BREAKING NEWS

ಕರ್ನಾಟಕದಂತೆ ಮಧ್ಯಪ್ರದೇಶದಲ್ಲಿ ಪೇಸಿಎಂ ಮಾದರಿಯ ತಂತ್ರ ಪ್ರಯೋಗಿಸಲು ಹೋಗಿ ಪೇಚಿಗೆ ಸಿಲುಕಿದ ಕಾಂಗ್ರೆಸ್​

ಮಧ್ಯಪ್ರದೇಶ : ಕರ್ನಾಟಕದ ವಿಧಾನಸಭೆ ಚುನಾವಣೆ ಸಮಯದಲ್ಲಿ ಆಗ ಮುಖ್ಯಮಂತ್ರಿಯಾಗಿದ್ದ ಬಸವರಾಜ್ ಬೊಮ್ಮಾಯಿ ಅವರ ವಿರುದ್ಧ ಕಾಂಗ್ರೆಸ್​ ಮಾಡಿದ್ದ ಪೇ ಸಿಎಂ ಅಭಿಯಾನದಂತೆ ಮಧ್ಯಪ್ರದೇಶದಲ್ಲೂ ಮಾಡಲು ಹೋಗಿ ಪೇಚಿಗೆ ಸಿಲುಕಿದೆ. ಕರ್ನಾಟಕದಲ್ಲಿ ಪೇಟಿಎಂ ಮಾದರಿಯಲ್ಲಿ ಪೇಸಿಎಂ ಎಂದು ಬರೆದು ಪೋಸ್ಟರ್​ಗಳನ್ನು ಅಂಟಿಸಲಾಗಿತ್ತು, ಮಧ್ಯಪ್ರದೇಶದಲ್ಲೂ ಸಿಎಂ ಶಿವರಾಜ್ ಸಿಂಗ್ ಅವರ ಪೋಸ್ಟರ್​ಗೆ ಫೋನ್ ಪೇ ಲೋಗೋ ಬಳಕೆ ಮಾಡಿ ಸಂಕಷ್ಟಕ್ಕೆ ಸಿಲುಕಿದೆ. ಅದರಲ್ಲಿ ಫೋನ್​ ಪೇ ಮಾದರಿಯನ್ನು ಬಳಕೆ ಮಾಡಿರುವ ಕಾರಣ ಫೋನ್​ ಪೇ ಸಂಸ್ಥೆಯು ಕಾಂಗ್ರೆಸ್​ಗೆ ಎಚ್ಚರಿಕೆ ನೀಡಿದೆ.

ತಮ್ಮ ಲೋಗೋವನ್ನು ದುರ್ಬಳಕೆ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದು, ಕಾನೂನು ಸಮರದ ಎಚ್ಚರಿಕೆ ನೀಡಿದೆ. ಮಧ್ಯಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ರಾಜಕೀಯ ಜಿದ್ದಾಜಿದ್ದಿಯೂ ಜೋರಾಗಿದೆ. ಪೋಸ್ಟರ್ ವಾರ್, ಟ್ವಿಟ್ಟರ್ ವಾರ್, ಮಾತಿನ ಸಮರ ಎಲ್ಲವೂ ನಡೆಯುತ್ತಿದ್ದು ಸಧ್ಯಕ್ಕೆ ಪೋಸ್ಟರ್ ವಾರ್ ಚಾಲ್ತಿಯಲ್ಲಿದೆ.

ವರದಿ ಪ್ರಕಾರ, PhonePe ಕಂಪನಿಯು ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್‌ನೊಂದಿಗೆ ಕಾಂಗ್ರೆಸ್​ MPಯನ್ನು ಟ್ಯಾಗ್ ಮಾಡುವ ಮೂಲಕ ಎಚ್ಚರಿಕೆ ನೀಡಿದೆ. ಅವರು ಟ್ವೀಟ್ ಮಾಡಿ PhonePe ಲೋಗೋ ನಮ್ಮ ಕಂಪನಿಯ ನೋಂದಾಯಿತ ಟ್ರೇಡ್‌ಮಾರ್ಕ್ ಆಗಿದೆ. ಅದನ್ನು ದುರುಪಯೋಗ ಪಡಿಸಿಕೊಳ್ಳಲಾಗಿದೆ.

ಪೋಸ್ಟರ್‌ನಿಂದ ನಮ್ಮ ಲೋಗೋ ಮತ್ತು ಬ್ರ್ಯಾಂಡ್ ಬಣ್ಣವನ್ನು ತೆಗೆದುಹಾಕಲು ನಾವು ವಿನಮ್ರವಾಗಿ ವಿನಂತಿಸುತ್ತೇವೆ. PhonePe ತನ್ನ ಬ್ರ್ಯಾಂಡ್ ಲೋಗೋವನ್ನು ರಾಜಕೀಯ ಅಥವಾ ರಾಜಕೀಯೇತರ ಯಾವುದೇ ಮೂರನೇ ವ್ಯಕ್ತಿಯಿಂದ ಬಳಸುವುದನ್ನು ನಾವು ವಿರೋಧಿಸುತ್ತೇವೆ, ನಾವು ಯಾವುದೇ ರಾಜಕೀಯ ಪಕ್ಷದೊಂದಿಗೆ ಸಂಬಂಧ ಹೊಂದಿಲ್ಲ ಎಂದು ಬರೆದಿದೆ.

ಬಿಜೆಪಿಯೇ ಒಂದು ವಾರ ಮೊದಲು ಕಮಲ್​ ನಾಥ್ ವಿರುದ್ಧ ಪೋಸ್ಟರ್​ ಹಾಕಿತ್ತು, ಅವರೇ ಮೊದಲು ಈ ಪೋಸ್ಟರ್​ ವಾರ್ ಆರಂಭಿಸಿದವರು ಎಂದು ಕಾಂಗ್ರೆಸ್ ದೂರಿದೆ. ಆದರೆ ಆ ಪೋಸ್ಟರ್ ನಾವು ಹಾಕಿದ್ದಲ್ಲ ಅದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಬಿಜೆಪಿ ಪ್ರತಿಕ್ರಿಯಿಸಿದೆ.

lokesh

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago