾಸು ತಜ್ಞೆ ಅಲ್ಲದ ಕೇಂದ್ರದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ೯ನೇ ಕಳಪೆ ಬಜೆಟ್ ಇದಾಗಿದೆ.…

8 hours ago