BREAKING NEWS

ಕರ್ನಾಟಕದಂತೆ ಮಧ್ಯಪ್ರದೇಶದಲ್ಲಿ ಪೇಸಿಎಂ ಮಾದರಿಯ ತಂತ್ರ ಪ್ರಯೋಗಿಸಲು ಹೋಗಿ ಪೇಚಿಗೆ ಸಿಲುಕಿದ ಕಾಂಗ್ರೆಸ್​

ಮಧ್ಯಪ್ರದೇಶ : ಕರ್ನಾಟಕದ ವಿಧಾನಸಭೆ ಚುನಾವಣೆ ಸಮಯದಲ್ಲಿ ಆಗ ಮುಖ್ಯಮಂತ್ರಿಯಾಗಿದ್ದ ಬಸವರಾಜ್ ಬೊಮ್ಮಾಯಿ ಅವರ ವಿರುದ್ಧ ಕಾಂಗ್ರೆಸ್​ ಮಾಡಿದ್ದ ಪೇ ಸಿಎಂ ಅಭಿಯಾನದಂತೆ ಮಧ್ಯಪ್ರದೇಶದಲ್ಲೂ ಮಾಡಲು ಹೋಗಿ ಪೇಚಿಗೆ ಸಿಲುಕಿದೆ. ಕರ್ನಾಟಕದಲ್ಲಿ ಪೇಟಿಎಂ ಮಾದರಿಯಲ್ಲಿ ಪೇಸಿಎಂ ಎಂದು ಬರೆದು ಪೋಸ್ಟರ್​ಗಳನ್ನು ಅಂಟಿಸಲಾಗಿತ್ತು, ಮಧ್ಯಪ್ರದೇಶದಲ್ಲೂ ಸಿಎಂ ಶಿವರಾಜ್ ಸಿಂಗ್ ಅವರ ಪೋಸ್ಟರ್​ಗೆ ಫೋನ್ ಪೇ ಲೋಗೋ ಬಳಕೆ ಮಾಡಿ ಸಂಕಷ್ಟಕ್ಕೆ ಸಿಲುಕಿದೆ. ಅದರಲ್ಲಿ ಫೋನ್​ ಪೇ ಮಾದರಿಯನ್ನು ಬಳಕೆ ಮಾಡಿರುವ ಕಾರಣ ಫೋನ್​ ಪೇ ಸಂಸ್ಥೆಯು ಕಾಂಗ್ರೆಸ್​ಗೆ ಎಚ್ಚರಿಕೆ ನೀಡಿದೆ.

ತಮ್ಮ ಲೋಗೋವನ್ನು ದುರ್ಬಳಕೆ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದು, ಕಾನೂನು ಸಮರದ ಎಚ್ಚರಿಕೆ ನೀಡಿದೆ. ಮಧ್ಯಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ರಾಜಕೀಯ ಜಿದ್ದಾಜಿದ್ದಿಯೂ ಜೋರಾಗಿದೆ. ಪೋಸ್ಟರ್ ವಾರ್, ಟ್ವಿಟ್ಟರ್ ವಾರ್, ಮಾತಿನ ಸಮರ ಎಲ್ಲವೂ ನಡೆಯುತ್ತಿದ್ದು ಸಧ್ಯಕ್ಕೆ ಪೋಸ್ಟರ್ ವಾರ್ ಚಾಲ್ತಿಯಲ್ಲಿದೆ.

ವರದಿ ಪ್ರಕಾರ, PhonePe ಕಂಪನಿಯು ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್‌ನೊಂದಿಗೆ ಕಾಂಗ್ರೆಸ್​ MPಯನ್ನು ಟ್ಯಾಗ್ ಮಾಡುವ ಮೂಲಕ ಎಚ್ಚರಿಕೆ ನೀಡಿದೆ. ಅವರು ಟ್ವೀಟ್ ಮಾಡಿ PhonePe ಲೋಗೋ ನಮ್ಮ ಕಂಪನಿಯ ನೋಂದಾಯಿತ ಟ್ರೇಡ್‌ಮಾರ್ಕ್ ಆಗಿದೆ. ಅದನ್ನು ದುರುಪಯೋಗ ಪಡಿಸಿಕೊಳ್ಳಲಾಗಿದೆ.

ಪೋಸ್ಟರ್‌ನಿಂದ ನಮ್ಮ ಲೋಗೋ ಮತ್ತು ಬ್ರ್ಯಾಂಡ್ ಬಣ್ಣವನ್ನು ತೆಗೆದುಹಾಕಲು ನಾವು ವಿನಮ್ರವಾಗಿ ವಿನಂತಿಸುತ್ತೇವೆ. PhonePe ತನ್ನ ಬ್ರ್ಯಾಂಡ್ ಲೋಗೋವನ್ನು ರಾಜಕೀಯ ಅಥವಾ ರಾಜಕೀಯೇತರ ಯಾವುದೇ ಮೂರನೇ ವ್ಯಕ್ತಿಯಿಂದ ಬಳಸುವುದನ್ನು ನಾವು ವಿರೋಧಿಸುತ್ತೇವೆ, ನಾವು ಯಾವುದೇ ರಾಜಕೀಯ ಪಕ್ಷದೊಂದಿಗೆ ಸಂಬಂಧ ಹೊಂದಿಲ್ಲ ಎಂದು ಬರೆದಿದೆ.

ಬಿಜೆಪಿಯೇ ಒಂದು ವಾರ ಮೊದಲು ಕಮಲ್​ ನಾಥ್ ವಿರುದ್ಧ ಪೋಸ್ಟರ್​ ಹಾಕಿತ್ತು, ಅವರೇ ಮೊದಲು ಈ ಪೋಸ್ಟರ್​ ವಾರ್ ಆರಂಭಿಸಿದವರು ಎಂದು ಕಾಂಗ್ರೆಸ್ ದೂರಿದೆ. ಆದರೆ ಆ ಪೋಸ್ಟರ್ ನಾವು ಹಾಕಿದ್ದಲ್ಲ ಅದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಬಿಜೆಪಿ ಪ್ರತಿಕ್ರಿಯಿಸಿದೆ.

lokesh

Recent Posts

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

7 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

9 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

10 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

11 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

13 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

13 hours ago