BREAKING NEWS

ಕರ್ನಾಟಕದಂತೆ ಮಧ್ಯಪ್ರದೇಶದಲ್ಲಿ ಪೇಸಿಎಂ ಮಾದರಿಯ ತಂತ್ರ ಪ್ರಯೋಗಿಸಲು ಹೋಗಿ ಪೇಚಿಗೆ ಸಿಲುಕಿದ ಕಾಂಗ್ರೆಸ್​

ಮಧ್ಯಪ್ರದೇಶ : ಕರ್ನಾಟಕದ ವಿಧಾನಸಭೆ ಚುನಾವಣೆ ಸಮಯದಲ್ಲಿ ಆಗ ಮುಖ್ಯಮಂತ್ರಿಯಾಗಿದ್ದ ಬಸವರಾಜ್ ಬೊಮ್ಮಾಯಿ ಅವರ ವಿರುದ್ಧ ಕಾಂಗ್ರೆಸ್​ ಮಾಡಿದ್ದ ಪೇ ಸಿಎಂ ಅಭಿಯಾನದಂತೆ ಮಧ್ಯಪ್ರದೇಶದಲ್ಲೂ ಮಾಡಲು ಹೋಗಿ ಪೇಚಿಗೆ ಸಿಲುಕಿದೆ. ಕರ್ನಾಟಕದಲ್ಲಿ ಪೇಟಿಎಂ ಮಾದರಿಯಲ್ಲಿ ಪೇಸಿಎಂ ಎಂದು ಬರೆದು ಪೋಸ್ಟರ್​ಗಳನ್ನು ಅಂಟಿಸಲಾಗಿತ್ತು, ಮಧ್ಯಪ್ರದೇಶದಲ್ಲೂ ಸಿಎಂ ಶಿವರಾಜ್ ಸಿಂಗ್ ಅವರ ಪೋಸ್ಟರ್​ಗೆ ಫೋನ್ ಪೇ ಲೋಗೋ ಬಳಕೆ ಮಾಡಿ ಸಂಕಷ್ಟಕ್ಕೆ ಸಿಲುಕಿದೆ. ಅದರಲ್ಲಿ ಫೋನ್​ ಪೇ ಮಾದರಿಯನ್ನು ಬಳಕೆ ಮಾಡಿರುವ ಕಾರಣ ಫೋನ್​ ಪೇ ಸಂಸ್ಥೆಯು ಕಾಂಗ್ರೆಸ್​ಗೆ ಎಚ್ಚರಿಕೆ ನೀಡಿದೆ.

ತಮ್ಮ ಲೋಗೋವನ್ನು ದುರ್ಬಳಕೆ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದು, ಕಾನೂನು ಸಮರದ ಎಚ್ಚರಿಕೆ ನೀಡಿದೆ. ಮಧ್ಯಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ರಾಜಕೀಯ ಜಿದ್ದಾಜಿದ್ದಿಯೂ ಜೋರಾಗಿದೆ. ಪೋಸ್ಟರ್ ವಾರ್, ಟ್ವಿಟ್ಟರ್ ವಾರ್, ಮಾತಿನ ಸಮರ ಎಲ್ಲವೂ ನಡೆಯುತ್ತಿದ್ದು ಸಧ್ಯಕ್ಕೆ ಪೋಸ್ಟರ್ ವಾರ್ ಚಾಲ್ತಿಯಲ್ಲಿದೆ.

ವರದಿ ಪ್ರಕಾರ, PhonePe ಕಂಪನಿಯು ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್‌ನೊಂದಿಗೆ ಕಾಂಗ್ರೆಸ್​ MPಯನ್ನು ಟ್ಯಾಗ್ ಮಾಡುವ ಮೂಲಕ ಎಚ್ಚರಿಕೆ ನೀಡಿದೆ. ಅವರು ಟ್ವೀಟ್ ಮಾಡಿ PhonePe ಲೋಗೋ ನಮ್ಮ ಕಂಪನಿಯ ನೋಂದಾಯಿತ ಟ್ರೇಡ್‌ಮಾರ್ಕ್ ಆಗಿದೆ. ಅದನ್ನು ದುರುಪಯೋಗ ಪಡಿಸಿಕೊಳ್ಳಲಾಗಿದೆ.

ಪೋಸ್ಟರ್‌ನಿಂದ ನಮ್ಮ ಲೋಗೋ ಮತ್ತು ಬ್ರ್ಯಾಂಡ್ ಬಣ್ಣವನ್ನು ತೆಗೆದುಹಾಕಲು ನಾವು ವಿನಮ್ರವಾಗಿ ವಿನಂತಿಸುತ್ತೇವೆ. PhonePe ತನ್ನ ಬ್ರ್ಯಾಂಡ್ ಲೋಗೋವನ್ನು ರಾಜಕೀಯ ಅಥವಾ ರಾಜಕೀಯೇತರ ಯಾವುದೇ ಮೂರನೇ ವ್ಯಕ್ತಿಯಿಂದ ಬಳಸುವುದನ್ನು ನಾವು ವಿರೋಧಿಸುತ್ತೇವೆ, ನಾವು ಯಾವುದೇ ರಾಜಕೀಯ ಪಕ್ಷದೊಂದಿಗೆ ಸಂಬಂಧ ಹೊಂದಿಲ್ಲ ಎಂದು ಬರೆದಿದೆ.

ಬಿಜೆಪಿಯೇ ಒಂದು ವಾರ ಮೊದಲು ಕಮಲ್​ ನಾಥ್ ವಿರುದ್ಧ ಪೋಸ್ಟರ್​ ಹಾಕಿತ್ತು, ಅವರೇ ಮೊದಲು ಈ ಪೋಸ್ಟರ್​ ವಾರ್ ಆರಂಭಿಸಿದವರು ಎಂದು ಕಾಂಗ್ರೆಸ್ ದೂರಿದೆ. ಆದರೆ ಆ ಪೋಸ್ಟರ್ ನಾವು ಹಾಕಿದ್ದಲ್ಲ ಅದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಬಿಜೆಪಿ ಪ್ರತಿಕ್ರಿಯಿಸಿದೆ.

lokesh

Recent Posts

ರಾಜ್ಯಕ್ಕೆ ಮತ್ತೆ ಕಾವೇರಿ ಆಘಾತ ; ತಮಿಳುನಾಡಿಗೆ 9,000 ಕ್ಯುಸೆಕ್‌ ನೀರು ಹರಿಸಲು ಆದೇಶ

ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…

2 hours ago

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

4 hours ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

9 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

9 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

10 hours ago

ಅಧಿಕಾರಿಗಳಿಗೆ ಚೆಲ್ಲಾಟ; ಅಲೆಮಾರಿಗಳ ಅಲೆದಾಟ

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…

11 hours ago